ಸಾರಿಗೆ ನೌಕರರ ಮುಷ್ಕರ: ಖಡಕ್ ಎಚ್ಚರಿಕೆ ಕೊಟ್ಟ ಸಿಎಂ

Published : Apr 11, 2021, 07:15 PM IST
ಸಾರಿಗೆ ನೌಕರರ ಮುಷ್ಕರ: ಖಡಕ್ ಎಚ್ಚರಿಕೆ ಕೊಟ್ಟ ಸಿಎಂ

ಸಾರಾಂಶ

ಆರನೇ ವೇತನಕ್ಕಾಗಿ ರಾಜ್ಯ ಸಾರಿಗೆ ನೌಕರರು ಧರಣಿ ನಡೆಸುತ್ತಿದ್ದಾರೆ. ಆದ್ರೆ, ಇತ್ತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಧರಣಿ ನಿತರ ನೌಕರರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ರಾಯಚೂರು, (ಏ.11):ರಾಜ್ಯ ಸಾರಿಗೆ ನೌಕರರು ಕೂಡಲೇ ಕರ್ತವ್ಯಕ್ಕೆ ಹಾಜರಾಗದಿದ್ದರೆ ವೇತನ ಕಡಿತ ಮಾಡುವುದರ ಜತೆಗೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದರು.

ಮಸ್ಕಿ ಉಪಚುನಾವಣೆ ಪ್ರಚಾರಕ್ಕೆ ಬಂದಿರುವ ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಷ್ಕರಕ್ಕೆ ಸಂಬಂಧಿಸಿ ಯಾರನ್ನೂ ಮಾತುಕತೆಗೆ ಕರೆಯವುದಿಲ್ಲ. ಈ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ನೌಕರರು ಗೌರವದಿಂದ ಕೆಲಸಕ್ಕೆ ಹಾಜರಾಬೇಕು. ಸಾರಿಗೆ ವ್ಯವಸ್ಥೆಯಿಂದ ಮುಂದಾಗುವ ಅನಾಹುತಗಳಿಗೆ ಅವರೇ ಹೊಣೆಯಾಗುತ್ತಾರೆ' ಎಂದು ಎಚ್ಚರಿಸಿದರು.

ಸಾರಿಗೆ ನೌಕರರ ಮೇಲೆ ಮತ್ತಷ್ಟು ಕಠಿಣ ಕ್ರಮ!

ಕಳೆದ ಮೂರು ದಿನಗಳಿಂದ ಸಾರಿಗೆ ನೌಕರರು 6ನೇ ವೇತನಕ್ಕಾಗಿ ಕೆಲಸ ಬಿಟ್ಟು ಧರಣಿ ನಡೆಸುತ್ತಿದ್ದಾರೆ. ಆದ್ರೆ, ಇತ್ತ ಸಿಎಂ 6 ವೇತನ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಕಡ್ಡಿ ತುಂಡಾದಂತೆ ಹೇಳಿದ್ದಾರೆ. ರಾಜ್ಯ ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ಹಗ್ಗಾಜಗ್ಗಾಟ ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ತಲುಪಲಿದೆ ಎನ್ನುವುದು ಕಾದುನೋಡಬೇಕಿದೆ.

ಒಟ್ಟಿನಲ್ಲಿ ಸಾರಿಗೆ ನೌಕರರು ಹಾಗೂ ಸರ್ಕಾರ ನಡುವಿನ ತಿಕ್ಕಾಟದಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka News Live: ಅಧಿವೇಶನಕ್ಕೂ ಮೊದಲೇ ಬ್ರದರ್ಸ್ ಒಗ್ಗಟ್ಟು: ಬಿಜೆಪಿ ಮೇಲೆ ಸವಾರಿ ಮಾಡಲು ಕಾಂಗ್ರೆಸ್ ಸಜ್ಜು
ಉಡುಪಿ: ಧರ್ಮ-ಸಂವಿಧಾನ ಬೇರೆಯಲ್ಲ:-ಪವನ್ ಕಲ್ಯಾಣ ಬಣ್ಣನೆ