ಜಾತಿಗಣತಿ ವರದಿ ಸಲ್ಲಿಕೆಗೆ ಹೆಗ್ಡೆ ಸಮಯ ಕೇಳಿದ್ರೆ ಕೊಡುವೆ: ಸಿಎಂ ಸಿದ್ದರಾಮಯ್ಯ

Published : Jan 26, 2024, 05:45 AM IST
ಜಾತಿಗಣತಿ ವರದಿ ಸಲ್ಲಿಕೆಗೆ ಹೆಗ್ಡೆ ಸಮಯ ಕೇಳಿದ್ರೆ ಕೊಡುವೆ: ಸಿಎಂ ಸಿದ್ದರಾಮಯ್ಯ

ಸಾರಾಂಶ

ಶ್ರೀರಾಮ ಸರ್ವಜನಾಂಗದ ವ್ಯಕ್ತಿ. ಆತನ ರಾಜ್ಯಭಾರದಲ್ಲಿ ಎಲ್ಲಾ ವರ್ಗದ ಜನರಿಗೂ ಸಮಾನ ನ್ಯಾಯ ನೀಡಿದ್ದ. ಶ್ರೀರಾಮ ಎಲ್ಲಾ ಜನರಿಗೂ ನ್ಯಾಯಕೊಟ್ಟ. ಆದ್ದರಿಂದಲೇ ರಾಮರಾಜ್ಯದ ಕಲ್ಪನೆ ಬಂತು. ಎಲ್ಲಾ ಜನರು ಆತನ ಕಾಲದಲ್ಲಿ ಸುಖಿಯಾಗಿದ್ದಾಗಿ ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ 

ಮೈಸೂರು(ಜ.26):  ರಾಜಕೀಯವಾಗಿ ರಾಮನನ್ನು ಬಿಜೆಪಿ ಬಳಸಿಕೊಂಡರೂ ಪ್ರಬುದ್ಧ ಮತದಾರರು ಸಂವಿಧಾನದ ಆಶಯದಂತೆ ನಡೆದುಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀರಾಮ ಸರ್ವಜನಾಂಗದ ವ್ಯಕ್ತಿ. ಆತನ ರಾಜ್ಯಭಾರದಲ್ಲಿ ಎಲ್ಲಾ ವರ್ಗದ ಜನರಿಗೂ ಸಮಾನ ನ್ಯಾಯ ನೀಡಿದ್ದ. ಶ್ರೀರಾಮ ಎಲ್ಲಾ ಜನರಿಗೂ ನ್ಯಾಯಕೊಟ್ಟ. ಆದ್ದರಿಂದಲೇ ರಾಮರಾಜ್ಯದ ಕಲ್ಪನೆ ಬಂತು. ಎಲ್ಲಾ ಜನರು ಆತನ ಕಾಲದಲ್ಲಿ ಸುಖಿಯಾಗಿದ್ದಾಗಿ ತಿಳಿಸಿದರು.

ವಾರದೊಳಗೆ ಜಾತಿಗಣತಿ ವರದಿ ಸಿಎಂಗೆ ಸಲ್ಲಿಕೆ: ಜಯಪ್ರಕಾಶ್‌ ಹೆಗ್ಡೆ

ರಾಜಕೀಯವಾಗಿ ಬಳಸಿಕೊಳ್ಳಬೇಕು ಎಂಬ ಕಾರಣಕ್ಕೆ ಆತುರವಾಗಿ ಮತ್ತು ಅಪೂರ್ಣಗೊಂಡಿರುವ ಮಂದಿರವನ್ನು ಉದ್ಘಾಟಿಸಲಾಗಿದೆ. ದೇಶವು ಜಾತ್ಯತೀತ ರಾಷ್ಟ್ರ. ಸಂವಿಧಾನವನ್ನು ಒಪ್ಪಿಕೊಂಡಿರುವ ದೇಶ. ಏನೇ ಮಾಡಿದರೂ ಅದು ನಡೆಯಲ್ಲ. ಶ್ರೀರಾಮ ಸರ್ವಜನಾಂಗದ ವ್ಯಕ್ತಿ. ರಾಮರಾಜ್ಯದ ಕಲ್ಪನೆಯ ಆಡಳಿತವನ್ನು ಕಂಡವರು. ಕಾಡಿಗೆ ಯಾವ ಕಾರಣಕ್ಕಾಗಿ ಹೋದ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹಾಗಾಗಿ, ಏನೇ ಮಾಡಿದರೂ ಅದು ನಡೆಯಲ್ಲ ಎಂದರು.

ನಾನು ಹಿಂದೂ ಧರ್ಮದಂತೆ ನಡೆಯುತ್ತೇನೆ. ಇಸ್ಲಾಂ, ಕ್ರೈಸ್ತ, ಬೌದ್ದ, ಸಿಖ್ ಅವರವರ ಧರ್ಮದಂತೆ ನಡೆದುಕೊಳ್ಳುತ್ತಾರೆ. ಎಲ್ಲಾ ಧರ್ಮಗಳಲ್ಲೂ ಮನುಷ್ಯತ್ವವನ್ನು ಪ್ರೀತಿಸುವ ಗುಣಗಳು ಇವೆಯೇ ಹೊರತು ದ್ವೇಷಿಸುವಂತೆ ಹೇಳಿಲ್ಲ. ಆಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಗೆ ತಡೆಯಾಕಿರುವ ಜತೆಗೆ ಅವರ ಮೇಲೆ ಎಫ್‌ಐಆರ್ ದಾಖಲಿಸಿರುವುದು ರಾಜಕೀಯ ಪ್ರೇರಿತ ಮತ್ತು ಉದ್ದೇಶ ಪೂರ್ವಕ ಎಂದು ಅವರು ಟೀಕಿಸಿದರು.
ದೇಶದಲ್ಲಿ ಕಾಡುತ್ತಿರುವ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಯಾತ್ರೆ ಸಫಲವಾಗದಂತೆ ತಡೆಯುವ ಕೆಲಸ ಮಾಡಲಾಗುತ್ತಿದೆ. ಇದು ಮುಂದಿನ ದಿನಗಳಲ್ಲಿ ತಿರುಗುಬಾಣವಾಗಲಿದೆ ಎಂದರು.

ಇಂಡಿಯಾ ಒಕ್ಕೂಟದಲ್ಲಿನ ಮೈತ್ರಿ ಪಕ್ಷಗಳ ಸ್ವತಂತ್ರ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಾನೇನು ಪ್ರತಿಕ್ರಿಯೆ ನೀಡಲ್ಲ. ನನಗೇನೂ ಹೆಚ್ಚಿನ ಮಾಹಿತಿ ಇಲ್ಲ. ಈ ಬಗ್ಗೆ ಚುನಾವಣೆ ನಡೆಯುವ ತನಕ ಮಾತುಕತೆ, ಚರ್ಚೆಗಳು ಇರುತ್ತವೆ. ಯಾವುದು ಅಂತಿಮವಾಗಿರಲ್ಲ ಎಂದರು.

ಜಾತಿ ಗಣತಿ ವರದಿ ನೋಡದೇ ವಿರೋಧ ಏಕೆ?: ಸಚಿವ ತಂಗಡಗಿ

ಜಾತಿಗಣತಿ ವರದಿ ಸಲ್ಲಿಸುವ ಕುರಿತು ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಸಮಯ ಕೇಳಿಲ್ಲ. ಸಮಯ ಕೇಳಿದರೆ ಕೊಡುತ್ತೇನೆ. ವರದಿ ಸ್ವೀಕಾರ ಮಾಡುವ ಮುನ್ನವೇ ಅಪಸ್ವರದ ಮಾತುಗಳು ಬೇಡ. ವರದಿಯಲ್ಲಿ ಏನಿದೆ ಎಂಬುದು ನನಗೂ ಗೊತ್ತಿಲ್ಲ, ಅದು ವೈಜ್ಞಾನಿಕವಾಗಿದೆಯೋ, ಅವೈಜ್ಞಾನಿಕವಾಗಿದೆಯೋ ಎಂಬುದು ನೋಡಿದ ಮೇಲಲ್ಲವೇ ತಿಳಿಯುವುದು? ನಿಮಗೇನಾದರೂ ಗೊತ್ತಿದೆಯೇ ಅವರು ಪ್ರಶ್ನಿಸಿದರು.

ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವುದಕ್ಕೆ ಪಟ್ಟಿ ಅಂತಿಮಗೊಳಿಸಿ ಹೈಕಮಾಂಡ್‌ ಗೆ ಕಳುಹಿಸಲಾಗಿದೆ. ಅದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಒಪ್ಪಿಗೆ ದೊರೆಯುತ್ತಿದ್ದಂತೆ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು. ಸಂವಿಧಾನಕ್ಕೆ ಅಪಾಯ ಆಗುತ್ತಿದೆ ಎಂದು ಹೇಳಲಾಗದು. ಆದರೆ ಸಂವಿಧಾನಕ್ಕೆ ಧಕ್ಕೆ ತರುವ ಮತ್ತು ಅಗೌರವವನ್ನುಂಟು ಮಾಡುವ ಕಲಸ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ