2 ತಿಂಗಳೊಳಗೆ ಚುನಾವಣೆ ನಡೆಸುವಂತೆ ಕೋರ್ಟ್ ಆದೇಶ

Published : Sep 15, 2021, 08:42 PM IST
2 ತಿಂಗಳೊಳಗೆ ಚುನಾವಣೆ ನಡೆಸುವಂತೆ ಕೋರ್ಟ್ ಆದೇಶ

ಸಾರಾಂಶ

* ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ನಡೆಸುವಂತೆ ಕೋರ್ಟ್ ಆದೇಶ  * ಶೇಖರಗೌಡ ಮಾಲಿಪಾಟೀಲ್  ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್  * ಎರಡು ತಿಂಗಳ ಒಳಗೆ ನಡೆಸಬೇಕು ಆದೇಶಿಸಿದ ಧಾರವಾಡ ಹೈಕೋರ್ಟ್​ ಪೀಠ

ಧಾರವಾಡ, (ಸೆ.15): ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯನ್ನು ಎರಡು ತಿಂಗಳ ಒಳಗೆ ನಡೆಸಬೇಕು ಎಂದು ಧಾರವಾಡ ಹೈಕೋರ್ಟ್​ ಪೀಠ ಇಂದು (ಸೆ,15) ಆದೇಶ ಹೊರಡಿಸಿದೆ.

ಮೇ 9ಕ್ಕೆ ನಡೆಯಬೇಕಿದ್ದ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯನ್ನು ಕೊರೊನಾ ಹೆಚ್ಚಳವಾದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. 

ಚುನಾವಣೆ ನಡೆಸಬೇಕೆಂದು ಒಂದೂವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಶೇಖರಗೌಡ ಮಾಲಿಪಾಟೀಲ್ ಮನವಿ ಸಲ್ಲಿಸಿದ್ದರು. ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಶೇಖರಗೌಡ ಮಾಲಿಪಾಟೀಲ್ ಹೈಕೋರ್ಟ್​ ಮೊರೆ ಹೋಗಿದ್ದರು. 

ಕಸಾಪ ಚುನಾವಣೆಗೂ ಇನ್ನು ಸಾಮಾಜಿಕ ಜಾಲತಾಣ ಬಳಕೆ

ಇದೀಗ ಶೇಖರಗೌಡ ಮಾಲಿಪಾಟೀಲ್  ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್, ಎರಡು ತಿಂಗಳ ಒಳಗೆ ಚುನಾವಣೆ ನಡೆಸುವಂತೆ ಆದೇಶ ನೀಡಿದೆ.

ರಾಜ್ಯದಲ್ಲಿ ಇತ್ತೀಚೆಗಷ್ಟೇ ನಗರ ಪಾಲಿಕೆ ಚುನಾವಣೆಗಳು ನಡೆದಿದ್ದವು. ಇತರ ಚುನಾವಣೆಗಳನ್ನು ನಡೆಸಲು ಸಾಧ್ಯವಿದ್ದರೆ ಸಾಹಿತ್ಯ ಪರಿಷತ್ ಚುನಾವಣೆ ನಡೆಸಲು ಏನು ಸಮಸ್ಯೆ ಎಂದು ಹೈಕೋರ್ಟ್ ಪ್ರಶ್ನಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ಹೋಟೆಲ್‌ಗಳಲ್ಲಿ 10 ರೂ ಕಾಫಿ ಹೀರುತ್ತಾ ಕೂತರೆ ಗ್ರಾಹಕರಿಗೆ ಬೀಳಲಿದೆ 1000 ರೂ.ವರೆಗೆ ದಂಡ!
ಬಾರ್ ಲೈಸೆನ್ಸ್‌ಗೆ ರಾಕೆಟ್ ವೇಗದಲ್ಲಿ ಕೆಲಸ ಮಾಡಿದ ಸರ್ಕಾರ; ಕೇವಲ 47 ಗಂಟೆಗಳಲ್ಲಿ 14,275 ಲೈಸೆನ್ಸ್‌ ನವೀಕರಣ!