ಮೇಕೆದಾಟು, ಏಮ್ಸ್, ಭದ್ರಾ ಯೋಜನೆ: ಸಿಎಂ ಡಿ.ಕೆ. ಶಿವಕುಮಾರ್, ಪ್ರಧಾನಿ ಮೋದಿ ಮುಂದಿಟ್ಟ 11 ಬೇಡಿಕೆಗಳ ಪಟ್ಟಿ ಇಲ್ಲಿದೆ

Published : Jun 11, 2026, 09:02 PM IST
DK Shivakumar Meet Narendra Modi

ಸಾರಾಂಶ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಈ ಭೇಟಿಯಲ್ಲಿ ಮೇಕೆದಾಟು, ಕಳಸಾ ಬಂಡೂರಿ ನೀರಾವರಿ ಹಾಗೂ ವಿವಿಧ ಯೋಜನೆಗಳಿಗೆ ಹಣಕಾಸು ನೆರವು ಕೋರಲಾಗಿದೆ.

ನವದೆಹಲಿ (ಜೂ.11): ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಭೇಟಿ ಮಾಡಿದ ಡಿ.ಕೆ. ಶಿವಕುಮಾರ್ (Karnataka chief minister DK Shivakumar) ಅವರು, ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ಮತ್ತು ದೀರ್ಘಕಾಲದ ಬೇಡಿಕೆಗಳ ಪಟ್ಟಿಯನ್ನು ಪ್ರಧಾನಿಗಳ ಮುಂದೆ ಮಂಡಿಸಿದ್ದಾರೆ. ಕೇವಲ ಔಪಚಾರಿಕ ಭೇಟಿಯಾಗಿ ಸೀಮಿತಗೊಳಿಸದೆ, ನೀರಾವರಿ, ಮೂಲಸೌಕರ್ಯ ಮತ್ತು ಆರ್ಥಿಕ ಅನುದಾನಗಳ ಬಗ್ಗೆ ರಚನಾತ್ಮಕ ಚರ್ಚೆ ನಡೆಸಿದ್ದಾರೆ.

ನೀರಾವರಿ ಯೋಜನೆಗಳಿಗೆ ಆದ್ಯತೆ:

ಪ್ರಧಾನಿಗಳ ಜೊತೆಗಿನ ಭೇಟಿಯಲ್ಲಿ ಡಿ.ಕೆ. ಶಿವಕುಮಾರ್ ಅವರು ಮೇಕೆದಾಟು ಯೋಜನೆಯ (Karnataka Tamil Nadu Mekedatu Project) ಬಗ್ಗೆ ಪ್ರಮುಖವಾಗಿ ಪ್ರಸ್ತಾಪಿಸಿದರು. 'ಮೇಕೆದಾಟು ಯೋಜನೆ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ (Supreme Court) ಈಗಾಗಲೇ ಸೂಚಿಸಿದೆ. ಹೀಗಾಗಿ ಸಿಡಬ್ಲ್ಯೂಸಿ (CWC) ಮೂಲಕ ಈ ಯೋಜನೆಗೆ ಶೀಘ್ರವಾಗಿ ಅನುಮತಿ ಕೊಡಿಸಬೇಕು' ಎಂದು ಮನವಿ ಮಾಡಿದರು. ಇದರ ಜೊತೆಗೆ, ಕೃಷ್ಣಾ ನ್ಯಾಯಾಧೀಕರಣದ ತೀರ್ಪು ಬಂದು ದಶಕ ಕಳೆದರೂ ಕೇಂದ್ರ ಸರ್ಕಾರ ಇನ್ನೂ ಗೆಜೆಟ್ ನೋಟಿಫಿಕೇಷನ್ ಹೊರಡಿಸದಿರುವುದನ್ನು ಪ್ರಧಾನಿಗಳ ಗಮನಕ್ಕೆ ತಂದರು. ಕಳಸಾ ಬಂಡೂರಿ ಯೋಜನೆಗೆ (Kalasa Banduri Project) ವೇಗ ನೀಡುವಂತೆಯೂ ಒತ್ತಾಯಿಸಿದರು.

ಬೆಂಗಳೂರು ಮತ್ತು ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್:

ಬೆಂಗಳೂರು ನಗರದ ಜಾಗತಿಕ ಮಟ್ಟದ ಅಭಿವೃದ್ಧಿಗಾಗಿ 26 ಸಾವಿರ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಸಿಎಂ ಕೋರಿದ್ದಾರೆ. ಇದಲ್ಲದೆ, ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ 25 ಸಾವಿರ ಕೋಟಿ ರೂಪಾಯಿ ಅನುದಾನ ನೀಡುವಂತೆ ಮನವಿ ಸಲ್ಲಿಸಿದರು. ರಾಯಚೂರಿನಲ್ಲಿ ಬಹುದಿನಗಳ ಬೇಡಿಕೆಯಾದ ಏಮ್ಸ್ (AIIMS) ಆಸ್ಪತ್ರೆ ಸ್ಥಾಪನೆಗೂ ಅವರು ಒತ್ತು ನೀಡುವಂತೆ ಮನವಿ ಮಾಡಿದ್ದಾರೆ.

ಹಣಕಾಸು ನೆರವು ಮತ್ತು ಮೂಲಸೌಕರ್ಯ:

  • ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್‌ನಲ್ಲಿ ಘೋಷಣೆಯಾದ ಹಣವನ್ನು ಕೂಡಲೇ ಬಿಡುಗಡೆ ಮಾಡಲು ಮನವಿ.
  • ಗ್ರಾಮ ಪಂಚಾಯತ್‌ಗಳಿಗೆ 15ನೇ ಹಣಕಾಸು ಆಯೋಗದ ಬಾಕಿ ಇರುವ 2860 ಕೋಟಿ ರೂ. ಅನುದಾನ ಬಿಡುಗಡೆಗೆ ಆಗ್ರಹ.
  • ಬೆಂಗಳೂರು ಉಪನಗರ ರೈಲ್ವೆ (Suburban Railway) ಮತ್ತು ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆಗೆ ಕೇಂದ್ರದ ಬೆಂಬಲ.
  • ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಅರಣ್ಯ ಇಲಾಖೆಯಿಂದ ಶೀಘ್ರವಾಗಿ ಅನುಮತಿ ಕೊಡಿಸುವಂತೆ ವಿನಂತಿ.

ಸಹಕಾರಿ ಒಕ್ಕೂಟ ವ್ಯವಸ್ಥೆಯ ಆಶಯ:

ರಾಜಕೀಯ ಭಿನ್ನಾಭಿಪ್ರಾಯಗಳಿಗಿಂತ ರಾಜ್ಯದ ಅಭಿವೃದ್ಧಿಯೇ ಮುಖ್ಯ ಎಂದ ಡಿ.ಕೆ. ಶಿವಕುಮಾರ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಜೋಡಿಸಿದರೆ ಮಾತ್ರ ಕರ್ನಾಟಕವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಅವರು ರಾಜ್ಯದ ಈ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೊದಲ ನೀತಿ ಆಯೋಗದ ಸಭೆಯಲ್ಲೇ ಮೋದಿ ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್; ಸಿದ್ದುಗಿಂತ ವಿಭಿನ್ನ ಹೆಜ್ಜೆ!
ಸಣ್ಣ ಖಾಲಿ ಜಾಗದಲ್ಲೇ 'ಗರಿ ಗರಿ ನೋಟು ಕೊಡುವ ಉದ್ಯಮ'! ಹಳ್ಳಿಹೈದನ ಬ್ಯುಸಿನೆಸ್ ಐಡಿಯಾಗೆ ದೊಡ್ಡ ಉದ್ಯಮಿಗಳೇ ಫಿದಾ!