
ಉಡುಪಿ (ಜೂ.4): ಉಡುಪಿ ಜಿಲ್ಲೆಯಲ್ಲಿ ಕಳೆದ 3 ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್ಗಳನ್ನು ಪ್ರಸಾರ ಮಾಡಿರುವ ಇಬ್ಬರ ಮೇಲೆ ಪ್ರಕರಣ ದಾಖಲಾಗಿದ್ದು, ಅವರನ್ನು ಬಂಧಿಸಲಾಗಿದೆ. ಇಂತಹ ಪ್ರಕರಣಗಳನ್ನು ಪೊಲೀಸ್ ಇಲಾಖೆ ತೀವ್ರ ನಿಗಾ ವಹಿಸಿದೆ. ಆದ್ದರಿಂದ ಯಾರೂ ಇಂತಹ ಪೋಸ್ಟ್ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಬಾರದು ಎಂದು ಉಡುಪಿಯ ನೂತನ ಎಸ್ಪಿ ಹರಿರಾಮ್ ಶಂಕರ್ ಎಚ್ಚರಿಕೆ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್ಗಳು ಹರಿದಾಡುತ್ತಿವೆ. ಇಂತಹ ಪೋಸ್ಟ್ಗಳನ್ನು ಪೊಲೀಸ್ ಇಲಾಖೆ ಬಹಳ ಗಂಭೀರ ತೆಗೆದುಕೊಂಡಿದೆ. ಉಡುಪಿ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾಕಾರಿ ಸಂದೇಶಗಳನ್ನು ಮೇಲೆ ಕಣ್ಣಿಡುವುದಕ್ಕೆ ತಂಡ ರಚಿಸಲಾಗಿದೆ. ಜೊತೆಗೆ ರಾಜ್ಯ ಮಟ್ಟದಲ್ಲಿಯೂ ಸಾಮಾಜಿಕ ಜಾಲತಾಣಗಳ ಪರಿಶೀಲನೆ ನಡೆಯುತ್ತಿದೆ ಎಂದವರು ಹೇಳಿದ್ದಾರೆ.
ಇಂತಹ ಪ್ರಕರಣಗಳಲ್ಲಿ ಸಿಕ್ಕಿಬಿದ್ದು ಬಂಧನಕ್ಕೊಳಗಾದವರಿಗೆ ಸರ್ಕಾರಿಯಾಗಲಿ, ಖಾಸಗಿಯಾಗಿ ಉದ್ಯೋಗ, ಅಥವಾ ಸೈನ್ಯ ಅಥವಾ ಪೊಲೀಸ್ ಇಲಾಖೆಯಲ್ಲಿಯೂ ಅವಕಾಶ ಸಿಗುವುದಿಲ್ಲ, ಆದ್ದರಿಂದ ಫೇಸ್ಬುಕ್, ವಾಟ್ಸಾಪ್ ಅಥವಾ ಇನ್ಸ್ಟಾಗ್ರಾಮ್ಗಳಲ್ಲಿ ಇಂತಹ ಪೋಸ್ಟ್ಗಳನ್ನು ಹಾಕುವ, ಶೇರ್ ಮಾಡುವ ಅಥವಾ ಫಾರ್ವರ್ಡ್ ಮಾಡಬಾರದು ಎಂದವರು ಕಿವಿಮಾತು ಹೇಳಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ