ಕರ್ನಾಟಕಕ್ಕೆ ದೊರೆಯುತ್ತಿದ್ದ ರೆಮ್​ಡೆಸಿವಿರ್, ಆಕ್ಸಿಜನ್ ಪೂರೈಕೆ ಹೆಚ್ಚಳ: ಮೋದಿಗೆ ಸಿಎಂ ಧನ್ಯವಾದ

By Suvarna NewsFirst Published Apr 24, 2021, 10:36 PM IST
Highlights

ಕೇಂದ್ರ ಸರ್ಕಾರಕ್ಕೆ ರಾಜ್ಯಕ್ಕೆ ನೀಡುತ್ತಿದ್ದ ರೆಮ್​ಡೆಸಿವಿರ್ ಔಷಧಿ ಮತ್ತು ಆಕ್ಸಿಜನ್ ಪ್ರಮಾಣವನ್ನ ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಧನ್ಯವಾದ ತಿಳಿಸಿದ್ದಾರೆ.

ಬೆಂಗಳೂರು, (ಏ.24): ಕರ್ನಾಟಕಕ್ಕೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ರೆಮ್​ಡೆಸಿವಿರ್ ಔಷಧ ಮತ್ತು ಆಕ್ಸಿಜನ್ ಪೂರೈಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. 

ಈವರೆಗೆ ಪ್ರತಿದಿನ ಪೂರೈಕೆಯಾಗುತ್ತಿದ್ದ 50 ಸಾವಿರ ರೆಮ್​ಡೆಸಿವಿರ್ ಔಷಧವನ್ನು 1,20,000ಕ್ಕೆ ಏರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಇದು ಏಪ್ರಿಲ್ 27ರವರೆಗೂ ಮುಂದುವರೆಯಲಿದೆ. ಜತೆಗೆ ಈವರೆಗೆ ಪ್ರತಿದಿನ ಕರ್ನಾಟಕಕ್ಕೆ ದೊರೆಯುತ್ತಿದ್ದ 300 ಮೆಟ್ರಿಕ್ ಟನ್ ವೈದ್ಯಕೀಯ ಆಮ್ಲಜನಕದಪ್ರಮಾಣವೂ ಹೆಚ್ಚಳವಾಗಲಿದ್ದು ಇನ್ನುಮುಂದೆ 800 ಮೆಟ್ರಿಕ್ ಟನ್​ ದೊರೆಯಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ರಾಜ್ಯದಲ್ಲಿ ಆಕ್ಸಿಜನ್​​ ಕೊರತೆ: ಅನುಮಾನ ವ್ಯಕ್ತಪಡಿಸಿದ ಅಶ್ವತ್ಥನಾರಾಯಣ

ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಟ್ವೀಟ್‌ ಮೂಲಕ ಧನ್ಯವಾದ ತಿಳಿಸಿದ ಸಿಎಂ ಬಿಎಸ್‌ವೈ, ರೆಮ್​ಡೆಸಿವಿರ್ ಮತ್ತು ಆಕ್ಸಿಜನ್ ಪ್ರಮಾಣವನ್ನ ಹೆಚ್ಚಿಸಿದ್ದರಿಂದ ನಮ್ಮ ಕೊರೊನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ಸಿಕ್ಕಂತಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರಿಗೆ ಧನ್ಯವಾದ ಎಂದಿದ್ದಾರೆ.

I thank PM , Home Min & Union Min for increasing Karnataka's allocation of Remdesivir fm 50,000 to 1,22,000 till Apr 30 & daily oxygen allocation fm existing 300 MT to 800 MT as per my request. This will strengthen our fight against Covid19

— B.S. Yediyurappa (@BSYBJP)
click me!