ಸರ್ಕಾರದಿಂದ ರಾಜ್ಯದಲ್ಲಿ ಕ್ರಿಶ್ಚಿಯಾನಿಟಿ ಬೆಳೆಸುವ ಹುನ್ನಾರ: ರೆಡ್ಡಿ ಆಕ್ರೋಶ

Kannadaprabha News, Ravi Janekal |   | Kannada Prabha
Published : Sep 18, 2025, 01:46 AM IST
janardana reddy

ಸಾರಾಂಶ

ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು, ಕಾಂಗ್ರೆಸ್ ಸರ್ಕಾರದ ಸಮೀಕ್ಷೆಯು ಕ್ರಿಶ್ಚಿಯಾನಿಟಿಯನ್ನು ಬೆಳೆಸಿ ಹಿಂದೂ ಧರ್ಮವನ್ನು ನಾಶಮಾಡುವ ಹುನ್ನಾರ ಎಂದು ಆರೋಪಿಸಿದ್ದಾರೆ. ಈ ಸಮೀಕ್ಷೆಯು ಮತಾಂತರಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಗಂಭೀರ ಆರೋಪ ಮಾಡಿದರು.

ಕೊಪ್ಪಳ (ಸೆ.18):  ಇಟಲಿಯಪೋಪ್‌ರಂತೆ ಕ್ರಿಶ್ಚಿಯಾನಿಟಿ ಬೆಳೆಸುವ ಹುನ್ನಾರ ಸಮೀಕ್ಷೆಯಲ್ಲಿ ಅಡಗಿದ್ದು, ಈ ಮೂಲಕ ಹಿಂದು ಧರ್ಮ ನಾಶ ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಇದರಲ್ಲಿಯೇ ಸರ್ಕಾರ ಮುಳುಗಿ ಹೋಗಲಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಕ್ರಿಶ್ಚಿಯನ್, ರೆಡ್ಡಿ ಕ್ರಿಶ್ಚಿಯನ್, ಪಂಚಮಸಾಲಿ ಕ್ರಿಶ್ಚಿಯನ್ ಎನ್ನುವ ಕಾಲಂ ನೀಡುವ ಮೂಲಕ ಎಲ್ಲ ಜಾತಿಗಳಲ್ಲಿಯೂ ಕ್ರಿಶ್ಚಿಯಾನಿಟಿ ತರಲು ಯತ್ನ ನಡೆಸಿದ್ದು, ಇದು ಅವರಿಗೆ ಮುಳುವಾಗಲಿದೆ ಎಂದರು.

ಹಿಂದೂ ಧರ್ಮವನ್ನ ಮತಾಂತರ ಮಾಡಲು ಯತ್ನ:

ಹಿಂದೂ ಧರ್ಮದವರನ್ನು ಮತಾಂತರ ಮಾಡಲು ಯತ್ನಿಸಿದ್ದಾರೆ. ದೇಶದಲ್ಲಿ ಸಾವಿರಾರು ವರ್ಷಗಳ ಕಾಲ ಬೇರೆ ಬೇರೆ ಧರ್ಮದವರು ಆಳ್ವಿಕೆ ನಡೆಸಿದರೂ ಹಿಂದೂ ಧರ್ಮವನ್ನು ಏನು ಮಾಡಲು ಆಗಿಲ್ಲ. ಇವರಿಂದಲೂ ಆಗಲು ಸಾಧ್ಯವಿಲ್ಲವೆಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದರು. 

ಕುರುಬ ಸಮುದಾಯ ಎಸ್‌ಟಿ ಸೇರ್ಪಡೆಗೆ ಭಿನ್ನಾಭಿಪ್ರಾಯಕ್ಕೆ ಸರ್ಕಾರ ಯತ್ನ:

ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವ ಮೂಲಕ ಎರಡು ಸಮೂದಾಯಗಳ ನಡುವೆ ಭಿನ್ನಾಭಿಪ್ರಾಯ ತರಲು ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಜ್ಯಾದ್ಯಂತ ಎಲ್‌ಕೆಜಿ ಯಿಂದ ಪಿಯುಸಿವರೆಗೆ ಕಲಿಕಾ ಸಮಯದ ಅವಧಿ ಬದಲಾಯಿಸುವಂತೆ ಶಿಕ್ಷಣ ಇಲಾಖೆಗೆ ಮಕ್ಕಳ ಆಯೋಗ ಪತ್ರ
ಮುಡಾ ಹಗರಣದಲ್ಲಿ ಕೋರ್ಟ್ ಹೊಸ ಆದೇಶ, ಜೈಲಲ್ಲಿದ್ದ ಮಾಜಿ ಆಯುಕ್ತ ದಿನೇಶ್ ಕುಮಾರ್ ಮತ್ತೆ ಪೊಲೀಸ್‌ ಕಸ್ಟಡಿಗೆ!