ಮೀಸಲಾತಿಗಾಗಿ ಹೋರಾಟ: ಸಮುದಾಯ, ಸ್ವಾಮೀಜಿಗಳಿಗೆ ಹೊಸ ಭರವಸೆ ಕೊಟ್ಟ ಸಿಎಂ

Published : Feb 14, 2021, 04:02 PM ISTUpdated : Feb 14, 2021, 05:58 PM IST
ಮೀಸಲಾತಿಗಾಗಿ ಹೋರಾಟ: ಸಮುದಾಯ, ಸ್ವಾಮೀಜಿಗಳಿಗೆ ಹೊಸ ಭರವಸೆ ಕೊಟ್ಟ ಸಿಎಂ

ಸಾರಾಂಶ

ವಿವಿಧ ಸಮುದಾಯಗಳು ಮೀಸಲಾತಿಗಾಗಿ ನಡೆಸುತ್ತಿರುವ ಪ್ರತಿಭನಟನೆ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ದಾವಣಗೆರೆ, (ಫೆ.14): ಮೀಸಲಾತಿಗಾಗಿ ವಿವಿಧ ಸಮುದಾಯದ ಸ್ವಾಮಿಗಳು‌ ನಡೆಸುತ್ತಿರುವ ಹೋರಾಟದ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದು, ಸ್ವಾಮೀಜಿ ಹಾಗೂ ಸಮುದಾಯದ ಜನರಿಗೆ ಹೊಸ ಭರವಸೆಯನ್ನು ನೀಡಿದ್ದಾರೆ.

"

ಹೊನ್ನಾಳಿ ತಾಲೂಕಿನ ಸೂರಗೊಂಡನಕೊಪ್ಪದ ಭಾಯಾಗಡ್ ದಲ್ಲಿ ಭಾನುವಾರ ನಡೆದ ಸಂತ ಸೇವಾಲಾಲ್ ಅವರ 282ನೇ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಸಿಎಂ, ಮೀಸಲಾತಿಗಾಗಿ ವಿವಿಧ ಸಮುದಾಯದ ಸ್ವಾಮಿಗಳು‌ ನಡೆಸುತ್ತಿರುವ ಹೋರಾಟ ನ್ಯಾಯಯುತವಾಗಿದ್ದು, ಯಾವ ರೀತಿ ಅದನ್ನು ಈಡೇರಿಸಬೇಕು ಎಂಬುದಷ್ಟೆ ಈಗ ಚರ್ಚೆ ಮಾಡಬೇಕಾಗಿದೆ ಎಂದು ಹೇಳಿದರು.

ಮೀಸಲಾತಿ ಘೋಷಣೆಗೆ ಡೆಡ್‌ಲೈನ್, ಪಂಚಮಸಾಲಿ ಶ್ರೀಗಳ ಎಚ್ಚರಿಕೆಗೆ ಮಣಿಯುತ್ತಾರಾ ಬಿಎಸ್‌ವೈ.?

ವೀರಶೈವ ಲಿಂಗಾಯತ, ವಾಲ್ಮೀಕಿ ಸೇರಿದಂತೆ ಹೋರಾಟ ನಿರತ ಎಲ್ಲಾ ಸಮಾಜದ ಸ್ವಾಮೀಜಿಗಳ ಬೇಡಿಕೆಯನ್ನು ಕಾನೂನು ಚೌಕಟ್ಟಿನಲ್ಲಿ ಈಡೇರಿಸಲು ಕ್ರಮ ವಹಿಸಲಾಗುವುರು ಭರವಸೆ ನೀಡಿದರು.

ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಈ ವಿಚಾರವಾಗಿ ಯಾವ ಸ್ವಾಮೀಜಿಯವರಿಗೂ ಆತಂಕ, ಸಂಶಯ ಬೇಡ ಎಂದರು.

ಎಸ್‌ಟಿ ಬೇಕೆಂದು ಕುರುಬ ಸಮುದಾಯ, 2A ಮೀಸಲಾತಿಗಾಗಿ ಪಂಚಮಸಾಲಿ, ಮೀಸಲಾತಿ ಹೆಚ್ಚಿಸುವಂತೆ ವಾಲ್ಮೀಕಿ ಸಮುದಾಯ ಹೋರಾಟ ಮಾಡುತ್ತಿದ್ದಾರೆ. ಆದ್ರೆ, ಮೀಸಲಾತಿ ಯಾರಿಗೆ ಸಿಗುತ್ತೋ? ಯಾರಿಗಿಲ್ಲೋ ಎನ್ನುವುದು ಕಾದು ನೋಡಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Raichur Utsava 2026: ರಾಯಚೂರು ಉತ್ಸವದಲ್ಲಿ ಗ್ಯಾರೆಂಟಿ ಸಮಾವೇಶ; ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾದ ಕೃಷಿಮೇಳ!
ಸದನದಲ್ಲಿ ಶಾಸಕರ ಜಟಾಪಟಿ: ಬಗೆಹರಿಸಿಕೊಂಡು ಹೋಗುವುದೇ ಸದನದ ಸಂಸ್ಕೃತಿ, ಶಿವಲಿಂಗೇಗೌಡರ ಬಗ್ಗೆ ಸ್ಪೀಕರ್ ಹೇಳಿದ್ದನು?