ಬೇರೆ ರಾಜ್ಯಗಳ ಸಿಎಂಗಳೂ ಗ್ಯಾರಂಟಿ ಮೆಚ್ಚಿದ್ದಾರೆ: ಡಿ.ಕೆ. ಶಿವಕುಮಾರ್‌

Published : Aug 06, 2023, 12:00 AM IST
ಬೇರೆ ರಾಜ್ಯಗಳ ಸಿಎಂಗಳೂ ಗ್ಯಾರಂಟಿ ಮೆಚ್ಚಿದ್ದಾರೆ: ಡಿ.ಕೆ. ಶಿವಕುಮಾರ್‌

ಸಾರಾಂಶ

371 (ಜೆ) ಕಲಂ ಅನ್ನು ಜಾರಿಗೆ ತಂದು ಮಲ್ಲಿಕಾರ್ಜುನ ಖರ್ಗೆಯವರು ಈ ಭಾಗದಲ್ಲಿ ಜ್ಯೋತಿ ಬೆಳಗಿಸಿದ್ದಾರೆ. ಈಗ ಕಾಂಗ್ರೆಸ್‌ ಪಕ್ಷ ರಾಜ್ಯಾದ್ಯಂತ ‘ಗೃಹಜ್ಯೋತಿ’ ಯೋಜನೆ ಜಾರಿಗೊಳಿಸುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್‌ 

ಕಲಬುರಗಿ(ಆ.06):  ನಮ್ಮ ಸರ್ಕಾರದ ಗ್ಯಾರಂಟಿಗಳು ಬೇರೆ ರಾಜ್ಯದ ಸಿಎಂಗಳ ಮೆಚ್ಚುಗೆಗೆ ಪಾತ್ರವಾಗಿವೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ನಮ್ಮ ತರಹದ ಯೋಜನೆಗಳನ್ನು ಜಾರಿಗೆ ತರ​ಲು ಒತ್ತಡ ಬರುತ್ತಿದೆಯಂತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು.

ನಗರದಲ್ಲಿ ಶನಿವಾರ ‘ಗೃಹಜ್ಯೋತಿ’ ಯೋಜನೆಗೆ ಚಾಲನೆ ನೀಡುವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. 371 (ಜೆ) ಕಲಂ ಅನ್ನು ಜಾರಿಗೆ ತಂದು ಮಲ್ಲಿಕಾರ್ಜುನ ಖರ್ಗೆಯವರು ಈ ಭಾಗದಲ್ಲಿ ಜ್ಯೋತಿ ಬೆಳಗಿಸಿದ್ದಾರೆ. ಈಗ ಕಾಂಗ್ರೆಸ್‌ ಪಕ್ಷ ರಾಜ್ಯಾದ್ಯಂತ ‘ಗೃಹಜ್ಯೋತಿ’ ಯೋಜನೆ ಜಾರಿಗೊಳಿಸುತ್ತಿದೆ ಎಂದು ತಿಳಿಸಿದ್ದಾರೆ.

ಸರ್ಕಾರದ 4ನೇ ಗ್ಯಾರಂಟಿಗೆ ಕಲಬುರಗಿಯಲ್ಲಿ ಅಧಿಕೃತ ಚಾಲನೆ: ಗೃಹಜ್ಯೋತಿ ಅರ್ಜಿಗೆ ನೋ ಡೆಡ್‌ಲೈನ್

ಬೆಂಗಳೂರಿನಲ್ಲಿ ನಡೆದ ‘ನಾಯಕಿ’ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಗಾಂಧಿಯವರು ಗೃಹಿಣಿಯರಿಗೆ ಮಾಸಿಕ ತಲಾ . 2,000 ನೀಡುವ ಕುರಿತು ಗ್ಯಾರಂಟಿ ನೀಡಿದ್ದರು. ಆ ಗ್ಯಾರಂಟಿಯನ್ನು ಕೂಡ ಜಾರಿಗೊಳಿಸುತ್ತೇವೆ. ಈಗಾಗಲೇ, ಶಕ್ತಿ ಹಾಗೂ ಅನ್ನಭಾಗ್ಯ ಯೋಜನೆಗಳು ಜಾರಿಗೊಂಡಿವೆ. ನಮ್ಮ ಸರ್ಕಾರದ ಗ್ಯಾರಂಟಿಗಳು ಬೇರೆ ರಾಜ್ಯದ ಸಿಎಂಗಳ ಮೆಚ್ಚುಗೆಗೆ ಪಾತ್ರವಾಗಿವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ
ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!