ಇನ್ನೂ ಮುಗಿದಿಲ್ಲ ಕಲ್ಲಿದ್ದಲು ಕೊರತೆ: 4 ಘಟಕ ಬಂದ್‌!

Published : Apr 22, 2022, 06:04 AM IST
ಇನ್ನೂ ಮುಗಿದಿಲ್ಲ ಕಲ್ಲಿದ್ದಲು ಕೊರತೆ: 4 ಘಟಕ ಬಂದ್‌!

ಸಾರಾಂಶ

* ವಿದ್ಯುತ್‌ ಉತ್ಪಾದನೆ ವ್ಯತ್ಯಯ * ಇನ್ನೂ ಮುಗಿದಿಲ್ಲ ಕಲ್ಲಿದ್ದಲು ಕೊರತೆ: 4 ಘಟಕ ಬಂದ್‌ * ಕೆಪಿಟಿಸಿಎಲ್‌ನಿಂದ ಅಧಿಕೃತ ಮಾಹಿತಿ

ಬೆಂಗಳೂರು(ಏ.22): ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಿಂದ ಶಾಖೋತ್ಪನ್ನ ವಿದ್ಯುತ್‌ ಘಟಕಗಳಲ್ಲಿ ವಿದ್ಯುತ್‌ ಉತ್ಪಾದನೆ ಸ್ಥಗಿತ ಮುಂದುವರೆದಿದೆ. ಕೆಪಿಟಿಸಿಎಲ್‌ ಅಧಿಕೃತ ಮಾಹಿತಿ ಪ್ರಕಾರ ಬುಧವಾರ ಆರ್‌ಟಿಪಿಎಸ್‌ನ 6 ಹಾಗೂ 7ನೇ ಘಟಕ ಸೇರಿ 4 ಘಟಕಗಳು ಕಲ್ಲಿದ್ದಲು ಕೊರತೆಯಿಂದಾಗಿಯೇ ಸ್ಥಗಿತಗೊಂಡಿದೆ. ಪರಿಣಾಮ ವಿದ್ಯುತ್‌ ಉತ್ಪಾದನೆಯಲ್ಲಿ ವ್ಯತ್ಯಯ ಮುಂದುವರೆದಿದೆ.

ಏ.16ರಿಂದ ರಾಜ್ಯದಲ್ಲಿ ಕಲ್ಲಿದ್ದಲಿಗೆ ತೀವ್ರ ಅಭಾವ ಸೃಷ್ಟಿಯಾಗಿದ್ದು ಕಲ್ಲಿದ್ದಲು ಕೊರತೆಯಿಂದ ಬರೋಬ್ಬರಿ ಆರು ಶಾಖೋತ್ಪನ್ನ ವಿದ್ಯುತ್‌ ಘಟಕಗಳು ಸ್ಥಗಿತಗೊಂಡಿದ್ದವು. ಇದೀಗ ಬುಧವಾರ ಪೂರೈಕೆಯ ತುಸು ಹೆಚ್ಚಾಗಿದ್ದರೂ ಕೊರತೆ ಮುಂದುವರೆದಿದೆ. ಪರಿಣಾಮ ನಾಲ್ಕು ಘಟಕಗಳು ಸ್ಥಗಿತಗೊಂಡಿದ್ದವು.

ರಾಯಚೂರಿನ ಶಾಖೋತ್ಪನ್ನ ವಿದ್ಯುತ್‌ ಘಟಕದ (ಆರ್‌ಟಿಪಿಎಸ್‌) 6 ಹಾಗೂ 7ನೇ ಘಟಕ ಕಲ್ಲಿದ್ದಲು ಕೊರತೆ ಕಾರಣಕ್ಕಾಗಿಯೇ ಬುಧವಾರ ಸ್ಥಗಿತಗೊಳಿಸಲಾಗಿದೆ. ಇನ್ನು ಉಡುಪಿಯ ಯುಪಿಸಿಎಲ್‌ ಘಟಕ ಕಲ್ಲಿದ್ದಲು ಕೊರತೆಯಿಂದ ಏ.16ರಿಂದ (ಏ.20ರಂದು ಸೇರಿ) ಸ್ಥಗಿತ ಸ್ಥಿತಿಯಲ್ಲೇ ಮುಂದುವರೆದಿದೆ ಎಂದು ಇಂಧನ ಇಲಾಖೆ ಅಧಿಕಾರಿಗಳು ‘ಕನ್ನಡಪ್ರಭ’ಕ್ಕೆ ಖಚಿತಪಡಿಸಿದ್ದಾರೆ.

ಪರಿಣಾಮ ಬೇಸಿಗೆ ನಡುವೆಯೇ ರಾಜ್ಯದಲ್ಲಿ ಸರಾಸರಿ ವಿದ್ಯುತ್‌ ಪೂರೈಕೆಗಿಂತಲೂ ಕಡಿಮೆ ವಿದ್ಯುತ್‌ ಬುಧವಾರ ಪೂರೈಕೆಯಾಗಿದೆ. ಸರಾಸರಿ 13,500 ಮೆ.ವ್ಯಾಟ್‌ನಿಂದ 14 ಸಾವಿರ ಮೆ.ವ್ಯಾಟ್‌ ವಿದ್ಯುತ್‌ ಬಳಕೆಯಾಗುವ ರಾಜ್ಯದಲ್ಲಿ ಗುರುವಾರ ಗರಿಷ್ಠ 10,484 ಮೆ.ವ್ಯಾಟ್‌, ಕನಿಷ್ಠ 6,565 ಮೆ.ವ್ಯಾಟ್‌ ವಿದ್ಯುತ್‌ ಪೂರೈಕೆಯಾಗಿದೆ.

ಇನ್ನು ರಾಜ್ಯದಲ್ಲಿ ಕಲ್ಲಿದ್ದಲಿನಿಂದ 6,220 ಮೆ.ವ್ಯಾಟ್‌ ವಿದ್ಯುತ್‌ ಉತ್ಪಾದಿಸುವ ಸಾಮರ್ಥ್ಯವಿರುವ 15 ಘಟಕಗಳಲ್ಲಿ ಏಳು ಘಟಕಗಳು ಮಾತ್ರ (4 ಘಟಕ ಮೊದಲೇ ಸ್ಥಗಿತಗೊಂಡಿತ್ತು) ಬುಧವಾರ ಕಾರ್ಯನಿರ್ವಹಿಸಿವೆ. ಇವುಗಳಿಂದ ಕೇವಲ 1,774 (ಗರಿಷ್ಠ) ವಿದ್ಯುತ್‌ ಪೂರೈಕೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: Namratha Gowda ಪ್ರೀತಿಯಲ್ಲಿದ್ದಾರಾ? ಆ ಕಪ್ಪು ಬ್ಯಾಂಡ್‌ ಕೊಟ್ಟ ಸುಳಿವಿನ ಬಗ್ಗೆ Karthik Mahesh ಏನಂದ್ರು?