ಔಷಧಿ ಸಿಗದೆ ನರಳಾಟ, ಟಿಕ್‌ಟಾಕ್‌ನಲ್ಲಿ ಮನವಿ: ಮಾನವೀಯತೆ ಮೆರೆದ ಸಿಎಂ !

Published : Apr 11, 2020, 10:52 AM ISTUpdated : Apr 11, 2020, 11:42 AM IST
ಔಷಧಿ ಸಿಗದೆ ನರಳಾಟ, ಟಿಕ್‌ಟಾಕ್‌ನಲ್ಲಿ ಮನವಿ: ಮಾನವೀಯತೆ ಮೆರೆದ ಸಿಎಂ !

ಸಾರಾಂಶ

ನೆರವು ನೀಡಲು ಟಿಕ್‌ಟಾಕ್‌ನಲ್ಲಿ ಸಿಎಂಗೆ ಮನವಿ| ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ| ನೆರವು ನೀಡಿ ಮಾನವೀಯತೆ ಮೆರೆದ ಸಿಎಂ

ಬೆಂಗಳೂರು(ಏ.11): ನನ್ನ ತಾಯಿಗೆ ಅನಾರೋಗ್ಯವಿದ್ದು, ಲಾಕ್‌ಡೌನ್‌ನಿಂದಾಗಿ ಔಷಧಿ, ಮಾತ್ರೆ ಎಲ್ಲಿಯೂ ಸಿಗುತ್ತಿಲ್ಲ. ಹೀಗಾಗಿ ನನ್ನ ತಾಯಿಗೆ ಔಷಧಿ ತಲುಪಿಸಿ ಎಂದು ಯುವತಿಯೊಬ್ಬಳು ಟಿಕ್‌ಟಾಕ್‌ನಲ್ಲಿ ವಿಡಿಯೋ ಮಾಡಿ ಸಿಎಂಗೆ ಮನವಿ ಮಾಡಿದ್ದಳು. ಈ ವಿಡಿಯೋ ಸುವರ್ಣ ನ್ಯೂಸ್‌ನಲ್ಲಿ ಪ್ರಸಾರವಾಗಿ, ಅದು ಮುಖ್ಯಮಂತ್ರಿಗಳ ಗಮನಕ್ಕೂ ಬಂದು ಅನಾರೋಗ್ಯಕ್ಕೊಳಗಾದ ಮಹಿಳೆಗೆ ಔಷಧಿ ಹಾಗೂ ಮಾತ್ರೆಗಳು ದೊರೆತ ಘಟನೆ ಶುಕ್ರವಾರ ನಡೆದಿದೆ.
"

ಜಿಲ್ಲೆಯ ರಾಮದುರ್ಗ ತಾಲೂಕಿನ ನರಸಾಪುರ ಗ್ರಾಮದ ಪವಿತ್ರಾ ಟಿಕ್‌ಟಾಕ್‌ ಮೂಲಕ ಮನವಿ ಮಾಡಿಕೊಂಡ ಯುವತಿ. ಪವಿತ್ರಾಳ ತಾಯಿ ಶೇಖವ್ವ ಅರಭಾಂವಿ ಹಲವು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಎಲ್ಲಿಯೂ ಔಷಧ ಸಿಕ್ಕಿರಲಿಲ್ಲ. ಹೀಗಾಗಿ ಪವಿತ್ರಾ ಕೊನೆಗೆ ಟಿಕ್‌ಟಾಕ್‌ ಮೂಲಕ ಸಿಎಂಗೆ ಮನವಿ ಮಾಡಿದ್ದಳು.

ಬ್ರಿಟನ್‌ ಫುಟ್ಬಾಲ್‌ ದಿಗ್ಗಜ ಹಂಟರ್‌ಗೆ ಕೊರೋನಾ ಸೋಂಕು ಪತ್ತೆ

ತಕ್ಷಣ ಮುಖ್ಯಮಂತ್ರಿಗಳ ಕಚೇರಿಯಿಂದ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಫೋನ್‌ ಬಂದಿದೆ. ಈ ವೇಳೆ ರಾಮದುರ್ಗ ತಾಲೂಕಿನ ನರಸಾಪುರ ಗ್ರಾಮದಲ್ಲಿರುವ ಶೇಖವ್ವಳಿಗೆ ಮಾತ್ರೆಗಳನ್ನು ಪೂರೈಸುವಂತೆ ತಿಳಿಸಿದ್ದರು. ಇದರಿಂದ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಬೆಳಗಾವಿ ತಹಸೀಲ್ದಾರ್‌ ಮೂಲಕ ಶೇಖವ್ವಳಿಗೆ ಔಷಧಿ ಪೂರೈಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ