
ಬೆಂಗಳೂರು (ಅ.12) : ಅನುದಾನದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯುೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬುಧವಾರ ಬಿಜೆಪಿ ಸರ್ಕಾರ ನೀಡಿದ ಅನುದಾನವನ್ನು ರದ್ದುಗೊಳಿಸಿದ ಕಾಂಗ್ರೆಸ್ ಸರ್ಕಾರ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಶಾಸಕ ಮುನಿರತ್ನ ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ಆಗಮಿಸಿದ ಯಡಿಯೂರಪ್ಪ ಅವರು ಬೆಂಬಲ ಸೂಚಿಸಿದರು.
ಶಾಸಕ ಮುನಿರತ್ನಗೆ ಡಬಲ್ ಟ್ರಬಲ್: ಸರ್ಕಾರದ ಅನುದಾನವೂ ಇಲ್ಲ, ವಿದ್ಯಾ ಹಿರೇಮಠ್ಳಿಂದ ಮರ್ಯಾದೆಯೂ ಇಲ್ಲ
ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರದ ನಡೆಯೂ ಮೇಲ್ನೋಟಕ್ಕೆ ದ್ವೇಷದ ರಾಜಕಾರಣ ಎಂಬುದು ಗೊತ್ತಾಗುತ್ತದೆ. ಎಲ್ಲರಿಗೂ ಅನುದಾನ ನೀಡಿದಂತೆ ಆರ್.ಆರ್.ನಗರ ಕ್ಷೇತ್ರಕ್ಕೆ ಅನುದಾನ ನೀಡುವ ಕುರಿತು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯೊಂದಿಗೆ ಮಾತನಾಡುತ್ತೇನೆ. ಬಿಜೆಪಿ ಸರ್ಕಾರ ನೀಡಿದ ಅನುದಾನ ರದ್ದು ಮಾಡಿ ಸೇಡಿನ ರಾಜಕಾರಣ ಮಾಡಿದ್ದಾರೆ. ಈ ರೀತಿ ಮಾಡುವುದು ಸರಿಯಲ್ಲ. ಒಬ್ಬರೇ ಧರಣಿ ಮಾಡುವುದು ಬೇಡ. ನಾವೆಲ್ಲರೂ ಮುನಿರತ್ನ ಜತೆಗಿದ್ದು, ಪ್ರತಿಭಟನೆ ಕೈ ಬಿಡುವಂತೆ ತಿಳಿಸಿದ್ದೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ