ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆ ಆಗಿರೋದು ನಿಜ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಒಪ್ಪಿಗೆ

Published : Jul 10, 2024, 12:26 PM IST
ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆ ಆಗಿರೋದು ನಿಜ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಒಪ್ಪಿಗೆ

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ  ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಅಧಿಕಾರಿಗಳ ವರ್ಗಾವಣೆ ದಂಧೆ  ಆಗಿರೋದು ನಿಜ ಎಂದಿದ್ದು,  ಇದು ಸರ್ಕಾರದಲ್ಲಿ ಒಂದು ಅಶಿಸ್ತು ಆಗಿದೆ, ಇದು ಆಗಬಾರದು ಎಂದು ಹೇಳಿಕೆ ನೀಡಿದ್ದಾರೆ. 

ಕೊಪ್ಪಳ (ಜು.10): ರಾಜ್ಯದಲ್ಲಿ ವರ್ಗಾವಣೆ ವಿಚಾರವಾಗಿ ಮಾತನಾಡಿರುವ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ  ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು, ಅಧಿಕಾರಿಗಳ ವರ್ಗಾವಣೆ ದಂಧೆ ಆಗಿರೋದು ನಿಜ ಎಂದಿದ್ದು,  ಇದು ಸರ್ಕಾರದಲ್ಲಿ ಒಂದು ಅಶಿಸ್ತು ಆಗಿದೆ, ಇದು ಆಗಬಾರದು ಎಂದು ಹೇಳಿಕೆ ನೀಡಿದ್ದಾರೆ. 

ಕೊಪ್ಪಳದ ಕೋಮಲಾಪೂರದಲ್ಲಿ ಮಾತನಾಡಿದ ಬಸವರಾಜ ರಾಯರೆಡ್ಡಿ , ಅಧಿಕಾರಿಗಳ ವರ್ಗಾವಣೆ ದಂಧೆ  ಸರ್ಕಾರದಲ್ಲಿ ಒಂದು ಅಶಿಸ್ತು ಆಗಿದೆ, ಇದು ಆಗಬಾರದು. ಇದು ಈ ಸರ್ಕಾರ ಅಂತ ಅಲ್ಲ ಎಲ್ಲಾ ಸರ್ಕಾರಗಳಲ್ಲೂ ದಂಧೆ ಇದೆ.  ಈ ವಿಚಾರದಲ್ಲಿ ಸ್ಪಷ್ಟವಾಗಿ  ಸಿಎಂ ಹೇಳಿದ್ದಾರೆ. ಯಾವುದೇ ರೀತಿ ಒತ್ತಡಕ್ಕೆ ಮಣಿಯಲ್ಲ ಎಂದು, ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಹೇಳಿದ್ದರಲ್ಲಿ ತಪ್ಪೇನಿದೆ? ಸಿಎಂ ಸಿದ್ದರಾಮಯ್ಯ ಅವರು ಅದನ್ನು ಕಂಟ್ರೋಲ್ ಮಾಡಲು ಪ್ರಯತ್ನ ಮಾಡ್ತಿದ್ದಾರೆ ಎಂದರು.

Chitradurga: ಬಾರ್‌ಗೆ ಕನ್ನ ಹಾಕಿ ಎಣ್ಣೆ, ಹಣ ಕದ್ದ ಲೋಕಸಭಾ ಚುನಾವಣಾ ಅಭ್ಯರ್ಥಿ!

ಕೊಪ್ಪಳ ಎಸ್ಪಿ ವರ್ಗಾವಣೆ ವಿಚಾರವಾಗಿ ಮಾತನಾಡಿದ ಅವರು, ನಾನು ಯಾರ ಪರವಾಗಿಯೂ ಮಾತಾಡಿಲ್ಲ. ಶಾಸಕರು ಹೇಳಿದ್ದಕ್ಕೆ ಅದರಲ್ಲಿ ಮಾತಾಡಿದ್ದೆ, ವರ್ಗಾವಣೆ ಯಾವಾಗಲೂ ಒಂದು ದಂಧೆಯೇ ಎಂದು ಬಸವರಾಜ ರಾಯರೆಡ್ಡಿ ಒತ್ತಿ ಹೇಳಿದರು.

ಬಹುಭಾಷಾ ನಟ ಪ್ರಭುದೇವ ಅಜ್ಜಿ ನಿಧನ, ಮೈಸೂರಿಗೆ ಆಗಮಿಸಿದ ನಟ

ಇನ್ನು ರಾಜ್ಯದಲ್ಲಿ ನಡೆದ ಹಗರಣದ ಬಗ್ಗೆ ಸಿಎಂಗೆ ಮಾಹಿತಿ ಇತ್ತು ಅನ್ನೋ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿ, ಅದನ್ನು ಹಾದಿ ಬೀದಿಯಲ್ಲಿ ಕೂತು  ಮಾತನಾಡಲು ಆಗಲ್ಲ. ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ ಎಂದು ರಾಯರೆಡ್ಡಿ ಹೇಳಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ