ಪ್ರಿಯಾಂಕ್‌ ಆರೆಸ್ಸೆಸ್‌ ಕುರಿತು ಹೇಳಿದ್ದರಲ್ಲಿ ತಪ್ಪೇನಿದೆ? : ಸಿಎಂ ಪ್ರಶ್ನೆ

Kannadaprabha News   | Kannada Prabha
Published : Oct 16, 2025, 05:44 AM IST
siddaramaiah

ಸಾರಾಂಶ

‘ಆರ್‌ಎಸ್‌ಎಸ್ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದರಲ್ಲಿ ತಪ್ಪೇನಿದೆ? ಸರ್ಕಾರಿ ಜಾಗದಲ್ಲಿ ಅದರ ಚಟುವಟಿಕೆಗೆ ನಿರ್ಬಂಧ ಹಾಕುವಂತೆ ಅವರು ಪತ್ರ ಬರೆದಿದ್ದಾರೆ. ತಮಿಳುನಾಡಿನಲ್ಲಿ ಯಾವ ರೀತಿ ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಸರ್ಕಾರದ ಕಾರ್ಯದರ್ಶಿಗೆ ಸೂಚಿಸಲಾಗಿದೆ.

ಮೈಸೂರು : ‘ಆರ್‌ಎಸ್‌ಎಸ್ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದರಲ್ಲಿ ತಪ್ಪೇನಿದೆ? ಸರ್ಕಾರಿ ಜಾಗದಲ್ಲಿ ಅದರ ಚಟುವಟಿಕೆಗೆ ನಿರ್ಬಂಧ ಹಾಕುವಂತೆ ಅವರು ಪತ್ರ ಬರೆದಿದ್ದಾರೆ. ತಮಿಳುನಾಡಿನಲ್ಲಿ ಯಾವ ರೀತಿ ಆರ್‌ಎಸ್‌ಎಸ್‌ಗೆ ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಸರ್ಕಾರದ ಕಾರ್ಯದರ್ಶಿಗೆ ಸೂಚಿಸಲಾಗಿದೆ. ಅದನ್ನು ಆಧರಿಸಿ ಮುಂದನ ಕ್ರಮ ಜರುಗಿಸಲಾಗುತ್ತದೆ’ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಮೈಸೂರು ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಮಿಳುನಾಡು ಮಾದರಿಯಲ್ಲಿ ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಬ್ಯಾನ್‌ ಮಾಡುವಂತೆ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ತಮಿಳುನಾಡಿನಲ್ಲಿ ಯಾವ ರೀತಿ ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಅದನ್ನು ಪರಿಶೀಲಿಸಲಾಗುವುದು’ ಎಂದು ತಿಳಿಸಿದರು.

ಇನ್ನೂ ಮೈಸೂರಿನ ನಡೆದ ಬೌದ್ಧ ಮಹಾ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿಯೂ ಈ ಬಗ್ಗೆ ಪ್ರಸ್ತಾಪ ಮಾಡಿದ ಸಿದ್ದರಾಮಯ್ಯ ಅವರು, ಬಿಜೆಪಿಯವರು ಯಾವಾಗಲೂ ತಾಕತ್ತಿದ್ದರೆ ಆರ್‌ಎಸ್‌ಎಸ್‌ ಬ್ಯಾನ್ ಮಾಡಿ ಎಂದು ಸವಾಲು ಹಾಕುತ್ತಾರೆ. ಕಳೆದ ಚುನಾವಣೆಯಲ್ಲೂ ಅದೇ ಹೇಳಿದ್ದರು. ಆಗ ಅವರ ಸ್ಥಿತಿ ಏನಾಯಿತು ಗೊತ್ತಲ್ಲ’ ಎಂದು ತಿಳಿಸಿದರು.

ಸರ್ಕಾರಿ ಜಾಗಗಳಲ್ಲಿ ಯಾವುದೇ ಸಂಘಟನೆಗಳಿಗೆ ಕಾರ್ಯಕ್ರಮಕ್ಕೆಅವಕಾಶ ಇಲ್ಲ ಎಂಬುದು ತಮಿಳುನಾಡಿನ ನೀತಿಯಾಗಿದ್ದು. ಅದನ್ನು ಪರಾಮರ್ಶಿಸಲಾಗುತ್ತದೆ ಎಂದು ಹಾಸನದಲ್ಲೂ ಸಿಎಂ ನುಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!