ರಾಜ್ಯದ ಕಡಲತೀರದಲ್ಲಿ ರಾಶಿ ರಾಶಿ ಕಾಂಡೋಮ್ ಪ್ಯಾಕೇಟ್‌ಗಳು ಪತ್ತೆ

Published : Jun 20, 2024, 03:22 PM IST
ರಾಜ್ಯದ ಕಡಲತೀರದಲ್ಲಿ ರಾಶಿ ರಾಶಿ ಕಾಂಡೋಮ್ ಪ್ಯಾಕೇಟ್‌ಗಳು ಪತ್ತೆ

ಸಾರಾಂಶ

ಕಡಲತೀರದಲ್ಲೆ ಎಲ್ಲೆಂದರಲ್ಲಿ ಬಿದ್ದಿರುವ ಕಾಂಡೋಮ್ ಪ್ಯಾಕೇಟ್ ಕಂಡು ವಾಯುವಿಹಾರಕ್ಕೆ ಬರೋ ಜನರು ಮತ್ತು ಪ್ರವಾಸಿಗರು ಮುಜುಗರಕ್ಕೊಳಗಾಗಿದ್ದಾರೆ.

ಕಾರವಾರ: ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ವಿತರಿಸಲಾಗುವ ಕಾಂಡೋಮ್ ಪ್ಯಾಕೇಟ್‌ಗಳು (Condom Packets_ ಕಾರವಾರದ ರವೀಂದ್ರನಾಥ್ ಟ್ಯಾಗೋರ್ ಕಡಲ ತೀರದಲ್ಲಿ (Rabindranath Tagore Beach, Karwar) ಪತ್ತೆಯಾಗಿವೆ. ಕಡಲತೀರದಲ್ಲೆ ಎಲ್ಲೆಂದರಲ್ಲಿ ಬಿದ್ದಿರುವ ಕಾಂಡೋಮ್ ಪ್ಯಾಕೇಟ್ ಕಂಡು ವಾಯುವಿಹಾರಕ್ಕೆ ಬರೋ ಜನರು ಮತ್ತು ಪ್ರವಾಸಿಗರು ಮುಜುಗರಕ್ಕೊಳಗಾಗಿದ್ದಾರೆ. ಕಡಲತೀರದಲ್ಲಿ ಬಿದ್ದಿರುವ ಕಾಂಡೋಮ್ ಪ್ಯಾಕೇಟ್ ಮೇಲೆ ಭಾರತ ಸರ್ಕಾರ ಎಂದು ಮುದ್ರಿಸಲಾಗಿದೆ. ದಿಢೀರ್ ಅಂತ ಕಾಂಡೋಮ್ ಪ್ಯಾಕೇಟ್‌ಗಳು ಕಂಡು ಬಂದಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ. 

ಇತ್ತೀಚೆಗಷ್ಟೇ ಸುದ್ದಿಗೋಷ್ಠಿ ನಡೆಸಿದ್ದ ವರ್ಲ್ಡ್ ಹ್ಯೂಮನ್ ರೈಟ್ಸ್ ಆರ್ಕೆ ಫೌಂಡೇಶನ್, ಲೈಂಗಿಕ ಕಾರ್ಯಕರ್ತರು, ಹೆಚ್ಐವಿ ಸೋಂಕಿತರಿಗೆ ಸಮಪರ್ಕವಾಗಿ ಕಾಂಡೋಮ್ ಮಾಡುತ್ತಿಲ್ಲ ಎಂದು ಏಡ್ಸ್‌ ನಿಯಂತ್ರಣ ಸಂಸ್ಥೆ ವಿರುದ್ಧ ಗಂಭೀರ ಆರೋಪವನ್ನು ಮಾಡಿತ್ತು. ಏಡ್ಸ್ ಜಾಗೃತಿ ಕ್ರಾಂತಿ ಸಂಸ್ಥೆ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ನೋಡಲ್ ಅಧಿಕಾರಿ ಸರ್ಕಾರಕ್ಕೆ ವರದಿಯನ್ನು ಸಹ ಸಲ್ಲಿಕೆ ಮಾಡಿದ್ದರು. ಆಸ್ಪತ್ರೆಯಲ್ಲಿದ್ದ ಕಾಂಡೋಮ್ ಪ್ಯಾಕೇಟ್‌ಗಳು ಚರಂಡಿ ಮೂಲಕ ಕಡಲತೀರಕ್ಕೆ ಬಂದಿರುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿ ಬಂದಿವೆ. 

ಕಡಲತೀರ ಸಮೀಪದಲ್ಲಿ ಕಿಮ್ಸ್ ಆಸ್ಪತ್ರೆಯಿದ್ದು, ಇಲ್ಲಿಯ ವೈದ್ಯಕೀಯ ತ್ಯಾಜ್ಯ ಚರಂಡಿ ಮೂಲಕ ಸಮುದ್ರ ಸೇರುತ್ತೆ ಎಂಬ ಆರೋಪಗಳು ಸಹ ಕೇಳಿ ಬಂದಿವೆ. ಏಡ್ಸ್‌ ನಿಯಂತ್ರಣ ಮತ್ತು ಚಿಕಿತ್ಸಾ ಕಚೇರಿ ಕಿಮ್ಸ್ ಆಸ್ಪತ್ರೆಯ ಅಧೀನದಲ್ಲಿದೆ. ಸಿಬ್ಬಂದಿಯ ನಿರ್ಲಕ್ಷ್ಯದಿಂದ ಕಾಂಡೋಮ್ ಕಡಲತೀರಕ್ಕೆ ಬಂದಿರಬಹುದು ಎಂದು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕಾಂಡೋಮ್‌ಗೆ ಹೇಳಿ ಬೈ ಬೈ; ಪುರುಷರಿಗಾಗಿ ಮಾರುಕಟ್ಟೆಗೆ ಬರ್ತಿದೆ ಹೊಸ ಪ್ರೊಡಕ್ಟ್!

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!