ಇವರು ಮುಂದೆ ಪಶ್ಚಾತಾಪ ಪಡುತ್ತಾರೆ : ಡಿಕೆಶಿ

By Web DeskFirst Published Feb 7, 2019, 12:57 PM IST
Highlights

ಮೊಂದೊಂದು ದಿನ ಇವರೆಲ್ಲಾ ಹೆಚ್ಚು ಪಶ್ಚಾತಾಪ ಪಡುತ್ತಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ನಲ್ಲಿ ಅತೃಪ್ತರ ಗುಂಪೊಂದು ಸೃಷ್ಟಿಯಾಗಿದ್ದು ಈ ಗುಂಪನ್ನು ಉದ್ದೇಶಿಸಿ ಈ ಹೇಳಿಕೆ ನೀಡಿದ್ದಾರೆ. 

ಬೆಂಗಳೂರು: ಬಿಜೆಪಿಯವರು ಎಷ್ಟೇ ಪ್ರಯತ್ನ ನಡೆಸಿದರೂ ಸಮ್ಮಿಶ್ರ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ. 

ಬಿಜೆಪಿಯ ಹುಸಿ ಭರವಸೆ ನಂಬಿಕೊಂಡು ಪಕ್ಷದೊಂದಿಗೆ ಕಣ್ಣಾಮುಚ್ಚಾಲೆ ಆಡುತ್ತಿರುವ ಕಾಂಗ್ರೆಸ್‌ನ ಅತೃಪ್ತ ಶಾಸಕರು ಮುಂದೆ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. 

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸರ್ಕಾರ ಉರುಳಿಸಲು ಏನೆಲ್ಲಾ ಪ್ರಯತ್ನ ನಡೆಸುತ್ತಿದ್ದಾರೆ. 

ಎಷ್ಟೆಲ್ಲಾ ಆಟ ಆಡುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ಇದೆ. ಬಿಜೆಪಿ ಎಷ್ಟೇ ಆಟವಾಡಿದರೂ ಸರ್ಕಾರವನ್ನು ಅಲುಗಾಡಲ್ಲ ಎಂದರು.

click me!