ಕರ್ನಾಟಕದ ಜನತೆಗೆ ಹೊಸ ವರ್ಷದ ಶುಭಾಶಯ ತಳಿಸಿದ ಸಿಎಂ ಬೊಮ್ಮಾಯಿ

Published : Jan 01, 2023, 11:02 AM IST
ಕರ್ನಾಟಕದ ಜನತೆಗೆ ಹೊಸ ವರ್ಷದ ಶುಭಾಶಯ ತಳಿಸಿದ ಸಿಎಂ ಬೊಮ್ಮಾಯಿ

ಸಾರಾಂಶ

ನಾಡು ಇಂದೆಂದು ಕಾಣದಷ್ಟು ಅಭಿವೃದ್ಧಿ ಕಾಣಲಿ. ನಾಡಿನ ಸರ್ವ ಜನತೆಗೆ ಹೊಸ ವರ್ಷ ಸಂತೋಷ ತರಲಿ ಅಂತ ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

ಹುಬ್ಬಳ್ಳಿ(ಜ.01):  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನ ತಿಳಿಸಿದ್ದಾರೆ. ಇಂದು(ಭಾನುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡು ಇಂದೆಂದು ಕಾಣದಷ್ಟು ಅಭಿವೃದ್ಧಿ ಕಾಣಲಿ. ನಾಡಿನ ಸರ್ವ ಜನತೆಗೆ ಹೊಸ ವರ್ಷ ಸಂತೋಷ ತರಲಿ ಅಂತ ತಿಳಿಸಿದ್ದಾರೆ. 

ಮಹದಾಯಿ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ. ಗ್ರಿನ್ ಸಿಗ್ನಲ್ ಆದೇಶದಲ್ಲಿ ಕೆಳಗಡೆ ಸಹಿ ಇದೆ. ಕಾಂಗ್ರೆಸ್ ಯಾವ ಉದ್ದೇಶಕ್ಕೆ ಆರೋಪಿಸುತ್ತಿದೆ ಅಂತ ಗೊತ್ತಿಲ್ಲ. ಮಹದಾಯಿಗಾಗಿ ನಾವು ಹೋರಾಟ ಮಾಡಿದ್ವಿ,   ಅವರು ಹೋರಾಟ ಮಾಡಿದ್ರು, ಈಗ ಆ ಹೋರಾಟ ತಾರ್ಕಿಕ ಜಯ ಸಿಕ್ಕಿದೆ. 20-25 ವರ್ಷಗಳ ಹೋರಾಟಕ್ಕೆ ಫಲ ಸಿಕ್ಕಿದೆ. ಇಂತಹ ಸಂದರ್ಭಗಳಲ್ಲಿ ಲೋಪದೋಷ ಹುಡುಕುವುದು ಅವರ ಮನಸ್ಥಿತಿ ಸೂಚಿಸುತ್ತೆದೆ. ಅವರ ಟೀಕೆ ಟಿಪ್ಪಣಿಗಳ ಬಗ್ಗೆ ನಾನು ತಲೆಕಡೆಸಿಕೊಳ್ಳುವುದಿಲ್ಲ. ಡಿಪಿಆರ್ ಆಗಿದೆ- ಎಂಓಎಫ್ ಕ್ಲಿಯರೆನ್ಸ್ ತೆಗೆದುಕೊಂಡು ಟೆಂಡರ್ ಕರೆದು ಕಾಮಗಾರಿ ಆರಂಭಿಸುತ್ತೇವೆ ಅಂತ ಹೇಳಿದ್ದಾರೆ. 

ಮಹದಾಯಿ: 4 ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ

ಪಂಚಮಸಾಲಿ- ಒಕ್ಕಲಿಗ ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಸಂವಿಧಾನಾತ್ಮಕವಾಗಿ ಯಾವುದೇ ತೊಡಕು ಆಗಲ್ಲ. ಇದು‌ ಮಧ್ಯಂತರ ವರದಿ ಇದೆ, ಅಂತಿಮ ಆದೇಶದಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಇದರಲ್ಲಿ ನಮ್ಮ ಸರ್ಕಾರದ ಉದ್ದೇಶ ಹೇಳಿದ್ದೇವೆ. ಅಂತಿಮ ವರದಿಯಲ್ಲಿ ಅಂಕಿ ಅಂಶಗಳ ಮಾಹಿತಿಯನ್ನ ನೀಡುತ್ತೇವೆ. ಮೀಸಲಾತಿ ಜಾರಿ ವಿಚಾರದಲ್ಲಿ ಸಂಬಂಧ ಪಟ್ಟವರ ಜೊತೆ ಚರ್ಚಿಸಲಾಗುವುದು. ಯಾವುದೇ ಕಾರಣಕ್ಕೂ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಕೆಲ ವರ್ಗದ ಜನರಿಗೆ ಶೈಕ್ಷಣಿಕ- ಉದ್ಯೋಗದಲ್ಲಿ ಹಿನ್ನಡೆಯಾಗಿದ್ದು ನಿಜ, ಅವರಿಗೆ ನ್ಯಾಯಕೊಡುವ ನಿಟ್ಟಿನಲ್ಲಿ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಇದಕ್ಕೆ ಸ್ಪಷ್ಟೀಕರಣ ಬೇಕಾದ್ರೆ ಕೊಡುತ್ತೇವೆ. ಇದರಲ್ಲಿ ಯಾರಿಗೂ ಅನ್ಯಾಯ ಮಾಡುವ ಪ್ರಶ್ನೆಯೇ ಇಲ್ಲ.  ವಿರೋಧ ಪಕ್ಷದವರು ತಾವು ಅಧಿಕಾರದಲ್ಲಿ ಇದ್ದಾಗ ಈ ಬೇಡಿಕೆ ಈಡೇರಿಸಲು ಆಗಲಿಲ್ಲ. ಈಗ ನಾವು ಮಾಡುತ್ತಿರೋದ್ರಿಂದ ಸಮಸ್ಯೆಯಾಗಿದೆ ಅಂತ ವಿಪಕ್ಷಗಳ ವಿರುದ್ಧ ಸಿಎಂ ಬೊಮ್ಮಾಯಿ ಹರಿಹಾಯ್ದಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌