ನಾಡಿನ ಕಲೆ, ಸಂಸ್ಕೃತಿಯನ್ನ ದಸರಾ ಮೂಲಕ ಜಗತ್ತಿಗೆ ತಿಳಿಸುವ ಕಾರ್ಯ ನಮ್ಮ ಸರ್ಕಾರ ಮಾಡುತ್ತೆ: ಸಿದ್ದರಾಮಯ್ಯ

Published : Oct 15, 2023, 12:38 PM ISTUpdated : Oct 15, 2023, 03:00 PM IST
ನಾಡಿನ ಕಲೆ, ಸಂಸ್ಕೃತಿಯನ್ನ ದಸರಾ ಮೂಲಕ ಜಗತ್ತಿಗೆ ತಿಳಿಸುವ ಕಾರ್ಯ ನಮ್ಮ ಸರ್ಕಾರ ಮಾಡುತ್ತೆ: ಸಿದ್ದರಾಮಯ್ಯ

ಸಾರಾಂಶ

 ನಾನು ಚಿಕ್ಕವನಿದ್ದಾಗ ನಮ್ಮ ಅಪ್ಪ ದಸರಾಕ್ಕೆ ಕರೆದುಕೊಂಡು ಬಂದಿದ್ದ. ನಾನು ಅಪ್ಪನ ಹೆಗಲ ಮೇಲೆ ಕೂತು ಮೈಸೂರು ದಸರಾ ನೋಡಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಹಬ್ಬದ ಬಾಲ್ಯದ ನಂಟು ಸ್ಮರಿಸಿಕೊಂಡರು.

ಮೈಸೂರು (ಅ.15): ನಾನು ಚಿಕ್ಕವನಿದ್ದಾಗ ನಮ್ಮ ಅಪ್ಪ ದಸರಾಕ್ಕೆ ಕರೆದುಕೊಂಡು ಬಂದಿದ್ದ. ನಾನು ಅಪ್ಪನ ಹೆಗಲ ಮೇಲೆ ಕೂತು ಮೈಸೂರು ದಸರಾ ನೋಡಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಹಬ್ಬದ ಬಾಲ್ಯದ ನಂಟು ಸ್ಮರಿಸಿಕೊಂಡರು.

ಇಂದು ಮೈಸೂರು ದಸರಾ ಹಬ್ಬಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ಅಪ್ಪನ ಹೆಗಲ ಮೇಲೆ ಕೂತು ದಸರಾ ನೋಡುತ್ತಿದ್ದೆ. ಆಗ ನನಗೆ ಐದಾರು ವರ್ಷ ಇದ್ದಿರಬಹುದು. ನೋಡು ನೋಡು ಅಗೋ ಮೈಸೂರು ಮಹಾರಾಜ ಕಾಣ್ತಿದ್ದಾರೆ ಅಂತಿದ್ರು. ನನಗೆ ಕಾಣದೇ ಇದ್ರೂ ಅಪ್ಪ ತೋರಿಸಿದ ಕಡೆ ನಮಸ್ಕಾರ ಮಾಡ್ತಿದ್ದೆ. ಮುಂದೆ ಓದಲು ಮೈಸೂರಿಗೆ ಬಂದಾಗ ಪ್ರತಿ ದಸರಾದಲ್ಲೂ ತಪ್ಪದೇ ವಸ್ತು ಪ್ರದರ್ಶನಕ್ಕೆ ಹೋಗ್ತಿದ್ದೆ ಎಂದರು.

ಕರ್ನಾಟಕದಲ್ಲಿ ಕನ್ನಡ ಬಾರದವರ ಬಗ್ಗೆ ಸಮೀಕ್ಷೆ ಮಾಡಿ: ಮೈಸೂರು ದಸರಾ ಉದ್ಘಾಟಕ ಹಂಸಲೇಖ ಮನವಿ

ಇಡೀ ಜಗತ್ತಿಗೆ ಕನ್ನಡ ನಾಡಿನ ವೈಭೋಗ ತಿಳಿಸುವ ಕಾರ್ಯ ದಸರಾ ಮೂಲಕ ಆಗುತ್ತಿದೆ. ಕಲೆ, ಸಂಸ್ಕೃತಿಯನ್ನು ದೇಶಕ್ಕೆ ತಿಳಿಸುವ ಕೆಲಸ ನಮ್ಮ ಸರ್ಕಾರ ಮಾಡುತ್ತದೆ. ರಾಜ್ಯದ ಅಭಿವೃದ್ಧಿಯನ್ನು ಜನರಿಗೆ ತಿಳಿಸುವ ಕಾರ್ಯವನ್ನು ದಸರಾ ಮೆರವಣಿಗೆ ಮೂಲಕ ಮಾಡುತ್ತೇವೆ. ಕಲೆ, ಸಂಸ್ಕೃತಿ, ಸಂಪ್ರದಾಯ ನಮ್ಮ ನಾಡಿನಲ್ಲಿ ಶ್ರೀಮಂತವಾಗಿದೆ. ಕರ್ನಾಟಕ ಜನ ಸುಸಂಸ್ಕೃತ ಜನ. ನಮ್ಮಲ್ಲಿ ಪ್ರೀತಿ, ವಿಶ್ವಾಸ ಹೆಚ್ಚಿದೆ. ಪರಸ್ಪರ ಪ್ರೀತಿ, ವಿಶ್ವಾಸ, ಗೌರವದಿಂದ ಬದುಕುವುದು ಮುಖ್ಯ.  ದೇಶ ಮತ್ತು ರಾಜ್ಯಕ್ಕೆ ಇದು ತುಂಬಾ ಅಗತ್ಯ ಎಂದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ
ಚುಂಚ ಶ್ರೀ ಬಳಿ ಕೈ ಮುಗಿದು ಎಚ್‌ಡಿಕೆ ಕ್ಷಮೆ