ನೂತನ ಬ್ಯಾರಿ ಸೌಹಾರ್ದ ಕಟ್ಟಡ ಉದ್ಘಾಟಿಸಿದ ಸಿಎಂ; ಹೆಚ್ಚಿನ ಸಚಿವ ಸ್ಥಾನಕ್ಕೆ ಮುಸ್ಲಿಂ ಸಮುದಾಯ ಆಗ್ರಹ

Published : Sep 30, 2023, 01:14 PM IST
ನೂತನ ಬ್ಯಾರಿ ಸೌಹಾರ್ದ ಕಟ್ಟಡ ಉದ್ಘಾಟಿಸಿದ ಸಿಎಂ; ಹೆಚ್ಚಿನ ಸಚಿವ ಸ್ಥಾನಕ್ಕೆ ಮುಸ್ಲಿಂ ಸಮುದಾಯ ಆಗ್ರಹ

ಸಾರಾಂಶ

ಬೆಂಗಳೂರಿನ ಹೆಚ್‌ಬಿಆರ್‌ ಲೇಔಟ್‌ನಲ್ಲಿ ನಿರ್ಮಿಸಲಾಗಿರುವ ನೂತನ ಬ್ಯಾರಿ ಸೌಹಾರ್ದ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ನಿರ್ಮಾಣವಾಗಿರುವ ಕಟ್ಟಡ. 

ಬೆಂಗಳೂರು (ಸೆ.30): ಬೆಂಗಳೂರಿನ ಹೆಚ್‌ಬಿಆರ್‌ ಲೇಔಟ್‌ನಲ್ಲಿ ನಿರ್ಮಿಸಲಾಗಿರುವ ನೂತನ ಬ್ಯಾರಿ ಸೌಹಾರ್ದ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ನಿರ್ಮಾಣವಾಗಿರುವ ಕಟ್ಟಡ. ಉದ್ಘಾಟನೆ ಕಾರ್ಯಕ್ರಮದಲ್ಲಿ ಸಚಿವರಾದ ಕೆಜೆ ಜಾರ್ಜ್, ದಿನೇಶ್ ಗುಂಡೂರಾವ್, ಸ್ಫೀಕರ್ ಯುಟಿ ಖಾದರ್, ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ನಜೀರ್ ಅಹ್ಮದ್ ಉಪಸ್ಥಿತರಿದ್ದರು.

ತಮಿಳುನಾಡಿಗೆ ಕಾವೇರಿ ನೀರು: ಕಾನೂನು ತಜ್ಞರು, ನಿವೃತ್ತ ಜಡ್ಜ್‌ಗಳ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಕಾರ್ಯಕ್ರಮಕ್ಕೆ ತಡವಾಗಿ ಬಂದ ಡಿಸಿಎಂ:

ಬ್ಯಾರಿ ಸೌಹಾರ್ದ ಕಟ್ಟಡ ಉದ್ಘಾಟನೆಗೆ ಆಹ್ವಾನಿಸಿದ ಅತಿಥಿಗಳೆಲ್ಲರೂ ಕಾರ್ಯಕ್ರಮ ಶುರುವಾಗುವ ಮೊದಲೇ ಹಾಜರಿದ್ದರು. ಆದರೆ ಡಿಸಿಎಂ ಡಿಕೆ ಶಿವಕುಮಾರ ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದ ಘಟನೆ ನಡೆಯಿತು. ಡಿಕೆ ಶಿವಕುಮಾರ ಬಂದ ವೇಳೆ ಸಿಎಂ ಪಕ್ಕದ ಡಿಕೆ ಶಿವಕುಮಾರ ಅವರಿಗೆ ಆಸನ ಬಿಟ್ಟುಕೊಟ್ಟ ಸಚಿವ ಕೆಜೆ ಜಾರ್ಜ್.  ಜಾಗ ಬಿಟ್ಟುಕೊಟ್ಟು ಸಚಿವ ದಿನೇಶ್ ಗುಂಡೂರಾವ್ ಪಕ್ಕದಲ್ಲಿ ಕುಳಿತರು. ಈ ವೇಳೆ ಡಿಕೆ ಶಿವಕುಮಾರಗೆ ವೇದಿಕೆಯಲ್ಲಿದ್ದ ಅತಿಥಿಗಳೆಲ್ಲರೂ ಕೈಕುಲುಕಿ ನಮಸ್ಕರಿಸಿದ್ರು. ಆದರೆ ಸಿಎಂ ಮಾತ್ರ ಡಿಕೆಶಿಯತ್ತ ನೋಡದೇ ಕಾರ್ಯಕ್ರಮದ ಪ್ರತಿ ನೋಡುತ್ತಿದ್ದುದ್ದು ಸಿಎಂ-ಡಿಸಿಎಂ ಮಧ್ಯೆ ಎಲ್ಲವೂ ಸರಿಯಿಲ್ಲ ಎಂಬುದು ಎದ್ದು ಕಾಣುತ್ತಿತ್ತು. 

ಮುಸ್ಲಿಂ ಸಮುದಾಯಕ್ಕೆ ಹೆಚ್ಚು ಸಚಿವ ಸ್ಥಾನಕ್ಕೆ ಆಗ್ರಹ:

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಮುಸ್ಲಿಂ ಸಮುದಾಯದ ಪಾತ್ರ ದೊಡ್ಡದಿದೆ. ಅದನ್ನ ನೀವು ಒಪ್ಪಿದ್ದೀರಿ, ನಿಮ್ಮ ಹೈಕಮಾಂಡ್ ಕೂಡ ಒಪ್ಪಿದೆ. ಸರ್ಕಾರದಲ್ಲಿ ಮುಸ್ಲಿಂ ಸಮುದಾಯಕ್ಕೆ ಕೇವಲ ಎರಡು ಸಚಿವ ಸ್ಥಾನ ಸಿಕ್ಕಿದೆ. ಪ್ರತಿಬಾರಿ 4-5 ಮಂತ್ರಿ ಸ್ಥಾನಗಳು ಮುಸ್ಲಿಂ ಸಮುದಾಯಕ್ಕೆ ಸಿಗುತ್ತಿತ್ತು. ಆದರೆ ಈ ಬಾರಿ ಕೇವಲ ಎರಡು ಸ್ಥಾನ ಸಿಕ್ಕಿದೆ. ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು. ಬ್ಯಾರಿ ವೆಲೆಫೆರ್ ಅಸೋಸಿಯೇಷನ್ ಅಧ್ಯಕ್ಷ ಸೈಯದ್  ಸಿಎಂ ಮತ್ತು ಡಿಸಿಎಂ ಎದರು ವೇದಿಕೆಯಲ್ಲಿ ಮನವಿ ಮಾಡಿದರು.

ಅಲ್ಲಾನ ಕೃಪೆಯಿಂದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಿದೆ : ಗೃಹ ಸಚಿವ ಡಾ. ಜಿ.ಪರಮೇಶ್ವರ್

ಯುಟಿ ಖಾದರ್‌ಗೆ ಸಚಿವ ಸ್ಥಾನ ನೀಡಿ:

ಯುಟಿ ಖಾದರ್ ಅವರು ಯಾವಾಗಲೂ ಕ್ಯಾಪ್ಟನ್ ಆಗಿ ಇದ್ರು, ಆದರೆ ಈ ಬಾರಿ ಅವರು ರೆಫ್ರಿ ಆಗಿಬಿಟ್ಟಿದ್ದಾರೆ. ನೀವು ಏನು ಹೇಳಿದರೂ ಕೇಳ್ತಾರೆ. ನಿಮ್ಮ ಮಾತು ಮೀರಲ್ಲ. ಅವರು ಸೌಮ್ಯ ಸ್ವಭಾವದ ವ್ಯಕ್ತಿ ಹೀಗಾಗಿ ಅವರಿಗೆ ಸಭಾಪತಿ ಸ್ಥಾನ ಕೊಟ್ಟಿದ್ದೀರಾ?  ಮುಂದೆ ಅವಕಾಶ ಸಿಕ್ಕರೆ ಯುಟಿ ಖಾದರ್ ರನ್ನ  ಮಂತ್ರಿ ಮಾಡುವಂತೆ ಬ್ಯಾರಿ ಅಸೋಸಿಯೇಷನ್ ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಗೆ ಮನವಿ ಮಾಡಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!