
ಬೆಂಗಳೂರು (ಆ.16): ‘ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ದೇಶವನ್ನುದ್ದೇಶಿಸಿ ಮಾತನಾಡುವ ವೇದಿಕೆಯನ್ನು ಆರ್ಎಸ್ಎಸ್ ಅನ್ನು ಹಾಡಿ ಹೊಗಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದುರುಪಯೋಗ ಮಾಡಿಕೊಂಡಿದ್ದಾರೆ. ಅವರ ಈ ನಡೆ ಸ್ವಾತಂತ್ರ್ಯ ಹೋರಾಟ, ರಾಷ್ಟ್ರಧ್ವಜ ಹಾಗೂ ಸಂವಿಧಾನದ ಆಶಯಕ್ಕೆ ಮಾಡಿರುವ ಅವಮಾನ. ಈ ಮಾತುಗಳನ್ನು ಹಿಂಪಡೆದು ಅವರು ದೇಶದ ಜನರ ಕ್ಷಮೆ ಯಾಚಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಇದನ್ನೂ ಓದಿ: Independence Day 2025: ದೇಶದ ಸಂಪತ್ತಿನ ಅಸಮಾನ ಹಂಚಿಕೆಗೆ ಸಿಎಂ ಬೇಸರ; ಭಾಷಣದ ಮುಖ್ಯಾಂಶಗಳು ಇಲ್ಲಿವೆ
ಈ ಬಗ್ಗೆ ಅಧಿಕೃತ ಎಕ್ಸ್ ಖಾತೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಅವರು, ತಮ್ಮ ಕಚೇರಿಯಲ್ಲಿ ಇತ್ತೀಚಿನವರೆಗೆ ತ್ರಿವರ್ಣ ರಾಷ್ಟ್ರಧ್ವಜ ಹಾರಿಸಲು ನಿರಾಕರಿಸಿದ್ದ ಆರ್ಎಸ್ಎಸ್ ಅನ್ನು ಸ್ವಾತಂತ್ರ್ಯ ದಿನಾಚರಣೆಯ ಪವಿತ್ರ ವೇದಿಕೆಯಲ್ಲಿ ಹೊಗಳುವ ಮೂಲಕ ವೇದಿಕೆಯ ಘನತೆ ಹಾಗೂ ಗೌರವಗಳನ್ನು ಮಣ್ಣು ಪಾಲು ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.
ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡುತ್ತಾ ಆರ್ಎಸ್ಎಸ್ಗೆ ಅಭಿನಂದನೆ ಸಲ್ಲಿಸಲು ವೇದಿಕೆ ದುರುಪಯೋಗ ಮಾಡಿಕೊಂಡಿದ್ದಾರೆ.v
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ