ಸಂಕ್ರಾಂತಿ ಒಳಗೆ ಕಾಂಗ್ರೆಸ್ ಸರ್ಕಾರ ಬಿದ್ದೋಗುತ್ತೆ: ಸಿಪಿ ಯೋಗೇಶ್ವರ್ ಹೊಸ ಬಾಂಬ್!

Published : Oct 03, 2023, 07:29 AM ISTUpdated : Oct 03, 2023, 11:41 AM IST
ಸಂಕ್ರಾಂತಿ ಒಳಗೆ ಕಾಂಗ್ರೆಸ್ ಸರ್ಕಾರ ಬಿದ್ದೋಗುತ್ತೆ: ಸಿಪಿ ಯೋಗೇಶ್ವರ್ ಹೊಸ ಬಾಂಬ್!

ಸಾರಾಂಶ

 ಕಾಂಗ್ರೆಸ್‌ನಲ್ಲಿ ಒಳಬೇಗುದಿ ತೀವ್ರಗೊಂಡಿದ್ದು, ಶಾಸಕರಲ್ಲಿ ಅಸಮಾಧಾನ ಹೆಚ್ಚಳಗೊಂಡಿದೆ. ಸಂಕ್ರಾಂತಿ ವೇಳೆಗೆ ಸೂರ್ಯ ಪಥ ಬದಲಿಸುವ ರೀತಿ, ರಾಜಕೀಯ ಪಥ ಬದಲಾವಣೆಯಾಗಲಿದ್ದು, ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಇರೋದು ಅನುಮಾನ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.

 ಚನ್ನಪಟ್ಟಣ (ಅ.3) :  ಕಾಂಗ್ರೆಸ್‌ನಲ್ಲಿ ಒಳಬೇಗುದಿ ತೀವ್ರಗೊಂಡಿದ್ದು, ಶಾಸಕರಲ್ಲಿ ಅಸಮಾಧಾನ ಹೆಚ್ಚಳಗೊಂಡಿದೆ. ಸಂಕ್ರಾಂತಿ ವೇಳೆಗೆ ಸೂರ್ಯ ಪಥ ಬದಲಿಸುವ ರೀತಿ, ರಾಜಕೀಯ ಪಥ ಬದಲಾವಣೆಯಾಗಲಿದ್ದು, ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಇರೋದು ಅನುಮಾನ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ರಾಜಕೀಯ ಬೆಳವಣಿಗೆ, ಕಾಂಗ್ರೆಸ್ ನಾಯಕರ ನಡೆ ಗಮನಿಸಿದರೆ, ೨೦೨೩ ಮುಗಿದ ಬಳಿಕ ರಾಜಕೀಯ ಬದಲಾವಣೆ ನಿರೀಕ್ಷೆ ಇದೆ. ಇನ್ನೆರಡು ತಿಂಗಳಲ್ಲಿ ಕಾಂಗ್ರೆಸ್‌ನಲ್ಲಿ ಆಂತರಿಕ ಅಸಮಾಧಾನ ಸ್ಘೋಟಿಸಲಿದ್ದು, ಸರ್ಕಾರ ಪತನಗೊಳ್ಳಲಿದೆ ಎಂದು ಅನಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಬೀಳಿಸಲು ನಾವು ಯಾವುದೇ ಆಪರೇಷನ್ ನಡೆಸುತ್ತಿಲ್ಲ ಎಂದು ಭವಿಷ್ಯ ನುಡಿದರು.

ಕಾವೇರಿ ನೀರಿನ ಸಮಸ್ಯೆಗೆ ಮೇಕೆದಾಟು ಪರಿಹಾರ: ಸಂಸದ ಡಿ.ಕೆ.ಸುರೇಶ್

ಡಮ್ಮಿಯಾದ ಶಾಸಕರು: ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದಾಗ ಸುಭದ್ರ ಸರ್ಕಾರ ಬಂತು ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕರು ಡಮ್ಮಿಗಳಾಗಿದ್ದಾರೆ. ಅವರಿಗೆ ಶಾಸಕರ ಕಾರ್ಯ ನಿರ್ವಹಿಸಲು ಆಗುತ್ತಿಲ್ಲ. ಕಾಂಗ್ರೆಸ್‌ನ ಅಸಮಾಧಾನಿತ ಶಾಸಕರು ವಿಮುಖವಾಗಿ ಯೋಚನೆ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಾಗೆ ಪಕ್ಷಾಂತರ ಮಾಡಿದರೆ ಅಥವಾ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದರೆ ಆಶ್ಚರ್ಯವಿಲ್ಲ ಎಂದರು.

೨೫ರಿಂದ ೩೦ ಶಾಸಕರು ಈ ಹಿಂದೆಯೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಪತ್ರ ಬರೆದಿದ್ದರು. ಆ ನಂತರ ಬಸವರಾಜರಾಯರೆಡ್ಡಿ ಬಹಿರಂಗವಾಗಿಯೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಶಾಮನೂರು ಶಿವಶಂಕರಪ್ಪ ಲಿಂಗಾಯತರಿಗೆ ಅನ್ಯಾಯವಾಗುತ್ತಿದೆ ಎಂದು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಸವರಾಜ ಶಿವಗಂಗಾ ಸರ್ಕಾರದ ವಿರುದ್ಧ ನೇರ ಆರೋಪ ಮಾಡಿದ್ದಾರೆ. ರಾಜಣ್ಣ ಲೋಕಸಭೆ ಚುನಾವಣೆ ನಂತರ ಈ ಸರ್ಕಾರ ಇರಲಿದೆಯೋ ಇಲ್ಲವೋ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಸರ್ಕಾರದ ಮೇಲೆ ವಿಶ್ವಾಸ ಹೋಗಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ