ಈ ಸರ್ಕಾರ ಬಹಳ ದಿನ ಉಳಿಯೊಲ್ಲ ಕಾದು ನೋಡಿ; ಮಾಜಿ ಸಚಿವ ಮುರುಗೇಶ್ ನಿರಾಣಿ ಬಾಂಬ್!

By Ravi JanekalFirst Published Feb 15, 2024, 3:39 PM IST
Highlights

ಈ ರ್ಕಾರ ಬಹಳ ದಿನ ಉಳಿಯಲ್ಲ, ಶೀಘ್ರವೇ ಪತನವಾಗಲಿದೆ ಕಾದು ನೋಡಿ ಎಂದು ಮಾಜಿ ಸಚಿವ ಮುರುಗೇಶ ಆರ್ ನಿರಾಣಿ ಹೊಸ ಬಾಂಬ್ ಸಿಡಿಸಿದ್ದಾರೆ. ಇಂದು ಮೇಯರ್ ಉಪಮೇಯರ್ ಚುನಾವಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ಅನುದಾನ ಬಂದಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಬೆಳಗಾವಿ (ಫೆ.15): ಈ ರ್ಕಾರ ಬಹಳ ದಿನ ಉಳಿಯಲ್ಲ, ಶೀಘ್ರವೇ ಪತನವಾಗಲಿದೆ ಕಾದು ನೋಡಿ ಎಂದು ಮಾಜಿ ಸಚಿವ ಮುರುಗೇಶ ಆರ್ ನಿರಾಣಿ ಹೊಸ ಬಾಂಬ್ ಸಿಡಿಸಿದ್ದಾರೆ.

ಇಂದು ಮೇಯರ್ ಉಪಮೇಯರ್ ಚುನಾವಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ಅನುದಾನ ಬಂದಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಐದು ಗ್ಯಾರಂಟಿಗಳನ್ನು ನಾವು ಸ್ವಾಗತ ಮಾಡಿದ್ವಿ. ಆದರೆ ಈಗ ಕಂಡಿಷನ್ ಹಾಕಿದ್ದಾರೆ. ಗ್ಯಾರಂಟಿ ‌ಜಾರಿಯಿಂದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆ ಆಗ್ತಿಲ್ಲ, ಹೀಗಾಗಿ ಸರ್ಕಾರದ ವಿರುದ್ಧ ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಅತ್ಯಂತ ಕಡಿಮೆ ಅವಧಿಯಲ್ಲೇ ಈ ಸರ್ಕಾರ ಏನಾಗುತ್ತೆ ಎಂದು ಕಾದು ನೋಡಿ ಎಂದರು.

ಬೇಸಗೆ ಬಿಸಿಲು ಧಗೆ ಹೆಚ್ಚಾದಂತೆ ಬಿಯರ್ ಗೆ ಫುಲ್ ಡಿಮ್ಯಾಂಡ್! ದರ ಏರಿಕೆ ನಡುವೆ ಮುಗಿಬಿದ್ದು ಖರೀದಿಸುತ್ತಿರುವ ಮದ್ಯಪ್ರಿಯರು!

ಬಿಜೆಪಿ ನಾಯಕರೇನು ಈ ಸರ್ಕಾರ ಪತನವಾಗಲೆಂದು ಬಯಸುತ್ತಿಲ್ಲ. ಆದರೆ ಅನುದಾನದ ವಿಚಾರದಲ್ಲಿ ಶಾಸಕರೇ ಅಸಮಾಧಾನಿತರಾಗಿ ಸರ್ಕಾರ ಕೆಡವಲು ತುದಿಗಾಲಮೇಲೆ ನಿಂತಿದ್ದಾರೆ. ಹೀಗಾಗಿ ‌ದೊಡ್ಡ ಪ್ರಮಾಣದಲ್ಲಿ ಕಾಂಗ್ರೆಸ್ ‌ಶಾಸಕರಿಂದಲೇ‌ ಈ ಸರ್ಕಾರ ‌ಪತನವಾಗಲಿದೆ ಎಂದು ಭವಿಷ್ಯ ನುಡಿದರು.

ಇನ್ನು ಬಿಎಸ್ ವೈ ಹಾಗೂ ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಯತ್ನಾಳ ಹೇಳಿಕೆ ‌ವಿಚಾರ ಸಂಬಂಧ ಮಾತನಾಡಿದ ಅವರು, ಕೆಲವೊಬ್ಬರು ಅಸಾಧಾರಣ ವ್ಯಕ್ತಿಗಳಿರ್ತಾರೆ ಅವರ ಬಗ್ಗೆ ನಾನು ಮಾತನಾಡಲ್ಲ ಎನ್ನುವ ಮೂಲಕ ಯತ್ನಾಳಗೆ ಟಾಂಗ್ ನೀಡಿದ‌ ಮುರಗೇಶ ನಿರಾಣಿ ಮುಂದುವರಿದು, ನೀವು ಲೋಕಸಭೆ ಚುನಾವಣೆಗೆ ಬೆಳಗಾವಿಯಿಂದ ತಯಾರಿ ನಡೆಸ್ತಿದ್ದಿರಾ ಎಂಬ ಪ್ರಶ್ನೆಗೆ, ನಾನು ವಿಜಯಪುರದಿಂದ ಇಲ್ಲಿಗೆ ಬಂದಿದ್ದೇನೆ, ಹಾಗೇ ತಯಾರಿ ನಡೆಸ್ತಿದ್ರೆ ಇಲ್ಲಿಯೇ ಇರ್ತಿದ್ದೆ ಎಂದರು. ಇದೇ ವೇಳೆ ಬಾಗಲಕೋಟೆ ಟಿಕೆಟ್ ಆಕಾಂಕ್ಷಿಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ, ಪಕ್ಷ ಯಾವ ಜವಾಬ್ದಾರಿ ಕೊಟ್ಟರೂ ನಾನು ಆ ಜವಾಬ್ದಾರಿಯನ್ನು ನೀಗಿಸುತ್ತೇನೆ. ಬಿಜೆಪಿಯಲ್ಲಿ ಯಾರಿಗೆ ಯಾವ ಸರ್ಪೈಸ್ ಆಗುತ್ತೋ ಗೊತ್ತಿಲ್ಲ. ಆದರೆ ಪಕ್ಷ ವಹಿಸಿದ ಯಾವುದೇ ಜವಾಬ್ದಾರಿ ನಿಭಾಯಿಸಲು ಸಿದ್ಧ ಎಂದರು.

10 ವರ್ಷದಲ್ಲಿ ಕರ್ನಾಟಕಕ್ಕೆ 11 ರೈಲು ತಂದಿದ್ದೇನೆ; ಮೈಸೂರು-ರಾಮೇಶ್ವರಂ 12ನೇ ರೈಲು ಬರಲಿದೆ: ಸಂಸದ ಪ್ರತಾಪ್ ಸಿಂಹ ಘೋಷಣೆ!

click me!