
ಬೆಂಗಳೂರು(ಆ.07): ಸಂಸತ್ ಅಧಿವೇಶನ ನಡೆಯುತ್ತಿರುವ ಈ ಸಮ ಯದಲ್ಲಿ ಮುಡಾ ಅಕ್ರಮ ಕೇಸಿನ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಪ್ರಾಸಿಕ್ಯೂ ಷನ್ ವಿಚಾರವಾಗಿ ರಾಜ್ಯ ಪಾಲರು ನಿರ್ಧಾರ ಯಾವುದೇ ಕೈಗೊಳ್ಳದೆ ಇನ್ನೂ ಕೆಲ ದಿನ ಕಾದು ನೋಡುವ ಸಾಧ್ಯತೆ ಹೆಚ್ಚಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಸೋಮವಾರ ದೆಹಲಿ ಪ್ರವಾಸ ದಿಂದ ರಾಜ್ಯಕ್ಕೆ ವಾಪಸ್ಸಾಗಿದ್ದು, ಇದರ ಬೆನ್ನಲ್ಲೇ ಎಲ್ಲರ ಚಿತ್ತ ರಾಜಭವನದತ್ತ ನೆಟ್ಟಿದೆ. ಆದರೆ, ಪ್ರಾಸಿಕ್ಯೂಷನ್ ವಿಚಾರದಲ್ಲಿ ಸಂಸತ್ ಅಧಿವೇ ಶನ ಕೊನೆಗೊಳ್ಳುವ ಆ.12ರವರೆಗೆ ಯಾವುದೇ ನಿರ್ಧಾರ ಹೊರಬೀಳುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.
ಏಕೆಂದರೆ ಒಂದೆಡೆ ರಾಜ್ಯದಲ್ಲಿ ಪ್ರತಿಪಕ್ಷದಲ್ಲಿರುವ ಬಿಜೆಪಿ, ದಳ ಪಕ್ಷಗಳು ಮುಡಾ ಅಕ್ರಮ ಪ್ರಕರಣ ಮುಂದಿಟ್ಟುಕೊಂಡು ಸಿಎಂ ಪದತ್ಯಾಗಕ್ಕೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿವೆ. ಆ ಮೂಲಕ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರಕ್ಕೆ ಕುತ್ತು ತರುವ ಪ್ರಯತ್ನ ನಡೆಸಿವೆ. ಮತ್ತೊಂದೆಡೆ ಕೇಂದ್ರದಲ್ಲಿ ಪ್ರತಿಪಕ್ಷವಾಗಿರುವ ಕಾಂಗ್ರೆಸ್ ವರಿಷ್ಠರು, ಕರ್ನಾಟಕದ ಸರ್ಕಾರಕ್ಕೆ ಯಾವುದೇ ಪೆಟ್ಟಾಗದಂತೆ ನೋಡಿಕೊಳ್ಳಲು ಸಾಕಷ್ಟು ಪ್ರತಿತಂತ್ರಗಳ ಮೂಲಕ ಎಚ್ಚರಿಕೆಯ ಹೆಜ್ಜೆ ಇಡುತ್ತಿದ್ದಾರೆ. ಈ ನಡುವೆ ರಾಜ್ಯಪಾಲರು ನೋಟಿಸ್ ವಾಪಸ್ ಪಡೆಯುವಂತೆ ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡು ಕಳುಹಿಸಿದೆ. ನ್ಯಾಯಾಂಗ ಹೋರಾಟಕ್ಕೂ ಸಿದ್ಧತೆ ನಡೆಸಿದೆ.
ಗೌರ್ನರ್ಗೆ ವಿವೇಚನಾಧಿಕಾರ ಇಲ್ಲ, ಸಂಪುಟದ ಮಾತು ಕೇಳಬೇಕು: ಸಚಿವ ಕೃಷ್ಣಬೈರೇಗೌಡ
ಒಂದು ವೇಳೆ ರಾಜ್ಯಪಾಲರೇನಾದರೂ ಮುಖ್ಯಮಂತ್ರಿಯವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅವಕಾಶ ನೀಡಿದರೆ ಸಂಸತ್ ಅಧಿವೇಶನದಲ್ಲಿ ಇದರ ವಿರುದ್ಧ ದನಿ ಎತ್ತಿ ಕಲಾಪ ಬಲಿಯಾಗುವ ಸಾಧ್ಯತೆ ಇದೆ. ಜತೆಗೆ ಪಾದಯಾತ್ರೆ ನಡೆಯುವ ವೇಳೆ ಅನುಮತಿ ನೀಡಿದಲ್ಲಿ ಪ್ರತಿಪಕ್ಷಗಳ ಬೇಡಿಕೆಗೆ ಮಣಿದಂತಾಗುತ್ತದೆ ಎಂಬ ಸಂದೇಶ ರವಾನೆಯಾಗಬಹುದು. ಹಾಗಾಗಿ ರಾಜ್ಯಪಾಲರು ಅಧಿವೇಶನ ಮುಗಿಯುವವರೆಗೆ (ಆ.12) ಪ್ರಾಸಿಕ್ಯೂಷನ್ ವಿಚಾರದಲ್ಲಿ ತಮ್ಮ ಯಾವುದೇ ನಿರ್ಧಾರ ಪ್ರಕಟಿಸುವ ಸಾಧ್ಯತೆ ಕಡಮೆ ಎಂದು ಮೂಲಗಳು ತಿಳಿಸಿವೆ.
ಇದರ ನಡುವೆ ಮುಖ್ಯಮಂತ್ರಿಯವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಮಂಗಳವಾರ ರಾಜ್ಯ ಪಾಲರು ರಾಜ್ಯಕ್ಕೆ ಮರಳುತ್ತಲೇ ರಾಜ ಭವನದಲ್ಲಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದು ಇನ್ನಷ್ಟು ಕುತೂಹಲ ಹೆಚ್ಚಿಸಿದೆ.
* ರಾಜ್ಯಪಾಲರು ಈಗ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದರೆ ಸಂಸತ್ ಅಧಿವೇಶನ ದಲ್ಲಿ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುವ ಸಾಧ್ಯತೆ. ಇದರಿಂದ ಸಂಸತ್ ಕಲಾಪವೇ ಬಲಿಯಾಗುವ ಸಂಭವ
* ಮುಡಾ ಅಕ್ರಮ ಸಂಬಂಧ ಬಿಜೆಪಿ- ಜೆಡಿಎಸ್ 2 ಪಾದಯಾತ್ರೆ ನಡೆಸುತ್ತಿವೆ. ಆ.9ರಂದು ಯಾತ್ರೆ ಮುಗಿಯುತ್ತದೆ. ಈಗ ಅನುಮತಿ ನೀಡಿದರೆ ವಿಪಕ್ಷಗಳ ಬೇಡಿಕೆಗೆ ಮಣಿದ ಆರೋಪ ಎದುರಾಗುವ ಭೀತಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ