
ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಮಹತ್ವದ ಕಲಾವಿದ ಹಾಗೂ ಅಪರೂಪದ ವ್ಯಕ್ತಿತ್ವದ ರಾಜಕಾರಣಿ ಅಂಬರೀಶ್ ಇನ್ನಿಲ್ಲ ಎನ್ನುವುದು ಅಪಾರ ದುಃಖವನ್ನುಂಟು ಮಾಡಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಶೋಕ ವ್ಯಕ್ತಪಡಿಸಿದ್ದಾರೆ.
ತಮ್ಮ ಮತ್ತು ಅವರ ಸ್ನೇಹ ಅನುಗಾಲದ್ದು. ಚಿತ್ರರಂಗ ಹಾಗೂ ರಾಜಕಾರಣವನ್ನು ಮೀರಿದ ಸ್ನೇಹ ನಮ್ಮದಾಗಿತ್ತು. ಅಂಬರೀಶ್ ಹೃದಯ ಶ್ರೀಮಂತಿಕೆಯ ವ್ಯಕ್ತಿತ್ವವುಳ್ಳವರಾಗಿದ್ದರು.
ಹಾಗಾಗಿಯೇ ಅವರು ಪ್ರತಿಯೊಬ್ಬರ ಗೌರವಕ್ಕೆ ಪಾತ್ರರಾಗಿದ್ದರು ಎಂದು ಅವರು ಸ್ಮರಿಸಿದ್ದಾರೆ. ಅಂಬರೀಶ್ ಅವರ ಅಕಾಲಿಕ ಮರಣ ದೊಡ್ಡ ಶೂನ್ಯವನ್ನು ಸೃಷ್ಟಿಸಿದೆ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ವರ್ಗಕ್ಕೂ ಹಾಗೂ ಅಪಾರ ಅಭಿಮಾನಿಗಳಿಗೂ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ