ಹೂಡಿಕೆಗೆ ಕರ್ನಾಟಕ ಸೂಕ್ತ ಸ್ಥಳ: ಅಮೆರಿಕ ಕಂಪನಿಗಳಿಗೆ ಸಿಎಂ ಆಹ್ವಾನ

Kannadaprabha News   | Asianet News
Published : Sep 02, 2020, 08:57 AM IST
ಹೂಡಿಕೆಗೆ ಕರ್ನಾಟಕ ಸೂಕ್ತ ಸ್ಥಳ: ಅಮೆರಿಕ ಕಂಪನಿಗಳಿಗೆ ಸಿಎಂ ಆಹ್ವಾನ

ಸಾರಾಂಶ

ಅಮೆರಿಕ ಕಂಪನಿಗಳಿಗೆ ಮನವರಿಕೆ ಮಾಡಿಕೊಟ್ಟ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ| ಯುಎಸ್‌-ಇಂಡಿಯಾ ಬಿಸಿನೆಸ್‌ ಕೌನ್ಸಿಲ್‌ ವೀಡಿಯೋ ಸಂವಾದ| ರಾಜ್ಯದ ಆರ್ಥಿಕ ಮತ್ತು ಕೈಗಾರಿಕಾ ಅಭಿವೃದ್ಧಿ ನಮ್ಮ ಸರ್ಕಾರ ಮೊದಲ ಆದ್ಯತೆ| ಅಮೆರಿಕ ಮತ್ತು ಭಾರತ ಪರಸ್ಪರ ಕೈ ಜೋಡಿಸುವ ಮೂಲಕ ಉತ್ತಮ ಸಹಭಾಗಿತ್ವ ಸಾಧಿಸಬಹುದು|

ಬೆಂಗಳೂರು(ಸೆ.02): ಜಾಗತಿಕ ಮಟ್ಟದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ವಾಣಿಜ್ಯ ಸಂಬಂಧವನ್ನು ಗಟ್ಟಿಗೊಳಿಸುವಲ್ಲಿ ಕರ್ನಾಟಕ ಪ್ರಮುಖ ಪಾತ್ರ ವಹಿಸಲಿದ್ದು, ರಾಜ್ಯದಲ್ಲಿ ಹೂಡಿಕೆ ಮಾಡಲು ಆದ್ಯತೆ ನೀಡುವಂತೆ ಅಮೆರಿಕದ ಕಂಪನಿಗಳಿಗೆ ಮುಖ್ಯಮಂತ್ರಿಬಿ.ಎಸ್‌.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಯುಎಸ್‌-ಇಂಡಿಯಾ ಬಿಸಿನೆಸ್‌ ಕೌನ್ಸಿಲ್‌ ಮಂಗಳವಾರ ಆಯೋಜಿಸಿದ್ದ ವೀಡಿಯೋ ಕಾನ್ಫರೆನ್ಸ್‌ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಅಮೆರಿಕ ಕಂಪನಿಗಳ ನೇರ ಹೂಡಿಕೆಗೆ ಎಲ್ಲಾ ರೀತಿಯ ಸಹಕಾರ ಒದಗಿಸುವುದಾಗಿ ಭರವಸೆ ನೀಡಿದರು. ಹೂಡಿಕೆಗೆ ಕರ್ನಾಟಕ ಸೂಕ್ತ ಸ್ಥಳ ಹೇಗೆ ಮತ್ತು ಅದಕ್ಕಾಗಿ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ಅಮೆರಿಕದ ಉದ್ದಿಮೆದಾರರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಸಿಎಂ ಓದಿದ ಶಾಲೆಯಲ್ಲಿ ಮಕ್ಕಳೇ ಇಲ್ಲ..! ಮುಚ್ಚುವ ಹಂತದಲ್ಲಿ ವಿದ್ಯಾಮಂದಿರ 

ಕೊರೋನಾ ಆಘಾತದ ಜತೆಗೆ ಅಮೆರಿಕ ಮತ್ತು ಚೀನಾ ನಡುವಿನ ಆರ್ಥಿಕ ಸಂಬಂಧದ ಮೇಲೆ ಕರಿನೆರಳು ಆವರಿಸಿರುವ ಈ ವೇಳೆ ಭಾರತ ಮತ್ತು ಅಮೆರಿಕ ನಡುವಿನ ವಾಣಿಜ್ಯ ಸಂಬಂಧವನ್ನು ಮತ್ತಷ್ಟುಬಲಪಡಿಸುವ ಅವಕಾಶ ಹೆಚ್ಚಿದೆ. ಈ ಕಾರಣದಿಂದಾಗಿ ಅಮೆರಿಕದ ಕಂಪನಿಗಳಿಗೆ ಭಾರತ ನೆಚ್ಚಿನ ತಾಣವಾಗಲಿದೆ. ಅದರಲ್ಲಿಯೂ ಕೈಗಾರಿಕಾ ಸ್ನೇಹಿ ವಾತಾವರಣ ಇರುವ ಕರ್ನಾಟಕದ ಬಗ್ಗೆ ಹೆಚ್ಚಿನ ವಿಶ್ವಾಸ ಇದೆ. ಲಾಕ್‌ಡೌನ್‌ ನಂತರ ಆರ್ಥಿಕ ಪುನಶ್ಚೇತನಕ್ಕೆ ರಾಜ್ಯ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ವಾಣಿಜ್ಯ ಚಟುವಟಿಕೆಗಳಿಗೆ ಪೂರಕ ವಾತಾವರಣ ಕಲ್ಪಿಸಲಾಗಿದೆ ಎಂದರು.

ಕಳೆದೆರಡು ದಶಕಗಳಲ್ಲಿ ಉಭಯ ರಾಷ್ಟ್ರಗಳ ನಡುವಿನ ವಹಿವಾಟು ಗಣನೀಯ ಮಟ್ಟದಲ್ಲಿ ಏರಿಕೆ ಕಂಡಿದ್ದು, 2000ನೇ ಇಸವಿಯಲ್ಲಿ 19 ಶತಕೋಟಿ ಡಾಲರ್‌ನಷ್ಟಿದ್ದ ಪ್ರಮಾನ 2020ರ ವೇಳೆಗೆ 149 ಶತಕೋಟಿ ಡಾಲರ್‌ಗೆ ತಲುಪಿದೆ. ಉದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ವಲಯದಲ್ಲಿ ಪ್ರಬಲ ಸಾಮರ್ಥ್ಯ ಹೊಂದಿರುವ ರಾಜ್ಯ, ಜೈವಿಕ ತಂತ್ರಜ್ಞಾನ, ಆರೋಗ್ಯ ರಕ್ಷಣೆ, ಸೆಮಿಕಂಡಕ್ಟರ್‌, ಕೃಷಿ, ವಾಹನ ಮುಂತಾದ ನಾನಾ ಕ್ಷೇತ್ರಗಳನ್ನು ಉತ್ತೇಜಿಸಲು ಉದ್ಯಮ ನಿರ್ದಿಷ್ಟನೀತಿ ಜಾರಿ ತರುವ ಮೂಲಕ ಉದ್ಯಮ ಸ್ನೇಹಿ ಆಡಳಿತ ವ್ಯವಸ್ಥೆ ರೂಪಿಸಿದೆ. ಅಮೆರಿಕದ ಬಂಡವಾಳ, ಆವಿಷ್ಕಾರ ಮತ್ತು ನವೀನ ತಂತ್ರಜ್ಞಾನದ ಜತೆಗೆ ನಮ್ಮ ನುರಿತ ಮಾನವ ಸಂಪನ್ಮೂಲ ಮತ್ತು ನಮ್ಮಲ್ಲಿ ಲಭ್ಯ ಇರುವ ಹೂಡಿಕೆ ಅವಕಾಶಗಳ ಸಂಯೋಜನೆಯಿಂದ ಕರ್ನಾಟಕ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟುಬಲಪಡಿಸಬಹುದು. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಆರ್ಥಿಕ ಮತ್ತು ಕೈಗಾರಿಕಾ ಅಭಿವೃದ್ಧಿ ನಮ್ಮ ಸರ್ಕಾರ ಮೊದಲ ಆದ್ಯತೆ. ಅಮೆರಿಕ ಮತ್ತು ಭಾರತ ಪರಸ್ಪರ ಕೈ ಜೋಡಿಸುವ ಮೂಲಕ ಉತ್ತಮ ಸಹಭಾಗಿತ್ವ ಸಾಧಿಸಬಹುದು ಎಂದು ಮುಖ್ಯಮಂತ್ರಿಗಳು ಹೇಳಿದರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತ, ಕೈಗಾರಿಕಾಭಿವೃದ್ಧಿ ಆಯುಕ್ತೆ ಗುಂಜನ್‌ ಕೃಷ್ಣ, ಅಮೆರಿಕದಲ್ಲಿನ ಭಾರತದ ರಾಯಭಾರಿ ತರಣ್‌ಜೀತ್‌ ಸಿಂಗ್‌ ಸಂಧು, ಯುಎಸ್‌ಐಬಿಸಿ ಅಧ್ಯಕ್ಷೆ ನಿಶಾ ಬಿಸ್ವಾಲ್‌ ಸೇರಿದಂತೆ ಕಂಪನಿಗಳ ಮುಖ್ಯಸ್ಥರು ಭಾಗಿಯಾಗಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!
ಕೇಂದ್ರದ ಒಪ್ಪಿಗೆ ಸಿಕ್ರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಪೂರ್ಣಕ್ಕೆ ಬದ್ಧ: ಡಿ.ಕೆ.ಶಿವಕುಮಾರ್‌