ಅಕ್ಕಿ ಕದನ: 'ಒಪ್ಪಿಗೆ ಪತ್ರ' ಬಹಿ​ರಂಗ ಪಡಿಸಿದ ಸಿಎಂ, ಸಿ.ಟಿ.ರವಿಗೆ ಸಿದ್ದರಾಮಯ್ಯ ಟಾಂಗ್‌

Published : Jun 17, 2023, 08:56 AM IST
ಅಕ್ಕಿ ಕದನ: 'ಒಪ್ಪಿಗೆ ಪತ್ರ' ಬಹಿ​ರಂಗ ಪಡಿಸಿದ ಸಿಎಂ, ಸಿ.ಟಿ.ರವಿಗೆ ಸಿದ್ದರಾಮಯ್ಯ ಟಾಂಗ್‌

ಸಾರಾಂಶ

ಬಿಜೆಪಿ ನಾಯಕರು ಕೇಳುತ್ತಿರುವ ಭಾರತೀಯ ಆಹಾರ ನಿಗಮದ ಒಪ್ಪಿಗೆ ಪತ್ರ ಇಲ್ಲಿದೆ’ ಎಂದು ಹೇಳಿ ಎಫ್‌ಸಿಐ ರಾಜ್ಯ ಸರ್ಕಾರಕ್ಕೆ ಬರೆದಿದ್ದ ಎರಡೂ ಪತ್ರಗಳನ್ನೂ ಟ್ವೀಟರ್‌ನಲ್ಲಿ ಹಂಚಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು(ಜೂ.17):  ಭಾರತೀಯ ಆಹಾರ ನಿಗಮವು ರಾಜ್ಯಕ್ಕೆ ಅಕ್ಕಿ ನೀಡುವುದಾಗಿ ಹೇಳಿದ್ದ ಒಪ್ಪಿಗೆ ಪತ್ರ (ಕಮಿಟ್‌ಮೆಂಟ್‌) ತೋರಿಸಲಿ ಎಂದು ಬಿಜೆಪಿಯ ಸಿ.ಟಿ. ರವಿ ಸವಾಲು ಹಾಕಿದ್ದಾರೆ. ಇಂತಹ ಬೇಜವಾಬ್ದಾರಿ ಹೇಳಿಕೆಗಳಿಂದಲೇ ರಾಜ್ಯದ ಪ್ರಜ್ಞಾವಂತ ಮತದಾರರು ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳುಹಿಸಿರುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ‘ಬಿಜೆಪಿ ನಾಯಕರು ಕೇಳುತ್ತಿರುವ ಭಾರತೀಯ ಆಹಾರ ನಿಗಮದ ಒಪ್ಪಿಗೆ ಪತ್ರ ಇಲ್ಲಿದೆ’ ಎಂದು ಹೇಳಿ ಎಫ್‌ಸಿಐ ರಾಜ್ಯ ಸರ್ಕಾರಕ್ಕೆ ಬರೆದಿದ್ದ ಎರಡೂ ಪತ್ರಗಳನ್ನೂ ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದಾರೆ.

‘ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳುಹಿಸಿರುವುದು. ಸಿ.ಟಿ. ರವಿ ಮತ್ತಿತರ ಬಿಜೆಪಿ ನಾಯಕರು ಮೊದಲು ಕೇಂದ್ರ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕು. ಅದನ್ನು ಬಿಟ್ಟು ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನ ವಿರೋಧಿ ನಿಲುವನ್ನು ಬೆಂಬಲಿಸುವುದು ತರವಲ್ಲ’ ಎಂದು ಕಿಡಿ ಕಾರಿದರು.

ಕಾಂಗ್ರೆಸ್‌ನಿಂದ ಮುಂದುವರೆದ ದೋಖಾ ಸಿರೀಸ್: ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ‌ ವಾಗ್ದಾಳಿ

ಪತ್ರದಲ್ಲಿ ಏನಿದೆ?:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೋಸ್ಟ್‌ ಮಾಡಿರುವ ಪತ್ರದಲ್ಲಿ ಭಾರತೀಯ ಆಹಾರ ನಿಗಮವು ರಾಜ್ಯಕ್ಕೆ ಮುಕ್ತ ಮಾರುಕಟ್ಟೆಆಧಾರದ ಮೇಲೆ 2.08 ಲಕ್ಷ ಟನ್‌ ಅಕ್ಕಿ ಮಾರಾಟ ಮಾಡಲು ಒಪ್ಪಿಗೆ ನೀಡಿದೆ. 3,400 ರು. ಪ್ರತಿ ಕ್ವಿಂಟಾಲ್‌ನಂತೆ ಹಾಗೂ ಪ್ರತಿ ಕೆ.ಜಿ.ಗೆ 2.60 ರು. ಸಾಗಣೆ ವೆಚ್ಚದಂತೆ ಮಾರಾಟ ಮಾಡಲಾಗುವುದು. ಪತ್ರ ವ್ಯವಹಾರದ 15 ದಿನಗಳೊಳಗಾಗಿ ಅಕ್ಕಿ ಪೂರೈಸುವುದಾಗಿ ಆಹಾರ ನಿಗಮ ಹೇಳಿದೆ. ಮತ್ತೊಂದು ಪತ್ರದಲ್ಲಿ 13 ಸಾವಿ​ರ ಟನ್‌ ಅಕ್ಕಿ ಪೂರೈಕೆಗೆ ಒಪ್ಪಿಗೆ ನೀಡಿರುವುದಾಗಿ ಹೇಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ