ಜಗನ್‌ಗೆ ಪತ್ರ ಬರೆದ ಸಿಎಂ ಯಡಿಯೂರಪ್ಪ!

Published : Feb 13, 2020, 10:26 AM IST
ಜಗನ್‌ಗೆ ಪತ್ರ ಬರೆದ ಸಿಎಂ ಯಡಿಯೂರಪ್ಪ!

ಸಾರಾಂಶ

ತಿರುಪತಿ ದೇವಾಲಯದ ಬಳಿ ರಾಜ್ಯದ ಭಕ್ತರಿಗೆ ಅನುಕೂಲವಾಗಲು ನಿರ್ಮಿಸಲುದ್ದೇಶಿಸಿರುವ ವಸತಿ ಗೃಹ| ತಿರುಪತಿಯಲ್ಲಿ ರಾಜ್ಯದ ಕಟ್ಟಡಕ್ಕೆ ಒಪ್ಪಿಗೆ ಕೋರಿ ಜಗನ್‌ಗೆ ಬಿಎಸ್‌ವೈ ಪತ್ರ| 

ಬೆಂಗಳೂರು[ಫೆ.13]: ತಿರುಪತಿ ದೇವಾಲಯದ ಬಳಿ ರಾಜ್ಯದ ಭಕ್ತರಿಗೆ ಅನುಕೂಲವಾಗಲು ನಿರ್ಮಿಸಲುದ್ದೇಶಿಸಿರುವ ವಸತಿ ಗೃಹಗಳ ಅಭಿವೃದ್ಧಿ ಯೋಜನಾ ವರದಿಯನ್ನು ತಿರುಪತಿ ತಿರುಮಲ ದೇವಾಲಯ ಮಂಡಳಿಗೆ ಸಲ್ಲಿಸಲಾಗಿದ್ದು, ವರದಿಗೆ ಕಾನೂನಾತ್ಮಕ ಅನುಮೋದನೆ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಆಂಧ್ರಪ್ರದೇಶ ಸರ್ಕಾರವನ್ನು ಕೋರಿದ್ದಾರೆ.

ಈ ಸಂಬಂಧ ಯಡಿಯೂರಪ್ಪ ಅವರು ಇತ್ತೀಚೆಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ ಅವರಿಗೆ ಪತ್ರ ಬರೆದಿದ್ದಾರೆ.

ಹಳೆಯ ಕಟ್ಟಡ, ವಸತಿ ಗೃಹಗಳ ಕಟ್ಟಡಗಳನ್ನು ನೆಲಸಮಗೊಳಿಸಿದ್ದು, ಅಲ್ಲಿ ಸುಸಜ್ಜಿತವಾದ ಕಟ್ಟಡ ನಿರ್ಮಿಸಲು ಮುಂದಾಗಿದೆ. ಕರ್ನಾಟಕ ರಾಜ್ಯ ಚಾರಿಟಿಯ ಉಸ್ತುವಾರಿಯಲ್ಲಿಯೇ ಇದು ನಡೆದಿದೆ. ಆದರೆ, ಖಾಸಗಿ ವ್ಯಕ್ತಿಯೊಬ್ಬರು ಇದನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಲಯವು ಸಹ ವಿಚಾರಣೆ ನಡೆಸಿ ಅರ್ಜಿಯನ್ನು ತಿರಸ್ಕರಿಸಿದೆ. ಸುಸಜ್ಜಿತ ಕಟ್ಟಡ ನಿರ್ಮಾಣ ಸಂಬಂಧ ರಾಜ್ಯ ಸರ್ಕಾರ ಮತ್ತು ಟಿಟಿಡಿ ನಡುವೆ ಒಪ್ಪಂದ ಕೂಡ ಮಾಡಿಕೊಳ್ಳಲಾಗಿದೆ. ರಾಜ್ಯದ ಭಕ್ತರ ಅನುಕೂಲಕ್ಕಾಗಿ ನಿರ್ಮಾಣ ಮಾಡಲು ತೀರ್ಮಾನಿಸಿರುವ ಕಟ್ಟಡಗಳಿಗೆ ಅನುಮೋದನೆ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಮೈಸೂರು ಮಹಾರಾಜರು ಸಹ ತಿರುಪತಿ ದೇವಾಲದ ಆವರಣದಲ್ಲಿ ನಾಡಿನ ಭಕ್ತರ ಅನುಕೂಲಕ್ಕಾಗಿ ಕಲ್ಯಾಣ ಮಂಟಪ ಮತ್ತು ವಸತಿ ಗೃಹಗಳನ್ನು ನಿರ್ಮಿಸಿದ್ದರು. ಆಗಿನಿಂದಲೂ ರಾಜ್ಯ ಮತ್ತು ಟಿಟಿಡಿ ನಡುವೆ ಅವಿನಾಭಾವ ಸಂಬಂಧವಿದ್ದು, ಅದನ್ನು ಮುಂದುವರಿಸಿಕೊಂಡು ಹೋಗಲಾಗುತ್ತಿದೆ ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ