ರೈತ ಮಹಿಳೆಗೆ ಅವಹೇಳನ : ಸಿಎಂ ವಿರುದ್ಧ ದೂರು

Published : Nov 20, 2018, 09:22 AM IST
ರೈತ ಮಹಿಳೆಗೆ ಅವಹೇಳನ : ಸಿಎಂ ವಿರುದ್ಧ ದೂರು

ಸಾರಾಂಶ

ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟವೊಂದು ಎದುರಾಗಿದೆ. ರೈತ ಮಹಿಳೆ ವಿರುದ್ಧ ನೀಡಿದ ಹೇಳಿಕೆ ಸಂಬಂಧ ದೂರು ನೀಡಲಾಗಿದೆ. 

ಬೆಂಗಳೂರು :  ಕಬ್ಬು ಬೆಳೆಗಾರರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತ ಮಹಿಳೆ ಉದ್ದೇಶಿಸಿ ಅವಹೇಳನಕಾರಿ ಹೇಳಿಕೆ ನೀಡಿರುವ ಮುಖ್ಯಮಂತ್ರಿ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಡಿಜಿಪಿ ಅವರಿಗೆ ಕಾರ್ಮಿಕ ಕಲ್ಯಾಣ ಸಂಘಟನೆ ಸೋಮವಾರ ದೂರು ಸಲ್ಲಿಸಿದೆ.

ರೈತ ಮಹಿಳೆಯನ್ನು ಸಾರ್ವಜನಿಕ ಸಮಾರಂಭದಲ್ಲಿ ತುಚ್ಛ ಭಾಷೆ ಬಳಸಿ ಮುಖ್ಯಮಂತ್ರಿ ಕುಮಾರಸ್ವಾಮಿ ನಿಂದಿಸಿದ್ದಾರೆ. ಈ ತಪ್ಪಿಗೆ ಅವರ ವಿರುದ್ಧ ಮಹಿಳೆ ಗೌರವಕ್ಕೆ ಧಕ್ಕೆ ತಂದ ಆರೋಪದಡಿ ಪ್ರಕರಣ ದಾಖಲಿಸಿ ಕಾನೂನು ರೀತ್ಯ ಕ್ರಮ ಜರುಗಿಸಬೇಕು ಎಂದು ಡಿಜಿಪಿ ನೀಲಮಣಿ ಎನ್‌.ರಾಜು ಅವರಿಗೆ ಇಮೇಲ್‌ ಮೂಲಕ ಸಂಘಟನೆ ದೂರು ನೀಡಿದೆ.

ಬೆಳಗಾವಿಯಲ್ಲಿ ನಡೆದ ರೈತರ ಪ್ರತಿಭಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಮುಖ್ಯಮಂತ್ರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತ ಮಹಿಳೆಯೊಬ್ಬರ ಬಗ್ಗೆ ಲಘುವಾಗಿ ಮಾತನಾಡಿ ವಿವಾದಕ್ಕೆ ತುತ್ತಾಗಿದ್ದರು. ಈ ಹೇಳಿಕೆ ಖಂಡಿಸಿ ನಗರದಲ್ಲಿ ರೈತರು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಈಗ ಪೊಲೀಸರಿಗೆ ಕಾರ್ಮಿಕ ಕಲ್ಯಾಣ ಸಂಘಟನೆ ದೂರು ಸಲ್ಲಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!
ಕೇಂದ್ರದ ಒಪ್ಪಿಗೆ ಸಿಕ್ರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಪೂರ್ಣಕ್ಕೆ ಬದ್ಧ: ಡಿ.ಕೆ.ಶಿವಕುಮಾರ್‌