
ಬೆಂಗಳೂರು (ನ.25): ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ ಮಾಡುತ್ತಿರುವ ಸುದ್ದಿಯ ನಡುವೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಖಡಕ್ ಸೂಚನೆ ರವಾನಿಸಿದ್ದಾರೆ. ರಾಜ್ಯದಲ್ಲಿ ಐದು ಸಾವಿರಕ್ಕು ಹೆಚ್ಚು ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ ಎಂದು ಸಿಎಂ ಹೇಳಿದ್ದರು. ಬಿಪಿಎಲ್ ಕಾರ್ಡ್ ಹೊಂದಿರುವ ಈ ಸರ್ಕಾರಿ ನೌಕರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಿದ್ದಾರೆ ಎಂದು ಕರ್ನಾಟಕ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಷಡಕ್ಷರಿ ಹೇಳಿದ್ದಾರೆ. 'ಸರ್ಕಾರದ ಉಚಿತ ಯೋಜನೆಗಳು ಬಡವರಿಗೆ ತಲುಪಬೇಕು. ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಸೌಲಭ್ಯ ವನ್ನು ಪಡೆಯುಯತ್ತಿದ್ದಾರೆ ಅನ್ನೋ ಆರೋಪ ಈ ಹಿಂದೆಯೋ ಕೇಳಿ ಬಂದಿತ್ತು. ಕೆಲವು ನೌಕರರು ಸರ್ಕಾರಿ ಕೆಲಸ ಸಿಗುವ ಮುನ್ನ ಬಿಪಿಎಲ್ ಕಾರ್ಡ್ ಹೊಂದಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಸರ್ವಿಸ್ ಗೆ ಸೇರಿರುವವರು ಬಿಪಿಎಲ್ ಕಾರ್ಡ್ ಹಿಂದಿರುಗಿಸೋದನ್ನು ಮರೆತಿರುತ್ತಾರೆ. ಸಾಮಾನ್ಯವಾಗಿ ಐದಾರು ವರ್ಷಗಳಿಂದ ಸರ್ಕಾರಿ ಸೇವೆಯಲ್ಲಿ ಇರುವವರು ಕಾರ್ಡ್ ಹೊಂದಿರುವುದಿಲ್ಲ' ಎಂದು ಹೇಳಿದ್ದಾರೆ.
ಹಲವು ಕೇಸಿದ್ದರೆ ವಿಚಾರಣಾಧೀನ ಕೈದಿಗೆ ಜಾಮೀನಿಲ್ಲ!
ಇತ್ತೀಚಿನ ದಿನಗಳಲ್ಲಿ ಪೊಲೀಸ್, ಪಿಡಿಓ, ಟೀಚರ್ಸ್ ಗಳ ನೇಮಕಾತಿ ಆಗಿದೆ. ಅವರು ಇನ್ನು ಬಿಪಿಎಲ್ ಕಾರ್ಡ್ ವಾಪಾಸ್ ಮಾಡಿರುವುದಿಲ್ಲ. ಸರ್ಕಾರಿ ನೌಕರರಾಗಿರುವ ಯಾರೊಬ್ಬರೂ ಕೂಡ ಬಿಪಿಎಲ್ ಕಾರ್ಡ್ ಹೊಂದಿರಬಾರದು ಎಂದು ನಾನು ಮನವಿ ಮಾಡುತ್ತೇನೆ. ಇದರಿಂದ ಬಡವರಿಗೆ ಸಿಗುವ ಸೌಲಭ್ಯ ತಪ್ಪಿ ಹೋಗುತ್ತದೆ. ಸರ್ಕಾರಕ್ಕೆ ಬಿಪಿಎಲ್ ಕಾರ್ಡ್ ಸರಂಡರ್ ಮಾಡದಿದ್ರೆ ಅಂತವರಿಗೆ ದಂಡ ಹಾಕಲಿ. ಯಾರು ಕನಿಷ್ಠ ಹಂತದಲ್ಲಿ ಇರ್ತಾರೆ ಅಂತವರಿಗೆ ಬೇರೆ ಬೇರೆ ಸರ್ಕಾರಿ ಸೌಲಭ್ಯಕ್ಕಾಗಿ ಬಿಪಿಎಲ್ ಕಾರ್ಡ್ ಬಳಸಿಕೊಳ್ಳುತ್ತಾರೆ. ಹಾಗಾಗಿ ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಗಳನ್ನು ಹಿಂದಿರುಗಿಸುವಂತೆ ವಿನಂತಿ ಮಾಡಿದ್ದಾರೆ.
ಜಿಪಿಎಸ್ ತೋರಿದ ದಾರೀಲಿ ಮದುವೆ ಮನೆಗೆ ಹೋಗ್ತಿದ್ದ ಕಾರು ಸೀದಾ ನದಿಗೆ ಬಿದ್ದು ಮೂವರ ಸಾವು!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ