
ಬೆಂಗಳೂರು (ಮಾ.07): ಜನರು ಹೇಸಿಗೆ ಪಡುವ ಮಟ್ಟಕ್ಕೆ ಇಂದಿನ ರಾಜಕಾರಣ ಬಂದಿದೆ. ಕೆಲವರು ಮಾಡುವ ತಪ್ಪಿನಿಂದ ರಾಜಕಾರಣಿಗಳ ಸಮೂಹವನ್ನೇ ಜನರು ದೂಷಿಸುವಂತಾಗಿದೆ. ಇಂತಹ ಕೆಲವರ ನಡವಳಿಕೆಗಳಿಂದ ‘ರಾಜಕಾರಣಿಗಳು ಎಂದರೆ ಲಫಂಗಗಳು’ ಎನ್ನುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ರಮೇಶ್ ಜಾರಕಿಹೊಳಿರಾಸಲೀಲೆ ಸಿ.ಡಿ. ಪ್ರಕರಣ ಹಾಗೂ ಆರು ಮಂದಿ ಸಚಿವರು ತಮ್ಮ ವಿರುದ್ಧ ಮಾನಹಾನಿ ವರದಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋಗಿರುವ ಕುರಿತು ಶನಿವಾರ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು. ಬಿಜೆಪಿಯಲ್ಲಿ ಯಾರೂ ಪ್ರಾಮಾಣಿಕರು ಇಲ್ಲ. ಅಲ್ಲಿರುವವರೆಲ್ಲರೂ ಕಳ್ಳರೇ. ಇತ್ತೀಚಿನ ಪ್ರಕರಣಗಳನ್ನು ಗಮನಿಸಿದರೆ ರಾಜಕಾರಣದ ಬಗ್ಗೆ ಜನ ಹೇಸಿಗೆ ಪಡುವ ಸ್ಥಿತಿ ಬಂದಿದೆ. ರಾಜಕಾರಣಿಗಳು ಎಂದರೆ ಲಫಂಗಗಳು ಎನ್ನುವಂತಾಗಿದೆ. ಇದನ್ನು ನಾನು ಹೇಳುತ್ತಿಲ್ಲ. ಸಾರ್ವಜನಿಕರ ಅಭಿಪ್ರಾಯವಾಗಿದೆ ಎಂದರು. ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಅವರ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.
ನಿಮ್ಮ ಹಿನ್ನೆಲೆ ಏನು?: ಸಿದ್ದುಗೆ ಯಡಿಯೂರಪ್ಪ ತಿರುಗೇಟು ...
ಪಕ್ಷ ಬಿಟ್ಟವರ ಬಗ್ಗೆ ಅನುಕಂಪವಿಲ್ಲ: ಸಿ.ಡಿ. ವಿಚಾರದಲ್ಲಿ ಪ್ರಸ್ತಾಪವಾಗಿರುವ ಹೆಸರಿನ ಯಾವ ಸಚಿವರ ಬಗ್ಗೆಯೂ ನನಗೆ ಅನುಕಂಪ ಇಲ್ಲ. ನಾನು ಇದ್ದದ್ದನ್ನು ಇದ್ದ ಹಾಗೆ ಹೇಳುತ್ತೇನೆ. ಆರು ಮಂದಿ ಸಚಿವರು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿ ವಿವರ ಪಡೆದು ಆ ಬಗ್ಗೆಯೂ ಭಾನುವಾರ ಮಾತನಾಡುತ್ತೇನೆ. ನಮ್ಮ ಸರ್ಕಾರ ಬೀಳಿಸಿ, ಪಕ್ಷ ದ್ರೋಹ ಮಾಡಿ ಹೋಗಿರುವವರ ಬಗ್ಗೆ ನನಗೆ ಅನುಕಂಪ ಬರಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ