ಉ. ಕರ್ನಾಟಕ ಹೋರಾಟಗಾರರನ್ನು ತರಾಟೆಗೆ ತೆಗೆದುಕೊಂಡ ಸಿಎಂ

Published : Sep 16, 2018, 07:36 AM ISTUpdated : Sep 19, 2018, 09:26 AM IST
ಉ. ಕರ್ನಾಟಕ ಹೋರಾಟಗಾರರನ್ನು ತರಾಟೆಗೆ ತೆಗೆದುಕೊಂಡ ಸಿಎಂ

ಸಾರಾಂಶ

ಸಿಎಂ ಕುಮಾರಸ್ವಾಮಿ ಬೆಳಗಾವಿಯಲ್ಲಿ ಜನತಾ ದರ್ಶನ ನಡೆಸಿದ್ದಾರೆ. ಆದರೆ, ಉತ್ತರ ಕರ್ನಾಟಕದ ಹೋರಾಟಗಾರರು ತಮ್ಮ ವಿವಿಧ ಬೇಡಿಕೆಗಳಿಗೆ ಘೋಷಣೆ ಕೂಗಿದಾಗ ಗದರಿದ್ದಾರೆ.

ಬೆಳಗಾವಿ: ಸುವರ್ಣಸೌಧದಲ್ಲಿ ಶನಿವಾರ ಜನತಾ ದರ್ಶನ ಕಾರ್ಯಕ್ರಮದ ವೇಳೆ ಉತ್ತರ ಕರ್ನಾಟಕದ ಹೋರಾಟಗಾರರು ಗಲಾಟೆ ಮಾಡಿದ ಹಿನ್ನೆಲೆಯಲ್ಲಿಮುಖ್ಯಮಂತ್ರಿ ಕುಮಾರಸ್ವಾಮಿ ತುಸು ಗರಂ ಆದಂತೆ ಕಂಡುಬಂದರು. ‘ಅನ್ಯಾಯ, ಅನ್ಯಾಯ ಉತ್ತರ ಕರ್ನಾಟಕಕ್ಕೆ ಅನ್ಯಾಯ’ ಎಂದು ಹೋರಾಟಗಾರರು ಕೂಗುತ್ತಿದ್ದಂತೆ ಕಸಿವಿಸಿಗೊಂಡ ಮುಖ್ಯಮಂತ್ರಿ ಕುಮಾರಸ್ವಾಮಿ ಹೋರಾಟಗಾರರನ್ನು ತರಾಟೆಗೆ ತೆಗೆದುಕೊಂಡರು. 

ಸುವರ್ಣ ವಿಧಾನಸೌದದ ಸೆಂಟ್ರಲ್ ಹಾಲ್ ನ ವೇದಿಕೆ ಏರುತ್ತಿದ್ದಂತೆಯೇ ಉತ್ತರ ಕರ್ನಾಟಕ ಹೋರಾಟಗಾರರು ಘೋಷಣೆ ಕೂಗಿದರು. ಇದರಿಂದ ಕುಪಿತಗೊಂಡ ಸಿಎಂ ಕುಮಾರಸ್ವಾಮಿ ‘ಕೂಗಾಟ ಯಾಕೆ ಮಾಡ್ತೀರಾ.. ಏನ್ ಮನವಿ ತಂದು ಕೊಡಿ... ಅಭಿವೃದ್ಧಿ ಅಂದರೆ ಏನೇನಾಗ್ಬೇಕು ಹೇಳಿ’ ಎಂದು ಹೋರಾಟಗಾರ ರನ್ನು ಗದರಿದರು. 

ಈ ವೇಳೆ ಮುಖಂಡ ಅಡಿವೇಶಇಟಗಿ ಅವರಿಂದ ಮನವಿ ಪಡೆದು ಅವರಿಗೆ ತುಸು ಸಿಟ್ಟು ಪ್ರದರ್ಶಿಸಿದ ಸಿಎಂ, ಇದರ ಬಗ್ಗೆ ನಾನು ಅಧಿಕಾರಿಗಳು ಮತ್ತು ಸಂಬಂಧಿಸಿದ ಇಲಾಖೆಗಳ ಜತೆ ಚರ್ಚಿಸಿ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಹೇಳಿ ಮನವಿ ಪಡೆದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!