ಕೊಟ್ಟ ಮಾತಿನಂತೆ ಐದೂ ಗ್ಯಾರಂಟಿ ಈಡೇರಿಸೋದು ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ

Published : Jun 01, 2023, 06:59 AM IST
ಕೊಟ್ಟ ಮಾತಿನಂತೆ ಐದೂ ಗ್ಯಾರಂಟಿ ಈಡೇರಿಸೋದು ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ

ಸಾರಾಂಶ

ಕೊಟ್ಟ ಮಾತಿನಂತೆ ನಾವು ಐದೂ ಗ್ಯಾರಂಟಿಗಳನ್ನು ಜಾರಿ ಮಾಡುವುದೂ ಕೂಡ ಅಷ್ಟೇ ಸತ್ಯ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು(ಜೂ.01): ರಾಜ್ಯದ ಜನರಿಗೆ ಕೊಟ್ಟಿರುವ ಭರವಸೆಯಂತೆ ನಮ್ಮ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವುದೂ ಕೂಡ ಅಷ್ಟೇ ಗ್ಯಾರಂಟಿ. ಈ ಬಗ್ಗೆ ಜೂ.2ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪಂಚ ಗ್ಯಾರಂಟಿ ಯೋಜನೆಗಳ ಜಾರಿ ಸಂಬಂಧ ವಿಧಾನಸೌಧದಲ್ಲಿ ಬುಧವಾರ ಎಲ್ಲ ಸಚಿವರೊಂದಿಗೆ ಮಹತ್ವದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇವತ್ತಿನ ಸಭೆಯಲ್ಲಿ ಯಾವುದೇ ತೀರ್ಮಾನಗಳು ಆಗಿಲ್ಲ. ಯಾವ್ಯಾವ ಗ್ಯಾರಂಟಿ ಯೋಜನೆಗಳನ್ನು ಹೇಗೆ ಜಾರಿ ಮಾಡಬಹುದು, ಜಾರಿಗೆ ಯಾವ್ಯಾವ ರೀತಿ ಅವಕಾಶಗಳಿವೆ? ಇದಕ್ಕೆ ಎಷ್ಟು ಹಣಕಾಸು ಸೌಲಭ್ಯ ಬೇಕು ಎಂಬ ಬಗ್ಗೆ ಸಚಿವ ಸಂಪುಟದ ಎಲ್ಲ ಸಹದ್ಯೋಗಿಗಳಿಗೂ ಪ್ರಾತ್ಯಕ್ಷಿಕೆ ಮೂಲಕ ಆರ್ಥಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಚಿವರು ತಮಗೆ ಲಭ್ಯವಾಗಿರುವ ಮಾಹಿತಿಯನ್ನು ಪರಿಶೀಲಿಸಿ ಮತ್ತೊಮ್ಮೆ ಯೋಚನೆ ಮಾಡಿಕೊಂಡು ಶುಕ್ರವಾರ ಬೆಳಗ್ಗೆ 11 ಗಂಟೆಗೆ ನಡೆಯುವ ಕ್ಯಾಬಿನೆಟ್‌ಗೆ ಬರುತ್ತಾರೆ. ಅಲ್ಲಿ ಮತ್ತೊಮ್ಮೆ ಯಾವ್ಯಾವ ಯೋಜನೆಗಳನ್ನು ಹೇಗೆ ಜಾರಿ ಮಾಡುವುದು ಎಂಬ ಬಗ್ಗೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಮಾಡುತ್ತೇವೆ. ಆದರೆ, ಕೊಟ್ಟ ಮಾತಿನಂತೆ ನಾವು ಐದೂ ಗ್ಯಾರಂಟಿಗಳನ್ನು ಜಾರಿ ಮಾಡುವುದೂ ಕೂಡ ಅಷ್ಟೇ ಸತ್ಯ’ ಎಂದರು.

10 ಕೇಜಿ ಉಚಿತ ಅಕ್ಕಿ ನೀಡುವುದು ಖಚಿತ, ಆದರೆ ಯಾವಾಗ ಎಂದು ಸಿಎಂ ನಿರ್ಧರಿಸ್ತಾರೆ: ಸಚಿವ ಕೆಎಚ್ ಮುನಿಯಪ್ಪ

ಗ್ಯಾರಂಟಿ ಯೋಜನೆಗಳಿಗೆ ಹಣಕಾಸಿನ ಹೊಂದಾಣಿಕೆ ಆಗಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ‘ನೀವು ಅದನ್ನೆಲ್ಲಾ ಯಾಕೆ ಕೇಳುತ್ತೀರಿ? ನೀವು ಹಣ ಕೊಡುತ್ತೀರಾ? ಸರ್ಕಾರ ತಾನೆ ಕೊಡೋದು? ಅದನ್ನೆಲ್ಲಾ ಈಗಲೇ ಹೇಳೋಕಾಗುತ್ತಾ? ಮುಂದೆ ಹೇಳ್ತೀವಿ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 10 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!