ಸಿಎಂ ಡಿಸಿಎಂ ಫೋಟೋ ಬಳಸಿ ಬಿಜೆಪಿ 'ಸ್ಕ್ಯಾಮ್ ಲಾರ್ಡ್' ಪೋಸ್ಟ್: ಸೈಬರ್ ಕ್ರೈಂ ಠಾಣೆ ಮೆಟ್ಟಿಲೇರಿದ ಕಾಂಗ್ರೆಸ್

Published : Jan 29, 2026, 11:55 PM ISTUpdated : Jan 30, 2026, 12:37 AM IST
Congress files complaint against BJP s Scam Lord post targeting CM DCM

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ 'ಸ್ಕ್ಯಾಮ್ ಲಾರ್ಡ್' ಶೀರ್ಷಿಕೆಯಡಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕಾಗಿ ಬಿಜೆಪಿ ವಿರುದ್ಧ ಕೆಪಿಸಿಸಿ ದೂರು ದಾಖಲಿಸಿದೆ. ಈ ಪೋಸ್ಟ್ ಸರ್ಕಾರದ ಗಣ್ಯರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದೆ ಎಂಬ ಆರೋಪ.

ಬೆಂಗಳೂರು (ಜ.29): ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸರ್ಕಾರದ ಪ್ರಮುಖ ಸಚಿವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ದೂರು ದಾಖಲಾಗಿದೆ. ಬಿಜೆಪಿಯ ಅಧಿಕೃತ 'ಎಕ್ಸ್' (ಟ್ವಿಟರ್) ಖಾತೆಯಲ್ಲಿ ಪ್ರಕಟವಾದ ಪೋಸ್ಟ್ ಸರ್ಕಾರದ ಗಣ್ಯರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿ ಕೆಪಿಸಿಸಿ ವಕೀಲರ ತಂಡವು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದೆ.

'ಸ್ಕ್ಯಾಮ್ ಲಾರ್ಡ್' ಪೋಸ್ಟ್‌

ಬಿಜೆಪಿ ತನ್ನ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ಸಿಎಂ, ಡಿಸಿಎಂ ಹಾಗೂ ಸಚಿವರ ಫೋಟೋಗಳನ್ನು ಬಳಸಿ 'ಸ್ಕ್ಯಾಮ್ ಲಾರ್ಡ್' (Scam Lord) ಎಂಬ ವಿವಾದಾತ್ಮಕ ಶೀರ್ಷಿಕೆಯಡಿ ಪೋಸ್ಟ್ ಬಿಡುಗಡೆ ಮಾಡಿತ್ತು. 'ಕರ್ನಾಟಕವನ್ನು ಹಗಲಿರುಳು ಲೂಟಿ ಹೊಡೆಯುತ್ತಿರುವ ಸ್ಕ್ಯಾಮ್ ಸಾಮ್ರಾಜ್ಯದ ಅಸಲಿ ಕಥೆ' ಎಂದು ಬರೆದು ನಮ್ಮ ನಾಯಕರ ಫೋಟೋಗಳನ್ನ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.

ವ್ಯಕ್ತಿತ್ವ ಹರಣ ಹಾಗೂ ಗೊಂದಲ ಸೃಷ್ಟಿಯ ಆರೋಪ

'ಲೂಟಿ' ಮತ್ತು 'ಸ್ಕ್ಯಾಮ್' ಎಂಬ ಪದಗಳನ್ನು ಪದೇ ಪದೇ ಬಳಸುವ ಮೂಲಕ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದು ಕೇವಲ ರಾಜಕೀಯ ಟೀಕೆಯಲ್ಲ, ಬದಲಾಗಿ ಸಂವಿಧಾನಾತ್ಮಕ ಹುದ್ದೆಯಲ್ಲಿರುವವರ ವ್ಯಕ್ತಿತ್ವ ಹರಣ ಮಾಡುವ ವ್ಯವಸ್ಥಿತ ಸಂಚು ಎಂದು ಕೆಪಿಸಿಸಿ ವಕೀಲರ ತಂಡ ಆರೋಪಿಸಿದೆ. ಸಮಾಜದ ಶಾಂತಿ ಕದಡುವ ಇಂತಹ ಪೋಸ್ಟ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ದೂರು ಸ್ವೀಕರಿಸಿದ ಸೈಬರ್ ಪೊಲೀಸರು

ಸೈಬರ್ ಕ್ರೈಂ ಪೊಲೀಸರು ಕಾಂಗ್ರೆಸ್ ವಕೀಲರ ತಂಡ ನೀಡಿದ ದೂರನ್ನು ಅಧಿಕೃತವಾಗಿ ಸ್ವೀಕರಿಸಿದ್ದು, ಸ್ವೀಕೃತಿ (Acknowledgment) ನೀಡಿದ್ದಾರೆ. ಈ ಪೋಸ್ಟ್‌ನ ಮೂಲ ಮತ್ತು ಅದರ ಹಿಂದಿರುವ ಉದ್ದೇಶದ ಬಗ್ಗೆ ತಾಂತ್ರಿಕ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಇದರಿಂದಾಗಿ ಮುಂಬರುವ ದಿನಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಡಿಜಿಟಲ್ ವಾರ್ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬ್ಯಾನರ್ ಗಲಾಟೆ ಕೇಸ್‌: ಚಾರ್ಜ್ ಕೊಡದೆ ಪಟ್ಟು ಹಿಡಿದ ಡಿವೈಎಸ್‌ಪಿ? ಐಪಿಎಸ್ ಅಧಿಕಾರಿ ವರ್ಗಾವಣೆಯೇ ರದ್ದು!
ಗಾಂಧೀಜಿಯನ್ನು ಕೊಂದವರು ಈಗ ಅವರ ಹೆಸರನ್ನೇ ಬದಲಿಸುತ್ತಿದ್ದಾರೆ: ಶಿವಮೊಗ್ಗದಲ್ಲಿ ಕೇಂದ್ರದ ವಿರುದ್ಧ ಡಿಕೆಶಿ ವಾಗ್ದಾಳಿ