Coffee Shop New Rules ಬೈಟು ಕಾಫಿ ಹೇಳಿ ಗಂಟೆಗಟ್ಟಲೆ ಹರಟುವವರಿಗೆ ಇನ್ನು ಬೀಳುತ್ತೇ ದಂಡ!

Kannadaprabha News, Ravi Janekal |   | Kannada Prabha
Published : Feb 11, 2026, 06:52 AM IST
Coffee Shop New Rule No More Hour Long Chats Over a Single By Two Coffee

ಸಾರಾಂಶ

ಬೆಂಗಳೂರಿನ ಹೋಟೆಲ್‌ಗಳಲ್ಲಿ ಒಂದು ಕಾಫಿ ಕುಡಿದು ಗಂಟೆಗಟ್ಟಲೆ ಕುಳಿತುಕೊಳ್ಳುವ ಗ್ರಾಹಕರಿಂದ ವ್ಯಾಪಾರಕ್ಕೆ ನಷ್ಟವಾಗುತ್ತಿದೆ ಎಂದು ಮಾಲೀಕರು ಅಸಮಾಧಾನ. ಈ ಹಿನ್ನೆಲೆಯಲ್ಲಿ, ನಿರ್ದಿಷ್ಟ ಸಮಯಕ್ಕಿಂತ ಹೆಚ್ಚು ಕಾಲ ಕುಳಿತರೆ 'ಟೇಬಲ್ ಚಾರ್ಜ್' ಅಥವಾ ದಂಡ ವಿಧಿಸಲು ಹೋಟೆಲ್ ಮಾಲೀಕರ ಸಂಘ ಚಿಂತನೆ ನಡೆಸಿದೆ. 

 ಬೆಂಗಳೂರು (ಫೆ.11): ಹೋಟೆಲ್‌ಗಳಲ್ಲಿ ನೀವು ಬೈಟು ಟೀ-ಕಾಫಿ ಕುಡಿದು ಗಂಟೆಗಟ್ಟಲೆ ಹರಟೆ ಹೊಡೆಯುತ್ತಾ ಕೂರುತ್ತೀರಾ? ಇಂಥವರಿಂದ ದಂಡ ವಸೂಲಿಗೆ ಇದೀಗ ಹೋಟೆಲ್‌ ಮಾಲೀಕರು ಚಿಂತಿಸುತ್ತಿದ್ದಾರೆ!

₹ 25 ಕೊಟ್ಟು ಕಾಫಿ ಕುಡಿದು ರಿಯಲ್‌ ಎಸ್ಟೇಟ್‌ ವ್ಯವಹಾರ, ಕಚೇರಿ ಹರಟೆ, ಮದುವೆ ಮಾತುಕತೆ, ರಾಜಕೀಯ ಗಹನ ಚರ್ಚೆ ಮಾಡುತ್ತಾ ಕುಳಿತರೆ ಅದರ ಹತ್ತರಷ್ಟು ದಂಡ ವಸೂಲಿ ಮಾಡುವ ಎಚ್ಚರಿಕೆಯನ್ನು ಮಾಲೀಕರ ಸಂಘ ನೀಡಿದೆ.

ಇಂತಹ ಗ್ರಾಹಕರಿಂದ ಹೋಟೆಲ್ ಮಾಲೀಕರಿಗೆ ದೊಡ್ಡ ತಲೆನೋವಾಗುತ್ತಿದೆ. ನಿಜವಾದ ಗ್ರಾಹಕರಿಗೆ ಆಸನ ಸಿಗದ ಸ್ಥಿತಿ ನಿರ್ಮಾಣವಾಗುತ್ತಿದ್ದು, ವ್ಯಾಪಾರಕ್ಕೂ ಹೊಡೆತ ಬೀರುತ್ತಿದೆ ಎಂದು ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಪಾರ್ಕಿಂಗ್ ಚಾರ್ಜ್‌ನಂತೆ ಟೇಬಲ್ ಬಳಕೆಗೂ ಶುಲ್ಕ ವಿಧಿಸುವ ಬಗ್ಗೆ ಚಿಂತನೆ ನಡೆದಿದೆ. ಒಂದು ನಿರ್ದಿಷ್ಟ ಸಮಯದವರೆಗೆ ಮಾತ್ರ ಉಚಿತವಾಗಿ ಕುಳಿತುಕೊಳ್ಳಲು ಅವಕಾಶ ನೀಡಬೇಕು, ಅದಕ್ಕಿಂತ ಹೆಚ್ಚು ಸಮಯ ಹೋಟೆಲ್‌ನಲ್ಲಿ ಕಾಲಹರಣ ಮಾಡಿದರೆ ದಂಡ ಅಥವಾ ಟೇಬಲ್ ಚಾರ್ಜ್ ವಿಧಿಸುವ ನಿರ್ಧಾರಕ್ಕೆ ಬರಲಾಗುತ್ತಿದೆ.

ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್, ‘ಹೋಟೆಲ್‌ಗಳಲ್ಲಿ ಒಂದು ಟೀ ಕುಡಿದು ಗಂಟೆಗಟ್ಟಲೆ ಕುಳಿತು ಸಭೆಗಳು ನಡೆಸುತ್ತಾರೆ. ಇದರಿಂದ ಇತರ ಗ್ರಾಹಕರಿಗೆ ತೊಂದರೆ ಆಗುವುದಲ್ಲದೆ, ನಮ್ಮ ವ್ಯಾಪಾರಕ್ಕೂ ನಷ್ಟವಾಗುತ್ತಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಹೋಟೆಲ್‌ಗಳಲ್ಲಿ ದೀರ್ಘಕಾಲ ಕೂತರೆ ಟೇಬಲ್ ಚಾರ್ಜ್ ವಿಧಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಅಗತ್ಯವಿದ್ದರೆ 500 ರಿಂದ 1,000 ರು.ವರೆಗೆ ಶುಲ್ಕ ವಿಧಿಸುವ ಬಗ್ಗೆ ಚರ್ಚೆ ನಡೆದಿದೆ. ಈ ನಿರ್ಧಾರವನ್ನು ಅಧಿಕೃತವಾಗಿ ಜಾರಿಗೆ ತರಲು ಸರ್ಕಾರಕ್ಕೆ ಶೀಘ್ರದಲ್ಲೇ ಪತ್ರ ಬರೆದು ಅನುಮತಿ ಪಡೆಯಲು ಹೋಟೆಲ್ ಮಾಲೀಕರ ಸಂಘ ಸಿದ್ಧತೆ ನಡೆಸುತ್ತಿದೆ. ಹೋಟೆಲ್‌ಗಳಲ್ಲಿ ಗಂಟೆಗಟ್ಟಲೆ ಕಾಲಹರಣ ಮಾಡುವ ಪ್ರವೃತ್ತಿಗೆ ಕಡಿವಾಣ ಹಾಕಲು ಹೋಟೆಲ್‌ ಮಾಲೀಕರು ನಡೆಸುತ್ತಿರುವ ಈ ಯೋಚನೆ ಗ್ರಾಹಕರ ಅಸಮಾಧಾನಕ್ಕೂ ಕಾರಣವಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ಅಧಿಕಾರ ಹಂಚಿಕೆ ಗೊಂದಲ: ಹೈಕಮಾಂಡ್ ನಾಯಕರ ವಿಳಂಬದ ಬಗ್ಗೆ ಕಾಂಗ್ರೆಸ್‌ನ ಶಾಸಕ ಬೇಸರ
P Ramaiah Passes Away: ಮಾಜಿ ಎಂಎಲ್‌ಸಿ, ಹಿರಿಯ ಪತ್ರಕರ್ತ ಪಿ.ರಾಮಯ್ಯ ನಿಧನ, ದೇವೇಗೌಡ ಸೇರಿ ಗಣ್ಯರು ಸಂತಾಪ