ಕರ್ನಾಟಕದ ಕರಾವಳಿಗೆ ಈಗ ಚಂಡಮಾರುತ ಲಗ್ಗೆಯ ಭೀತಿ: 3 ದಿನ ಭಾರೀ ಮಳೆ

Published : Jun 07, 2023, 02:00 AM IST
ಕರ್ನಾಟಕದ ಕರಾವಳಿಗೆ ಈಗ ಚಂಡಮಾರುತ ಲಗ್ಗೆಯ ಭೀತಿ: 3 ದಿನ ಭಾರೀ ಮಳೆ

ಸಾರಾಂಶ

ಮುಂಗಾರು ಆಗಮನಕ್ಕೆ ‘ಬಿಪರ್‌ಜಾಯ್‌’ ಅಡ್ಡಿ, ಅರಬ್ಬೀ ಸಮುದ್ರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ, ಮುಂಬರುವ ದಿನಗಳಲ್ಲಿ ಚಂಡಮಾರುತ ರೂಪ ತಾಳುವ ಸಾಧ್ಯತೆ, ನಿನ್ನೆಯಿಂದಲೇ ಕರ್ನಾಟಕದ ಸಮುದ್ರ ತೀರದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ

ನವದೆಹಲಿ(ಜೂ.07):  ಅರಬ್ಬೀ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾ​ಗಿ​ರುವ ವಾಯುಭಾರ ಕುಸಿತ ಮುಂದಿನ ದಿನಗಳಲ್ಲಿ ಚಂಡಮಾರುತ ರೂಪ ತಾಳಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದ​ರಿಂದ ಕರ್ನಾ​ಟಕ ಕರಾ​ವಳಿ ಮಂಗ​ಳ​ವಾ​ರವೇ ಪ್ರಕ್ಷು​ಬ್ಧ​ವಾ​ಗಿದೆ. ಕರ್ನಾ​ಟಕ, ಮಹಾ​ರಾಷ್ಟ್ರ, ಕೇರಳ ಹಾಗೂ ಗುಜ​ರಾತ್‌ ಕರಾ​ವ​ಳಿ​ಗ​ಳಲ್ಲಿ 2-3 ದಿನ ಭಾರಿ ಮಳೆ ಬೀಳುವ ಸಾಧ್ಯತೆ ಇದೆ.

ಆ​ದರೆ, ಇದೇ ಚಂಡ​ಮಾ​ರು​ತ​ವು ಮುಂಗಾರು ಆಗ​ಮ​ನಕ್ಕೆ ಅಡ್ಡಿ ಮಾಡಿದೆ. ಖಾಸಗಿ ಹವಾ​ಮಾ​ನ ಸಂಸ್ಥೆ ಸ್ಕೈಮೆಟ್‌ ಪ್ರಕಾರ, ಮುಂಗಾರು ಜೂ.8 ಅಥವಾ 9ರಂದು ಕೇರಳ ಪ್ರವೇ​ಶಿ​ಸ​ಬ​ಹುದು. ಆದರೆ ಅದು ಪ್ರಬಲ ರೂಪ​ದ​ಲ್ಲಿ​ರದೇ ದುರ್ಬ​ಲ​ವಾ​ಗಿ​ರ​ಲಿದೆ ಎಂದು ಹೇಳ​ಲಾ​ಗಿ​ದೆ. ಈ ಚಂಡಮಾರುತಕ್ಕೆ ಬಂಗಾಳಿ ಭಾಷೆ​ಯ ಬಿಪರ್‌ ಜಾಯ್‌ (ವಿಪತ್ತು) ಎಂದು ಹೆಸರಿಡಲಾಗಿದ್ದು, ಬಾಂಗ್ಲಾದೇಶ ಈ ಹೆಸರನ್ನು ಸೂಚಿಸಿದೆ.

ಮಳೆ​ಗಾಲ ಆರಂಭ ಇನ್ನಷ್ಟು ತಡ: ಮುಂಗಾರು ಆಗ​ಮ​ನಕ್ಕೆ ವಾಯು​ಭಾರ ಕುಸಿತ ಅಡ್ಡಿ

ಉತ್ತ​ರಾಭಿಮುಖ​ವಾಗಿ ಲಗ್ಗೆ:

ಕಡಿಮೆ ಒತ್ತಡ ಪ್ರದೇಶ ಗೋವಾದಿಂದ ನೈಋುತ್ಯ ಭಾಗ​ಕ್ಕೆ 950 ಕಿ.ಮೀ., ಮುಂಬೈನಿಂದ 1,100 ಕಿ.ಮೀ. ಮತ್ತು ಪೋರಬಂದರಿನಿಂದ 1,490 ಕಿ.ಮೀ. ದೂರದಲ್ಲಿದೆ. ಈ ಚಂಡಮಾರುತ ಉತ್ತರಾಭಿಮುಖವಾಗಿ ಚಲಿಸುತ್ತಿದ್ದು, ಜೂ.8ರಂದು ಗೋವಾ, ಮಹಾರಾಷ್ಟ್ರ ಸಮುದ್ರ ತೀರಗಳಲ್ಲಿ ಪ್ರಕ್ಷುಬ್ಧ ವಾತಾವರಣ ಇರಲಿದೆ ಎಂದು ಇಲಾಖೆ ಹೇಳಿದೆ.

ಮಳೆಗಾಲದಲ್ಲಿ ಈ ರಸ್ತೆಗಳು ಡೇಂಜರ್‌.. ಡೇಂಜರ್‌: 65 ಸ್ಥಳಗಳಲ್ಲಿ ಭಾರೀ ನೀರು, ಟ್ರಾಫಿಕ್‌ ಪೊಲೀಸರ ಮಾಹಿತಿ

ವಾಯುಭಾರ ಕುಸಿತದಿಂದಾಗಿ ಮಂಗಳವಾರ ಕರ್ನಾಟಕದ ಕರಾವಳಿಯಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದ್ದು, ಮೀನುಗಾರರಿಗೆ ದಡಕ್ಕೆ ಮರಳುವಂತೆ ಎಚ್ಚರಿಕೆ ನೀಡಲಾಗಿದೆ. ಇದು ಚಂಡ​ಮಾ​ರು​ತ​ವಾಗಿ ಮಾರ್ಪಟ್ಟು ಗುರುವಾರ ಹಾಗೂ ಶುಕ್ರವಾರದ ಹೊತ್ತಿಗೆ ಮತ್ತಷ್ಟುತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ, ಈ ಚಂಡಮಾರುತ ವಾಯವ್ಯ ದಿಕ್ಕಿನತ್ತಲೂ ಚಲಿಸುವ ಸಾಧ್ಯತೆಗಳು ದಟ್ಟವಾಗಿರುವುದರಿಂದ ಭಾರತದ ಯಾವ ತೀರಕ್ಕೆ ಅಪ್ಪಳಿಸಬಹುದು ಎಂದು ಸ್ಪಷ್ಟಪಡಿಸಿಲ್ಲ.

ಮುಂಗಾರು ಮಾರುತ ವಿಳಂಬವಾಗಲು ಈ ಚಂಡಮಾರುತವೂ ಕಾರಣವಾಗಿದ್ದು, ಈ ಮೊದಲು ಹವಾಮಾನ ಇಲಾಖೆ ಅಂದಾಜಿಸಿದಂತೆ ಜೂ.3ರಂದೇ ಆಗಮಿಸಬೇಕಿತ್ತು. ಇದಾದ ಬಳಿಕ ದಿನಾಂಕವನ್ನು ನಾಲ್ಕು ದಿನಗಳ ಮುಂದೂಡಲಾಗಿದ್ದರೂ ಮಾರುತಗಳು ಇನ್ನೂ ಸಹ ಆಗಮಿಸಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್