
ಬೆಂಗಳೂರು(ಫೆ.12): ಮಂಡಿ ನೋವಿನಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಆದರೆ, ಮಂಗಳವಾರ ಇನ್ವೆಸ್ಟ್ ಕರ್ನಾಟಕದ ಉದ್ಘಾಟನಾ ಕಾರ್ಯಕ್ರಮಕ್ಕೆ ಗಾಲಿ ಖುರ್ಚಿಯಲ್ಲಿ ಆಗಮಸಿದ್ದರು. ನಡೆಯಲು ಕಷ್ಟಪಡುತ್ತಿರುವ ಸಿದ್ದರಾಮಯ್ಯ ಅವರನ್ನು ಕಾರ್ಯಕ್ರಮ ನಡೆಯುವ ಜಾಗಕ್ಕೆ ಮತ್ತು ವೇದಿಕೆಗೆ ಗಾಲಿ ಖುರ್ಚಿ ಮೂಲಕವೇ ಸಹಾಯಕರು ಕರೆತಂದರು.
ಕಾಲು ನೋವು ಗುಣಮುಖ ಆಗಲಿ ಎನ್ನುತ್ತಲೇ ಸಿಎಂ ಕಾಲೆಳೆದ ರಾಜನಾಥ್!
ಕರ್ನಾಟಕದಲ್ಲಿ ಹೂಡಿಕೆ ದೇಶಕ್ಕೆ ಲಾಭ: ರಕ್ಷಣಾ ಸಚಿವ ರಾಜನಾಥ್ ಸಿಂಗ್
ಕಾಲು ನೋವಿನಿಂದ ಬಳಲುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗುವಂತೆ ರಾಜನಾಥ್ ಸಿಂಗ್ ಹಾರೈಸಿದರು.
ಹೀಗೆ ಹಾರೈಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲೆಳೆದರು. ರಾಜಕಾರಣಿ ಗಳಿಗೆ ಕಾಲು ಬಹಳ ಮುಖ್ಯ. ಯಾವಾಗ ಅವರ ಕಾಲನ್ನು ಯಾರು ಎಳೆಯುತ್ತಾರೋ ಗೊತ್ತಾಗುವುದಿಲ್ಲ. ಅಂಥದ್ದರಲ್ಲಿ ಸಿದ್ದರಾಮಯ್ಯ ಅವರು ಕಾಲು ನೋವು ಮಾಡಿಕೊಂಡಿದು, ಅವರು ಬೇಗ ಗುಣಮುಖರಾಗಲಿ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ