ಬಿಲ್‌ ಕೊಡದಿದ್ದರೆ ಆತ್ಮಹತ್ಯೆ, ಪ್ರಿಯಾಂಕ್, ಶರತ್ ಬಚ್ಚೇಗೌಡ ಹೊಣೆ: ಕಿಯೋನಿಕ್ಸ್ ವೆಂಡರ್ಸ್‌

Published : Jan 15, 2025, 06:00 AM IST
ಬಿಲ್‌ ಕೊಡದಿದ್ದರೆ ಆತ್ಮಹತ್ಯೆ, ಪ್ರಿಯಾಂಕ್, ಶರತ್ ಬಚ್ಚೇಗೌಡ ಹೊಣೆ: ಕಿಯೋನಿಕ್ಸ್ ವೆಂಡರ್ಸ್‌

ಸಾರಾಂಶ

ಕಿಯೋನಿಕ್ಸ್‌ನಲ್ಲಿ ನೂರಾರು ಕೋಟಿ ರು. ಮೊತ್ತದ ಅಕ್ರಮ ನಡೆದಿದೆ. ಆ ಬಗ್ಗೆ ವಿಚಾರಣೆ ನಡೆಯುತ್ತಿರುವುದ ರಿಂದ ಬಿಲ್ ವಿಳಂಬವಾಗುತ್ತಿದೆ. ಮಾನದಂಡ ಇಲ್ಲದೆ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ 300 ಕೋಟಿ ರು. ಮೌಲ್ಯದ ವಸ್ತುಗಳನ್ನು ಪೂರೈಸಲಾಗಿದೆ ಎಂಬ ವರದಿ ಇದೆ. ಕಿಯೋನಿಕ್ಸ್‌ ವೆಂಡರ್‌ಗಳ ಬ್ಲ್ಯಾಕ್‌ಮೇಲ್ ನಡೆಯುವುದಿಲ್ಲ ಎಂದ ಐಟಿ ಸಚಿವ ಪ್ರಿಯಾಂಕ್ ಖರ್ಗೆ 

ಬೆಂಗಳೂರು(ಜ.15): ಬಾಕಿ ಬಿಲ್ ಬಿಡುಗಡೆ ಮಾಡದಿದ್ದರೆ ಆತ್ಮಹತ್ಯೆಯ ದಾರಿ ಹಿಡಿಯಬೇಕಾಗುತ್ತದೆ. ಅದಕ್ಕೆ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಹಾಗೂ ಅಧಿಕಾರಿಗಳೇ ಹೊಣೆ ಎಂದು ಕರ್ನಾಟಕ ರಾಜ್ಯ ವಿದ್ಯುನ್ಮಾನ ನಿಗಮ ನಿಯಮಿತದ (ಕಿಯೋನಿಕ್ಸ್) ವೆಂಡರ್‌ಗಳು ರಾಷ್ಟ್ರಪತಿಯವರಿಗೆ ಪತ್ರ ಬರೆದಿದ್ದಾರೆ. 

ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿ 8 ಸಚಿವರಿಗೆ ರಾಜ್ಯ ಗುತ್ತಿಗೆದಾರರ ಸಂಘ ಪತ್ರ ಬರೆದ ಬೆನ್ನಲ್ಲೇ ಈ ಬೆಳ ವಣಿಗೆಯೂ ನಡೆದಿದೆ. ಆದರೆ, ಕಿಯೋನಿಕ್ಸ್‌ನಲ್ಲಿ ಕೋಟ್ಯಂತರ ರು. ಅಕ್ರಮ ನಡೆದಿರುವುದರಿಂದ ವೆಂಡರ್‌ಗಳ ಬಿಲ್‌ ಗಳಿಗೆ ತಡೆ ಹಿಡಿಯಲಾಗಿದೆ.

ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತಿನಿಂದ ಸಾವಿರಾರು ಕೋಟಿ ಬಿಲ್ ಬಾಕಿ: ಸಚಿವರು

ಭ್ರಷ್ಟಾಚಾರದ ಬಗ್ಗೆ ಆರೋಪ ಬಂದಾಗ ತನಿಖೆ ಮಾಡಬಾರದು ಎಂದರೆ ಹೇಗೆ? ಎಂದು ಸಚಿವರು, ಅಧ್ಯಕ್ಷರು ಪ್ರತಿಕ್ರಿಯೆ ನೀಡಿದ್ದಾರೆ. 450ರಿಂದ 500 ಉದ್ಯಮದಾರರು, ಸ್ಟಾರ್ಟಪ್‌ಗಳು ಕಿಯೋನಿಕ್ಸ್‌ನಲ್ಲಿ ವೆಂಡರ್ ಆಗಿ ನೋಂದಾಯಿಸಿಕೊಂಡಿವೆ. ಈ ಸಣ್ಣ ಸಂಸ್ಥೆಗಳು ಸರ್ಕಾರಕ್ಕೆ ವಿದ್ಯುನ್ಮಾನ ಸೇವೆ ಮತ್ತು ಮಾನವ ಸಂಪನ್ಮೂಲ ಸೇವೆ ನೀಡುತ್ತಿವೆ. 

2023ರಲ್ಲಿ ಸರ್ಕಾರ ಬದಲಾದ ನಂತರ ವೆಂಡರ್‌ಗಳಿಗೆ ಬಿಲ್ ತಡೆ ಹಿಡಿದು ಕಿರುಕುಳ ನೀಡಲಾಗುತ್ತಿದೆ. ಕಳೆದ ಮೂರ್ನಾಲ್ಕು ತಿಂಗಳಿಂದ ಸಚಿವರು, ಅಧಿಕಾರಿಗಳಿಗೆ ಮನವಿ ಮಾಡಿದರೂ ಸ್ಪಂದನೆ ಸಿಕ್ಕಿಲ್ಲ. ಕಿಯೋನಿಕ್ಸ್ ಹಿಂದಿನ ಸಿಇಒ ಸಂಗಪ್ಪ ಅವರು ಬಾಕಿ ಬಿಲ್ ಬಿಡುಗಡೆಗೆ ಶೇ.12ರಷ್ಟು ಕಮಿಷನ್ ಕೇಳಿದ್ದ ಕಾರಣ ಪ್ರತಿಭಟನೆ ನಡೆಸಲಾಗಿತ್ತು. ಆದರೂ, ಯಾವುದೇ ಕ್ರಮಕೈಗೊಂಡಿಲ್ಲ. ಬದಲಿಗೆ ನಮ್ಮ ಮೇಲೆಯೇ ದ್ವೇಷ ಸಾಧಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. 

ಗುತ್ತಿಗೆದಾರರ ಬಿಲ್‌ ಪಾವತಿ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸಚಿವ ಜಾರಕಿಹೊಳಿ

ಹಳೇ ವೆಂಡರ್‌ಗಳನ್ನು ಅನರ್ಹಗೊಳಿಸಲು ಹೊಸ ನಿಯಮಗಳನ್ನು ತರಲಾಗಿದೆ. ಕೇವಲ ದೊಡ್ಡ ಕಂಪನಿಗಳನ್ನು ಮಾತ್ರ ವೆಂಡರ್‌ಗಳಾಗಿ ಪರಿಗಣಿಸಲಾಗಿದೆ. ಇದರಿಂದ ಸುಮಾರು 6 ಸಾವಿರ ಜನರು ಕೆಲಸ ಕಳೆದುಕೊಳ್ಳುವಂತಾಗಿದೆ. ಬಾಕಿ ಮೊತ್ತ ಇಲ್ಲದೇ, ಕೆಲಸವೂ ಇಲ್ಲದೇ ಸಂಕಷ್ಟಕ್ಕೆ ಸಿಲುಕಿರುವ ವೆಂಡರ್‌ಗಳು ಆತ್ಮಹತ್ಯೆ ಮಾಡಿಕೊಳ್ಳುವ ಕುರಿತು ಚರ್ಚಿಸಿದ್ದಾರೆ ಎಂದು ಪತ್ರದಲ್ಲಿ ವೆಂಡರ್ಸ್‌ಗಳು ಆತಂಕ ತೋಡಿಕೊಂಡಿದ್ದಾರೆ. ಇಷ್ಟು ದಿನ ಹೇಗೋ ತಡೆದುಕೊಂಡಿದ್ದೇವೆ. ಆದರೆ, ಇನ್ನು ಮುಂದೆ ಬದುಕುವ ಶಕ್ತಿ ಉಳಿದಿಲ್ಲ. ನಮಗೆ ಏನಾದರೂ ತೊಂದರೆಯಾದರೆ ಸಚಿವರು, ಅಧ್ಯಕ್ಷರು, ಸಿಇಒ ಪವನ್, ನಿರ್ದೇಶಕ ನಿಶ್ಚಿತ್ ಕಾರಣ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಬ್ಲಾಕ್‌ಮೇಲ್ ನಡೆಯಲ್ಲ 

ಕಿಯೋನಿಕ್ಸ್‌ನಲ್ಲಿ ನೂರಾರು ಕೋಟಿ ರು. ಮೊತ್ತದ ಅಕ್ರಮ ನಡೆದಿದೆ. ಆ ಬಗ್ಗೆ ವಿಚಾರಣೆ ನಡೆಯುತ್ತಿರುವುದ ರಿಂದ ಬಿಲ್ ವಿಳಂಬವಾಗುತ್ತಿದೆ. ಮಾನದಂಡ ಇಲ್ಲದೆ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ 300 ಕೋಟಿ ರು. ಮೌಲ್ಯದ ವಸ್ತುಗಳನ್ನು ಪೂರೈಸಲಾಗಿದೆ ಎಂಬ ವರದಿ ಇದೆ. ಕಿಯೋನಿಕ್ಸ್‌ ವೆಂಡರ್‌ಗಳ ಬ್ಲ್ಯಾಕ್‌ಮೇಲ್ ನಡೆಯುವುದಿಲ್ಲ ಎಂದು ಐಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ