'ನಾನೇಕೆ ರೈತರ ಕ್ಷಮೆ ಕೇಳಲಿ, ಇವನ್ನೆಲ್ಲ ಅರಗಿಸಿಕೊಳ್ಳೊದು ಗೊತ್ತು': ಸಿಎಂ ಮೊಂಡಾಟ

Published : Nov 19, 2018, 02:31 PM ISTUpdated : Nov 19, 2018, 02:36 PM IST
'ನಾನೇಕೆ ರೈತರ ಕ್ಷಮೆ ಕೇಳಲಿ, ಇವನ್ನೆಲ್ಲ ಅರಗಿಸಿಕೊಳ್ಳೊದು ಗೊತ್ತು': ಸಿಎಂ ಮೊಂಡಾಟ

ಸಾರಾಂಶ

ರೈತರ ಕ್ಷಮೆ ಕೇಳುವುದರಿಂದ ಗೊಂದಲ ಪರಿಹಾರವಾಗಲಿದೆ ಅನ್ನೋದು ಕಾಂಗ್ರೆಸ್ ಅಭಿಪ್ರಾಯವಾಗಿದ್ದು, ಇದ್ರಿಂದಸಿಎಂ ಕುಮಾರಸ್ವಾಮಿ ಮನವೊಲಿಕೆಗೆ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. 

ಬೆಂಗಳೂರು,[ನ.19]: ಇತ್ತ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ವಿರುದ್ಧ ರೈತರು ದಂಗೆ ಎದ್ದು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಅತ್ತ ಸಿಎಂ ಕುಮಾರಸ್ವಾಮಿ ಮಾತ್ರ ತನಗೂ ಇದಕ್ಕೂ ಸಂಬಂಧವೇ ಇಲ್ಲವೇನೋ ಎನ್ನುವ ರೀತಿಯಲ್ಲಿ ಮೊಂಡಾಟ ಮಾಡುತ್ತಿದ್ದಾರೆ. 

ವಿಧಾನಸೌಧದ ಗಾಂಧಿ‌ಪ್ರತಿಮೆ ಬಳಿ ನಡೆದ ಇಂದಿರಾಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಸಿಎಂ ಜೊತೆ ಕೂತಿದ್ದ ಸಚಿವ ಜಮೀರ್​ ಅಹ್ಮದ್​ ಖಾನ್​, ರೈತರ ಪ್ರತಿಭಟನೆ ದೊಡ್ಡದಾಗುತ್ತಿದೆ. ನಮ್ಮ ರೈತರೇ ಅಲ್ಲವೇ ಒಮ್ಮೆ ಕ್ಷಮೆ ಕೇಳಿಬಿಡಿ ಎಲ್ಲಾ ಸರಿ ಹೋಗುತ್ತೆ ಅಂತಾ ಸಿಎಂ ಕುಮಾರಸ್ವಾಮಿಗೆ ಸಲಹೆ ನೀಡಿದ್ದಾರೆ. 

'ಗಲಾಟೆ ಮಾಡುತ್ತಿರುವ ಕಬ್ಬು ಬೆಳೆಗಾರರು ರೈತರಲ್ಲ, ಅವ್ರು ಗೂಂಡಾಗಳು'

ಆದ್ರೆ, ಇದಕ್ಕೆ ಸಿಡಿಮಿಡಿಗೊಂಡ ಸಿಎಂ ಕುಮಾರಸ್ವಾಮಿ, ನಾನೇಕೆ ರೈತರ ಕ್ಷಮೆ ಕೇಳಲಿ? ಇವನ್ನೆಲ್ಲಾ ಅರಗಿಸಿಕೊಳ್ಳೋದು ನನಗೆ ಗೊತ್ತಿದೆ. ಪ್ಲೀಸ್ ನೀವು ಸಲಹೆ ಕೊಡಲು ಬರಬೇಡಿ ಎಂದು ವೇದಿಕೆ ಮೇಲೆಯೇ ಗರಂ ಆಗಿದ್ದಾರೆ.

ಸಿಎಂ ಕ್ಷಮೆ ಕೇಳದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ಸಚಿವರು, ವಿನಾಕಾರಣ ಸಮಸ್ಯೆಯನ್ನು ಜಟಿಲಗೊಳಿಸುತ್ತಿರುವ ಸಿಎಂ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರೈತರ ಕ್ಷಮೆ ಕೇಳುವುದರಿಂದ ಗೊಂದಲ ಪರಿಹಾರವಾಗಲಿದೆ ಅನ್ನೋದು ಕಾಂಗ್ರೆಸ್ ಅಭಿಪ್ರಾಯವಾಗಿದ್ದು, ಇದ್ರಿಂದಸಿಎಂ ಕುಮಾರಸ್ವಾಮಿ ಮನವೊಲಿಕೆಗೆ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಆದ್ರೆ ಇದ್ಯಾವುದಕ್ಕೆ ಕ್ಯಾರೆ ಎನ್ನದ  ಕುಮಾರಸ್ವಾಮಿ ರೈತರ ಕ್ಷಮೆ ಕೇಳಲು ಕೇಳಲು ಮುಂದಾಗದೆ ಮೊಂಡಾಟ ಮಾಡುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka News Live: ಮುಂದುವರಿದ ಸಿಎಂ ಕುರ್ಚಿ ಕದನ ಜನವರಿ 6ಕ್ಕೆ ಡಿಕೆಶಿ ಸಿಎಂ: ಮತ್ತೆ ಆಪ್ತ ಶಾಸಕರ ಬಾಂಬ್
ಚುನಾವಣೆ ಆಯೋಗದ 6 ಲೋಪ ಬಳಸಿ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ: ಎಸ್‌ಐಟಿ