Hubballi: 120 ದಿನಗಳ ಒಳಗಾಗಿ ನೇಹಾ ಹೀರೇಮಠ್‌ ಆರೋಪಿಗೆ ಗರಿಷ್ಠ ಶಿಕ್ಷೆ: ಸಿಎಂ ಭರವಸೆ

Published : Apr 25, 2024, 07:51 PM IST
Hubballi: 120 ದಿನಗಳ ಒಳಗಾಗಿ ನೇಹಾ ಹೀರೇಮಠ್‌ ಆರೋಪಿಗೆ ಗರಿಷ್ಠ ಶಿಕ್ಷೆ: ಸಿಎಂ ಭರವಸೆ

ಸಾರಾಂಶ

ಪ್ರೀತಿ ಒಪ್ಪಿಕೊಳ್ಳದ ಕಾರಣಕ್ಕೆ ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್‌ನಲ್ಲಿಯೇ ಮುಸ್ಲಿಂ ವ್ಯಕ್ತಿ ಫಯಾಜ್‌ನಿಂದ ಭೀಕರವಾಗಿ ಹತ್ಯೆಗೀಡಾದ ನೇಹಾ ಹೀರೇಮಠ ಅವರ ಮನೆಗೆ ಸಿಎಂ ಸಿದ್ದರಾಮಯ್ಯ ಗುರುವಾರ ಭೇಟಿ ನೀಡಿದ್ದಾರೆ.

ಹುಬ್ಬಳ್ಳಿ (ಏ.25): ಮುಸ್ಲಿಂ ಯುವಕ ಫಯಾಜ್‌ನಿಂದ ಭೀಕರವಾಗಿ ಹತ್ಯೆಗೀಡಾದ ಕಾಲೇಜು ಯುವತಿ ಹಾಗೂ ಕಾಂಗ್ರೆಸ್‌ ಕಾರ್ಪೋರೇಟರ್‌ ನಿರಂಜನ್‌ ಹೀರೇಮಠ್‌ ಅವರ ಪುತ್ರಿ ನೇಹಾ ಹೀರೇಮಠ್‌ ಅವರ ಮನೆಗೆ ಸಿಎಂ ಸಿದ್ಧರಾಮಯ್ಯ ಗುರುವಾರ ಭೇಟಿ ನೀಡಿದರು. ಈ ವೇಳೆ ನೇಹಾ ತಂದೆ ತಾಯಿ ನಿರಂಜನ ಹಿರೇಮಠ ತಾಯಿ ಗೀತಾರಿಗೆ ಸಿಎಂ ಸಾಂತ್ವನ ಹೇಳಿದ್ದಾರೆ. ಇದೊಂದು ಘೋರವಾದ ಘಟನೆ. ಇದರಿಂದ ನನಗೆ ಬಹಳ ನೋವಾಗಿದೆ. ಈಗಾಗಲೇ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಇದರಲ್ಲಿ ಮತ್ತೆ ರಾಜಕೀಯ ಮಾಡಲು ಹೋಗೋದಿಲ್ಲ. ಈ ತಂದೆ-ತಾಯಿಗೆ ಧೈರ್ಯ ಹೇಳಲು ಬಂದಿದ್ದೇನೆ. ದೇವರು ಅವರಿಗೆ ಧೈರ್ಯ ನೀಡಲಿ' ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ನಿರಂಜನ ಹಿರೇಮಠ ಕೈಹಿಡಿದು ಸಿಎಂ ಸಂತೈಸಿದ್ದಾರೆ. ಸಿಎಂಗೆ ಸಚಿವ ಸಂತೋಷ ಲಾಡ್, ಎಚ್ ಕೆ ಪಾಟೀಲ್, ಶಾಸಕರುಗಳಾದ ಪ್ರಸಾದ್ ಅಬ್ಬಯ್ಯ,ಎನ್ ಎಚ್ ಕೋನರೆಡ್ಡಿ ಸಾಥ್‌ ನೀಡಿದ್ದರು.

ಹುಬ್ಬಳ್ಳಿಯ ನೇಹಾ ಕುಟುಂಬದ ಜೊತೆಗೆ ನಾವಿದ್ದೇವೆ . ಎಲ್ಲ ಮಗ್ಗಲುಗಳಲ್ಲಿಯೂ ತನಿಖೆ ಮಾಡಲು ಸೂಚಿಸಿದ್ದೇನೆ. ಇದೊಂದು ದುರದೃಷ್ಟ ಘಟನೆ. ಸಿಐಡಿಗೆ ಕೊಟ್ಟಿದ್ದೇವೆ. ಆರೋಪಿಯನ್ನು ಬಂಧಿಸಿದ್ದೇವೆ. ಸಿಐಡಿ ತನಿಖೆ ಆರಂಭಗೊಂಡಿದೆ ಎಂದು ಹೇಳಿದರು. ಸಿಬಿಐ ಕೊಡಬೇಕು ಅನ್ನೋ ಬಿಜೆಪಿ ಬೇಡಿಕೆ ವಿಚಾರದ ಬಗ್ಗೆಯೂ ಮಾತನಾಡಿದ ಅವರು, ಬಿಜೆಪಿ ರಾಜಕೀಯ ಮಾಡುತ್ತಿದೆ. ಒಂದು ಪ್ರಕರಣವನ್ನಾದರೂ ಅವರು ಸಿಬಿಐಗೆ ಕೊಟ್ಟಿದ್ದಾರಾ? ನಮ್ಮ ಅವಧಿಯಲ್ಲಿ ಸಾಕಷ್ಟು ಪ್ರಕರಣಗಳನ್ನು ಸಿಬಿಐ ಗೆಕೊಟ್ಟಿದ್ದೆವು. ಬಿಜೆಪಿ ಅಧಿಕಾರದಲ್ಲಿದ್ದಾಗ ಸಾಕಷ್ಟು ಘಟನೆಗಳಾಗಿವೆ. ಒಂದೇ ಒಂದು ಪ್ರಕರಣ ಅವರು ಸಿಬಿಐಗೆ ಕೊಟ್ಟಿಲ್ಲ. ನೇಹಾ ಕುಟುಂಬದ ಜೊತೆಗೆ ನಾವಿರುತ್ತೇವೆ. ಅವರಿಗೆ ರಕ್ಷಣೆ ಬೇಕಿದ್ದರೆ ಕೊಡುತ್ತೇವೆ . ಸಿಐಡಿ ಅಧಿಕಾರಿಗಳು ತನಿಖೆ ಮಾಡ್ತಾರೆ. ವಿಶೇಷ ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಸುತ್ತಾರೆ. ನಂತರ ಕೋರ್ಟ್ ನಲ್ಲಿ ಟ್ರಯಲ್ ನಡೆಯುತ್ತೆ. ಆದಷ್ಟು ಬೇಗ ನ್ಯಾಯಾಲಯದಲ್ಲಿ ಗರಿಷ್ಠ ಶಿಕ್ಷೆ ಆಗುತ್ತೆ. ಧೈರ್ಯವಾಗಿ ಇರಿ. 120 ದಿನದ ಒಳಗೆ ನ್ಯಾಯ ಕೊಡಿಸೋಣ ಎಂದು ನಿರಂಜನ್ ಹಿರೇಮಠ್ ಅವರ ಬೆನ್ನು ತಟ್ಟಿ ಸಿಎಂ ಸಂತೈಸಿದ್ದಾರೆ.

ಅನಾಮಧೇಯ ವ್ಯಕ್ತಿಗಳು ನಮ್ಮ ಮನೆ ಸುತ್ತಮುತ್ತ ಓಡಾಡುತ್ತಿದ್ದಾರೆ; ನೇಹಾ ತಂದೆ ನಿರಂಜನ ಹಿರೇಮಠ ಆತಂಕ

ಈ ವೇಳೆ ನಿರಂಜನ್‌ ಹೀರೇಮಠ್‌ ಸಿಎಂಗೆ ಕ್ಷಮಿಸಿ ಎಂದು ಮನವಿಯನ್ನೂ ಮಾಡಿದರು. ಘಟನೆ ನಡೆದಾಗ ದುಃಖದಲ್ಲಿ  ಹೇಳಿಕೆ ನೀಡಿದ್ದೆ. ಯಾರನ್ನೂ ನೋಯಿಸುವ ಉದ್ದೇಶ ಇರಲಿಲ್ಲ. ಮಗಳ ಸಾವಿಗೆ ನ್ಯಾಯ ಸಿಗಬೇಕು. ಪಕ್ಷಾತೀತವಾಗಿ ಎಲ್ಲರು ಬೆಂಬಲಸಿದ್ದಾರೆ. ಮುಖ್ಯಮಂತ್ರಿಗಳು ನಮ್ಮ ಬೇಡಿಕೆಯಂತೆ ತ್ವರಿತ ನ್ಯಾಯಾಲಯ ಸ್ಥಾಪಿಸಿ, ಪ್ರಕರಣ ಸಿಐಡಿಗೆ ವಹಿಸಿದ್ದಾರೆ ಎಂದು ಹೇಳಿದರು.

ಹುಬ್ಬಳ್ಳಿ: ನೇಹಾ ಹತ್ಯೆ ನಡೆದ ಸ್ಥಳ ಮಹಜರು ಮಾಡಿದ ಸಿಐಡಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್