
ನವದೆಹಲಿ(ಆ.01): ಮೇಕೆದಾಟಿನಲ್ಲಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟೆಯನ್ನು ವಿರೋಧಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹೇಳಿರುವುದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಯಾರಾದರೂ ಊಟ ಮಾಡಲಿ ಬಿಡಲಿ, ನಾವು ಮೇಕೆದಾಟು ಡ್ಯಾಂ ನಿರ್ಮಿಸುತ್ತೇವೆ’ ಎಂದು ಹೇಳಿದ್ದಾರೆ.
ಶನಿವಾರ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಣ್ಣಾಮಲೈ ಅವರ ಕೆಲಸ ಮಾಡುತ್ತಾರೆ. ಅದು ನಮಗೆ ಸಂಬಂಧಿಸಿದ್ದಲ್ಲ. ಅವರು ಉಪವಾಸ ಮಾಡುವುದಕ್ಕೂ ನನಗೂ ಸಂಬಂಧವಿಲ್ಲ. ಕರ್ನಾಟಕಕ್ಕೆ ಕಾವೇರಿ ನದಿ ನೀರಿನ ಮೇಲೆ ಎಲ್ಲಾ ಹಕ್ಕುಗಳಿವೆ. ನಾವು ನಿಶ್ಚಿತವಾಗಿ ಮೇಕೆದಾಟು ಯೋಜನೆ ಜಾರಿಗೊಳಿಸುತ್ತೇವೆ. ಅದಕ್ಕೆ ಬೇಕಾದ ಅನುಮತಿಗಳನ್ನೂ ಪಡೆದುಕೊಳ್ಳುತ್ತೇವೆ. ಯಾರಾದರೂ ಊಟ ಮಾಡಲಿ ಬಿಡಲಿ’ ಎಂದು ಹೇಳಿದರು.
ಮೇಕೆದಾಟು ವಿಷಯದಲ್ಲಿ ತಮಿಳುನಾಡು ಪರ : ಅಣ್ಣಾಮಲೈ
ಕರ್ನಾಟಕ ಸರ್ಕಾರ ಈಗಾಗಲೇ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಿ ಕೇಂದ್ರ ಸರ್ಕಾರದ ಅನುಮತಿಗಾಗಿ ಸಲ್ಲಿಸಿದೆ ಎಂದೂ ಅವರು ತಿಳಿಸಿದರು. ಮೇಕೆದಾಟು ಡ್ಯಾಂ ವಿರೋಧಿಸಿ ಆ.5ರಂದು ಒಂದು ದಿನದ ಉಪವಾಸ ಕೈಗೊಳ್ಳುವುದಾಗಿ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಇತ್ತೀಚೆಗಷ್ಟೇ ಹೇಳಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ