ಸಚಿವರ ಮುಂದೆ ಅಳಲು ತೋಡಿಕೊಂಡ ಸಿಎಂ: ಇದು ಕ್ಯಾಬಿನೆಟ್ ಸಭೆಯ ಇನ್‍ಸೈಡ್ ಸ್ಟೋರಿ

Published : Apr 09, 2020, 03:30 PM ISTUpdated : Apr 09, 2020, 05:04 PM IST
ಸಚಿವರ ಮುಂದೆ ಅಳಲು ತೋಡಿಕೊಂಡ ಸಿಎಂ: ಇದು ಕ್ಯಾಬಿನೆಟ್ ಸಭೆಯ ಇನ್‍ಸೈಡ್ ಸ್ಟೋರಿ

ಸಾರಾಂಶ

ಕೊರೋನಾ ವೈರಸ್ ಮಾಹಾಮಾರಿ ಸಂಬಂಧ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಆದ್ರೆ, ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಚಿವರ ಮುಂದೆ ಅಳಲು ತೋಡಿಕೊಂಡಿದ್ದಾರೆ. 

ಬೆಂಗಳೂರು, (ಏ.09): ಇಂದು (ಗುರುವಾರ) ನಡೆದ ತುರ್ತು ಕ್ಯಾಬಿನೆಟ್ ಸಭೆಯಲ್ಲಿ ಸಚಿವರುಗಳ ಮುಂದೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಮನದಲ್ಲಿದ್ದ ಅಳಲನ್ನು ಬಿಚ್ಚಿಟ್ಟಿದ್ದಾರೆ.
"
ನಾವು ಅಂದುಕೊಂಡಂತೆ ಇಲ್ಲ. ಪರಿಸ್ಥಿತಿ ಹದಗೆಡುತ್ತಿದೆ. ಲಾಕ್ ಡೌನ್ ನಿಂದ ಇನ್ನಷ್ಟು ಆರ್ಥಿಕ ಪರಿಸ್ಥಿತಿ ಹದಗೆಡಲಿದೆ. ಒಂದೆಡೆ ವೈರಸ್ ಇನ್ನೊಂದಡೆ ಆರ್ಥಿಕ ಪರಿಸ್ಥಿತಿ ಎರಡನ್ನ ಎದುರಿಸೋದು ದೊಡ್ಡ ಸವಾಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಣೆಗೆ ಸಿದ್ಧ: ಬಿಎಸ್‌ವೈ

ನಾವು ಅಂದುಕೊಂಡಂತೆ ಪರಿಸ್ಥಿತಿ ಇಲ್ಲ, ಇರಲ್ಲ. ನಾನು ಅಧಿಕಾರಕ್ಕೆ ಬಂದಾಗಲೆಲ್ಲ ನನಗೆ ಸವಾಲುಗಳು ಜಾಸ್ತಿ. ಇದನ್ನು ಎದುರಿಸಲು ನೀವೆಲ್ಲ ಸಹಕರಿಸಬೇಕು ಎಂದು ಸಚಿವರಿಗೆ ಸಿಎಂ ಮನವಿ ಮಾಡಿಕೊಂಡಿದ್ದಾರೆ.
"

ಏಪ್ರಿಲ್ 30ರ ತನಕ ರಾಜ್ಯವನ್ನೇ ಸಂಪೂರ್ಣವಾಗಿ ಲಾಕ್ ಡೌನ್ ಮಾಡಿ ಎಂದ ಕೆಲ ಸಚಿವರು ಅಭಿಪ್ರಾಯ ವ್ಯಕ್ತೊಡಿಸಿದರು. ಇನ್ನು ಕೆಲವರು 14 ಜಿಲ್ಲೆಗಳನ್ನು ಮಾತ್ರ ಏಪ್ರಿಲ್ 30ರ ತನಕ‌ ಲಾಕ್ ಡೌನ್ ಮಾಡಿ, ಉಳಿದ ಕಡೆ ಸಡಿಲಗೊಳಿಸಿ ಎಂದ ಕೆಲ ಸಚಿವರು ವ್ಯಕ್ತಪಡಿಸಿದ್ದಾರೆ. 

ಅಂತಿಮವಾಗಿ ನಾಳೆ ಪ್ರಧಾನಿ  ಜತೆ ಚರ್ಚೆ ಮಾಡಿ ಕನಿಷ್ಠ 14ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಸುವುದಾಗಿ ಸಿಎಂ, ಸಭೆಯಲ್ಲಿ ತಿಳಿಸಿದ್ದಾರೆ.

ಒಟ್ಟಿನಲ್ಲಿ ಯಡಿಯೂರಪ್ಪ ಸಿಎಂ ಇರುವಾಗಲೇ ರಾಜ್ಯದಲ್ಲಿ ಒಂದಲ್ಲ ಒಂದು ಸಮಸ್ಯೆಗಳು ಎದುರಾಗುತ್ತಲೇ ಇವೆ. ಕೊರೋನಾ ವೈರಸ್‌ ಬರುವ ಮುನ್ನ ರಾಜ್ಯದಲ್ಲಿ ಪ್ರವಾಹ ಆಗಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ