ಹಣ ಪಡೆದ ಆರೋಪ: ಹಾಲು ಒಕ್ಕೂಟದ ನಿರ್ದೇಶಕ ಡಾಲು ರವಿ ವಿರುದ್ಧ ಎಸ್ಪಿಗೆ ದೂರು

Published : Jul 04, 2023, 01:52 PM IST
ಹಣ ಪಡೆದ ಆರೋಪ: ಹಾಲು ಒಕ್ಕೂಟದ ನಿರ್ದೇಶಕ  ಡಾಲು ರವಿ ವಿರುದ್ಧ ಎಸ್ಪಿಗೆ ದೂರು

ಸಾರಾಂಶ

ಹಣ ಪಡೆದಿರುವ ಆಡಿಯೋ ವೈರಲ್‌ ಬಗ್ಗೆ ಸೂಕ್ತ ವಿಚಾರಣೆ ನಡೆಸಿ ಸತ್ಯಾಂಶ ಬಯಲುಗೊಳಿಸಬೇಕು ಎಂದು ಒತ್ತಾಯಿಸಿ ಕೆ.ಆರ್‌.ಪೇಟೆ ತಾಲೂಕು ಕಾಂಗ್ರೆಸ್‌ ಮುಖಂಡರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಯತೀಶ್‌ ಅವರಿಗೆ ಸೋಮವಾರ ದೂರು ನೀಡಿದರು.

ಮಂಡ್ಯ (ಜು.3): ಹಣ ಪಡೆದಿರುವ ಆಡಿಯೋ ವೈರಲ್‌ ಬಗ್ಗೆ ಸೂಕ್ತ ವಿಚಾರಣೆ ನಡೆಸಿ ಸತ್ಯಾಂಶ ಬಯಲುಗೊಳಿಸಬೇಕು ಎಂದು ಒತ್ತಾಯಿಸಿ ಕೆ.ಆರ್‌.ಪೇಟೆ ತಾಲೂಕು ಕಾಂಗ್ರೆಸ್‌ ಮುಖಂಡರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಯತೀಶ್‌ ಅವರಿಗೆ ಸೋಮವಾರ ದೂರು ನೀಡಿದರು.

ನಗರದ ಜಿಲ್ಲಾ ಎಸ್ಪಿ ಕಚೇರಿಗೆ ಆಗಮಿಸಿದ ಕಾಂಗ್ರೆಸ್‌ ಮುಖಂಡರು, ಕಳೆದ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಮುಖಂಡರು ಜೆಡಿಎಸ್‌ ಅಭ್ಯರ್ಥಿ ಕಡೆಯವರಿಂದ ಹಣ ಪಡೆದಿದ್ದಾರೆ ಎಂಬ ಆಡಿಯೋ ವೈರಲ್‌ ಆಗಿರುವ ಬಗ್ಗೆ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಡಾಲು ರವಿ ಅವರನ್ನು ವಿಚಾರಣೆ ನಡೆಸಿ ಸತ್ಯವನ್ನು ಬೆಳಕಿಗೆ ತರಬೇಕು ಎಂದು ಮನವಿ ಮಾಡಿದರು.

 

ಹಾಲು ತಗೊಂಡೋಗು ಅಂದ್ರೆ, ಮಗಳ ಪ್ರಾಣನೇ ಹೊತ್ತೊಯ್ದ ಹಾಲಿನ ವಾಹನ

ನಮ್ಮ ಮೇಲೆ ಸುಳ್ಳು ಆಪಾದನೆ ಮಾಡಿ ಸಾರ್ವಜನಿಕ ಬದುಕಿಗೆ ಚ್ಯುತಿ ತಂದಿರುವ ವ್ಯಕ್ತಿ ವಿರುದ್ಧ ಕ್ರಮ ಜರುಗಿಸಬೇಕು. ಆರೋಪದಿಂದ ಮುಕ್ತ ಮಾಡಬೇಕು ಎಂದು ಆಗ್ರಹಿಸಿ ಕೆ.ಆರ್‌ .ಪೇಟೆ ತಾಲೂಕು ಕಾಂಗ್ರೆಸ್‌ ಮುಖಂಡರಾದ ವಿಜಯ್‌ ರಾಮೇಗೌಡ, ಎಂ.ಡಿ.ಕೃಷ್ಣಮೂರ್ತಿ, ಕೋಡಿಮಾರನಹಳ್ಳಿ ದೇವರಾಜು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಕಿಕ್ಕೇರಿ ಸುರೇಶ್‌, ನಾಗೇಂದ್ರಕುಮಾರ್‌ ಅವರ ನಿಯೋಗ ಎಸ್ಪಿಯವರನ್ನು ಮನವಿ ಮೂಲಕ ಒತ್ತಾಯಿಸಿತು. ಈ ವೇಳೆ ದೂರು ಸ್ವೀಕರಿಸಿದ ಎಸ್ಪಿ ಎನ್‌.ಯತೀಶ್‌ ಅಧೀನ ಅಧಿಕಾರಿಯಿಂದ ಸೂಕ್ತ ತನಿಖೆ ನಡೆಸಿ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯದಲ್ಲಿ 9.67 ಲಕ್ಷ ಟನ್‌ ತೊಗರಿ ಖರೀದಿಗೆ ಕೇಂದ್ರ ಅಸ್ತು
ಉತ್ತರ ಕರ್ನಾಟಕಕ್ಕೆ ಕೊಟ್ಟ ಭರವಸೆ ಈಡೇರಿಕೆ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್‌.ಅಶೋಕ್‌