ನಾವಿನ್ನೂ ಸತ್ತಿಲ್ಲ : ಡಿ.ಕೆ.ಶಿವಕುಮಾರ್ ಎಚ್ಚರಿಕೆ !

Kannadaprabha News   | Asianet News
Published : Dec 19, 2019, 08:16 AM IST
ನಾವಿನ್ನೂ ಸತ್ತಿಲ್ಲ : ಡಿ.ಕೆ.ಶಿವಕುಮಾರ್ ಎಚ್ಚರಿಕೆ !

ಸಾರಾಂಶ

ಈ ಹೆಸರು ದೇಶ ಜನರ ಭಾವನೆಗೆ ಬಿಟ್ಟಿರುವ ವಿಚಾರ ಈ ನಿಟ್ಟಿನಲ್ಲಿ ಯಾವುದೇ ಬದಲಾವಣೆ ಅಸಾಧ್ಯ, ಇದಕ್ಕೆ ಅವಕಾಶವನ್ನೂ ನೀಡಲ್ಲ ಎಂದು ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರು [ಡಿ.19]:  ನಾವಿನ್ನೂ ಬದುಕೇ ಇದ್ದೇವೆ, ಇನ್ನೂ ಸತ್ತಿಲ್ಲ. ಇಂದಿರಾ ಕ್ಯಾಂಟೀನ್‌ ಹೆಸರನ್ನು ಬದಲಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡುತ್ತಿದ್ದೇವೆ. ಇಂದಿರಾ ಗಾಂಧಿ ಎಂಬುದು ದೇಶದ ಜನರ ಭಾವನಾತ್ಮಕ ವಿಷಯ. ಅದನ್ನು ಮುಟ್ಟಲು ಹೋಗಬೇಡಿ. ಯಾವುದೇ ಕಾರಣಕ್ಕೂ ನಾವು ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ಉಚಿತ ಅಕ್ಕಿ ಸ್ಕೀಂ ಇಂದಿರಾದ್ದು: ಸಿದ್ದುಗೆ ಪರಮೇಶ್ವರ್‌ ಟಾಂಗ್‌!...

ನಾವೂ ಸಹ ರಾಜ್ಯದಲ್ಲಿ ಸರ್ಕಾರ ನಡೆಸಿದ್ದೇವೆ. ಬಿಜೆಪಿ ಅಧಿಕಾರದಲ್ಲಿದ್ದಾಗ ವಾಜಪೇಯಿ ಹೆಸರಿನಲ್ಲಿ ಅಟಲ್‌ ಸಾರಿಗೆ, ಅಟಲ್‌ ಜನಸ್ನೇಹಿ ಕೇಂದ್ರ ಸೇರಿದಂತೆ ಹಲವಾರು ಯೋಜನೆ ಜಾರಿಗೆ ತಂದಿತ್ತು. ಆದರೆ, ನಮ್ಮ ಅವಧಿಯಲ್ಲಿ ಅದನ್ನು ಬದಲಾವಣೆ ಮಾಡಲು ಹೋಗಿರಲಿಲ್ಲ. ಏಕೆಂದರೆ ಅಟಲ್‌ ಬಿಹಾರಿ ವಾಜಪೇಯಿ ಅವರ ಹೆಸರು ದೇಶಕ್ಕೆ ಬೇಕಿದೆ ಎಂದರು. 

ಮೊರಾರ್ಜಿ ದೇಸಾಯಿ, ಜೆ.ಪಿ. ನಾರಾಯಣ್‌ ಅವರ ಹೆಸರಿನಲ್ಲಿ ಹಲವು ಶಿಕ್ಷಣ ಸಂಸ್ಥೆಗಳಿವೆ. ಯಾವುದನ್ನಾದರೂ ನಾವು ಬದಲಾವಣೆ ಮಾಡಲು ಹೋಗಿದ್ದೇವೆಯೇ ಎಂದು ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ