
ಬೆಂಗಳೂರು[ಜ.02]: ಈಗಾಗಲೇ ರಾಜ್ಯದಾದ್ಯಂತ ಚಳಿ ಗಣನೀಯವಾಗಿ ಹೆಚ್ಚಾಗಿದ್ದು ಜನರು ತತ್ತರಿಸಿ ಹೋಗಿದ್ದಾರೆ. ಆದರೀಗ ಇನ್ನೂ ಒಂದು ವಾರ ಈ ಮೈ ಕೊರೆಯುವ ಚಳಿ ಮುಂದುವರೆಯಲಿದೆ ಎಂದು ಸ್ಕೈಮೇಟ್ ಮಾಹಿತಿ ನೀಡಿದೆ
ರಾಜ್ಯದ ಧಾರವಾಡ ಜಿಲ್ಲೆಯಲ್ಲಿ ಗರ್ಗ್ ನಲ್ಲಿ ಅತ್ಯಂತ ಕಡಿಮೆ ಅಂದರೆ 4.5 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ 9-11 ಡಿಗ್ರಿ ತಾಪಮಾನ ಇದೆ. ಇದು ಕಳೆದ ಎರಡು ವರ್ಷಗಳಲ್ಲಿ ದಾಖಲಾದ ಅತ್ಯಂತ ಕಡಿಮೆ ಉಷ್ಣಾಂಶ ಎನ್ನಲಾಗಿದೆ. ಉತ್ತರ ಭಾಗದಿಂದ ಬೀಸುತ್ತಿರುವ ಗಾಳಿಯಿಂದಾಗಿ ರಾಜ್ಯದಲ್ಲಿ ಚಳಿ ಪ್ರಮಾಣ ಹೆಚ್ಚಾಗಿದೆ ಎನ್ನಲಾಗಿದ್ದು, ಈಜನವರಿ 10 ರವರೆಗೂ ಚಳಿಯ ತೀವ್ರತೆ ಇದೇ ರೀತಿ ಮುಂದುವರೆಯಲಿದೆ ಎನ್ನಲಾಗಿದೆ.
ಈಗಾಗಲೇ ಚಳಿಯ ತೀವ್ರತೆಯಿಂದ ಜನರಲ್ಲಿ ನಡುಕ ಆರಂಭವಾಗಿದ್ದು, ಜಾಕೆಟ್, ಸ್ವೆಟರ್ಗಳ ಮೊರೆ ಹೋಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ