ಜ.12ರಿಂದ ಕೂಡಲ ಸಂಗಮದಲ್ಲಿ ಶರಣ ಮೇಳ, ಸಿಎಂ ಚಾಲನೆ

Published : Jan 07, 2023, 12:30 AM IST
ಜ.12ರಿಂದ ಕೂಡಲ ಸಂಗಮದಲ್ಲಿ ಶರಣ ಮೇಳ, ಸಿಎಂ ಚಾಲನೆ

ಸಾರಾಂಶ

ಸಚಿವ ಗೋವಿಂದ ಕಾರಜೋಳ ಅವರು ‘ಬಸವ ವಚನಾಮೃತ’ ಗ್ರಂಥ ಲೋಕಾರ್ಪಣೆಗೊಳಿಸಲಿದ್ದಾರೆ. ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಬಸವ ಧ್ವಜಾರೋಹಣ ನೆರವೇರಿಸುವರು. ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ‘ಜ್ಞಾನಾಮೃತ ಮಾತಾಜಿ’ ಗ್ರಂಥ ಬಿಡುಗಡೆಗೊಳಿಸಲಿದ್ದಾರೆ. 

ಬೆಂಗಳೂರು(ಜ.07):  ಕೂಡಲ ಸಂಗಮದಲ್ಲಿ ಜ.12 ರಿಂದ 14 ರವರೆಗೂ ಬಸವ ಧರ್ಮ ಪೀಠದಿಂದ 36ನೇ ಶರಣ ಮೇಳವನ್ನು ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಬಸವದಳದ 32ನೇ ಅಧಿವೇಶನವೂ ನಡೆಯಲಿದೆ ಎಂದು ಪೀಠದ ಉಪಾಧ್ಯಕ್ಷ ಸದ್ಗುರು ಮಹದೇಶ್ವರ ಸ್ವಾಮೀಜಿ ತಿಳಿಸಿದರು. 

ಜ.12 ರಂದು ಬೆಳಿಗ್ಗೆ 10.30ಕ್ಕೆ ರಾಷ್ಟ್ರೀಯ ಬಸವದಳದ 32ನೇ ಅಧಿವೇಶನವನ್ನು ಬಾಗಲಕೋಟೆ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ಉದ್ಘಾಟಿಸಲಿದ್ದಾರೆ. ಪಶುಸಂಗೋಪನೆ ಸಚಿವ ಪ್ರಭು ಚೌವಾಣ್‌ ಅವರು ಹೇಮರೆಡ್ಡಿ ಮಲ್ಲಮ್ಮ ಫಾಮ್‌ರ್‍ಹೌಸ್‌ ಲೋಕಾರ್ಪಣೆಗೊಳಿಸಲಿದ್ದಾರೆ. ಮಹಿಳಾಗೋಷ್ಠಿಯನ್ನು ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಉದ್ಘಾಟಿಸುವರು. ಜ.13 ರಂದು ಶರಣ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. 

ಕೂಡಲಸಂಗಮದಲ್ಲಿ ಜ.12ರಿಂದ 36ನೇ ಶರಣ ಮೇಳ ಆಯೋಜನೆ: ಮಾತೆ ಗಂಗಾದೇವಿ

ಸಚಿವ ಗೋವಿಂದ ಕಾರಜೋಳ ಅವರು ‘ಬಸವ ವಚನಾಮೃತ’ ಗ್ರಂಥ ಲೋಕಾರ್ಪಣೆಗೊಳಿಸಲಿದ್ದಾರೆ. ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಬಸವ ಧ್ವಜಾರೋಹಣ ನೆರವೇರಿಸುವರು. ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ‘ಜ್ಞಾನಾಮೃತ ಮಾತಾಜಿ’ ಗ್ರಂಥ ಬಿಡುಗಡೆಗೊಳಿಸಲಿದ್ದಾರೆ ಎಂದರು.

ತರಳಬಾಳು ಶಾಖಾಮಠ ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಹುಲಸೂರು ಗುರು ಬಸವೇಶ್ವರ ಸಂಸ್ಥಾನ ಮಠದ ಡಾ.ಶಿವಾನಂದ ಸ್ವಾಮೀಜಿ, ಸಾನಿಧ್ಯ ವಹಿಸಲಿದ್ದು ನಟ ವಿಜಯ ರಾಘವೇಂದ್ರ, ಶಾಸಕ ದೊಡ್ಡನಗೌಡ ಪಾಟೀಲ, ನಿವೃತ್ತ ಅಧಿಕಾರಿ ಎಸ್‌.ಎಂ.ಜಾಮದಾರ, ರಮಣಶ್ರೀ ಸಮೂಹದ ಅಧ್ಯಕ್ಷ ಎಸ್‌.ಷಡಕ್ಷರಿ ಮತ್ತಿತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!