
ಬೆಂಗಳೂರು, (ಮಾ.14): ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನಾಳೆ ಅಂದ್ರೆ ಮಾ.14 ಸಂಜೆ 5 ಗಂಟೆಗೆ ವಿಧಾನ ಸೌಧದಲ್ಲಿ ಮಹತ್ವದ ಸಭೆ ಕರೆದಿದ್ದಾರೆ.
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಈ ಮಹತ್ವದ ಸಭೆ ನಡೆಯಲಿದ್ದು, ಕೊರೋನಾ ತಡೆಗೆ ಸರ್ಕಾರದಿಂದ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಸಭೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಕೊರೋನಾ: ಮತ್ತಷ್ಟು ಆತಂಕ
ನೆರೆ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎರಡನೇ ಅಲೆ ಬರದಂತೆ ನಿಯಂತ್ರಿಸಲು ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆಯ ಗುರಿಯನ್ನು ಹೆಚ್ಚಿಸಲಾಗಿದೆ. ಹೆಚ್ಚಿನ ಜನಸಂದಣಿ ತಡೆಗಟ್ಟಲು ಮದುವೆ ಇನ್ನಿತರ ಆಚರಣೆ, ಧಾರ್ಮಿಕ, ರಾಜಕೀಯ ಸಭೆ-ಸಮಾರಂಭಗಳಿಗೆ ನೂತನ ನಿಯಮಗಳನ್ನು ಜಾರಿ ಮಾಡಲಾಗಿದೆ.
ಇನ್ನು ಸಭೆಯಲ್ಲಿ ನೈಟ್ ಕರ್ಫ್ಯೂ ಅಥವಾ ವೀಕ್ಲಿ ಲಾಕ್ಡೌನ್ ಏನಾದರೂ ಜಾರಿಯಾಗುತ್ತಾ ಎನ್ನುವ ಗುಸು-ಗುಸು ಸುದ್ದಿ ಹಳ್ಳಿಗಳಲ್ಲಿ ಹರಿದಾಡುತ್ತಿದೆ.
ಇನ್ನು ಈ ಸುದ್ದಿ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ, ಮತ್ತೆ ಲಾಕ್ಡೌನ್ ಆಗಬಾರದು ಅಂದರೆ ಜನ ಸಹಕರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಲಾಕ್ಡೌನ್ ಬಗ್ಗೆ ಚಿಂತನೆ ಇಲ್ಲ. ಆದರೆ ಜನ ಸಹಕರಿಸಬೇಕು. ಈಗಾಗಲೇ ಸಾಕಷ್ಟು ನಷ್ಟ ಆಗಿದೆ. ಈ ಸಂಬಂಧ ನಾಳೆ ಸಭೆ ಕರೆದಿದ್ದೇನೆ, ಮಹತ್ವದ ಚರ್ಚೆಗಳು ಆಗುತ್ತದೆ. ಕೊರೊನಾ ಕೈಮೀರಿ ಹೋಗುತ್ತಿದೆ, ದಿನೇ ದಿನೇ ಹೆಚ್ಚಾಗುತ್ತಿದೆ. ಮಾಸ್ಕ್ ಹಾಕಬೇಕು. ಕೋವಿಡ್ ನಿಯಮ ಪಾಲಿಸಬೇಕು ಈ ಮೂಲಕ ಅದನ್ನ ನಾವು ಕಂಟ್ರೋಲ್ ಮಾಡಬಹುದು ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ