ಮೋದಿ ಏಕೆ ರೈತರ ಸಾಲ ಮನ್ನಾ ಮಾಡಿಲ್ಲ ..?

Published : Feb 11, 2019, 10:26 AM IST
ಮೋದಿ ಏಕೆ ರೈತರ ಸಾಲ ಮನ್ನಾ ಮಾಡಿಲ್ಲ ..?

ಸಾರಾಂಶ

ರಾಜ್ಯದಲ್ಲಿ ಸರ್ಕಾರ ರೈತರ ಸಾಲ ಮನ್ನಾ ಮಾಡಿದ್ದು, ಆದರೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುತ್ತಾರೆ. ಹುಬ್ಬಳ್ಳಿಗೆ ಆಗಮಿಸಿದ್ದ ಮೋದಿ ರಫೇಲ್ ಡೀಲ್ ಬಗ್ಗೆ ಏಕೆ ಮಾತನಾಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 

ಮೋದಿ ಏಕೆ ರೈತರ ಸಾಲ ಮನ್ನಾ ಮಾಡಿಲ್ಲ..? ರೈತರ ಸಾಲಮನ್ನಾ ಮಾಡುವಂತೆ ಎರಡು ಬಾರಿ ನಿಯೋಗ ಹೋಗಿದ್ದೆ. ಆದರೂ ಅವರು ಇದುವರೆಗೆ ರೈತರ ಸಾಲಮನ್ನಾ ಮಾಡಿಲ್ಲ. ನಾವು ಈ ವರ್ಷದ ಬಜೆಟ್‌ನಲ್ಲಿ ಸಾಲಮನ್ನಾಗಾಗಿ ಹಣ ಮೀಸಲಿಟ್ಟಿದ್ದೇವೆ. ಆದರೆ ಮೋದಿಗೆ ಸುಳ್ಳು ಹೇಳುವುದನ್ನು ಬಿಟ್ಟರೆ ಬೇರೇನು ತಿಳಿದಿಲ್ಲ ಎಂದರು. 

ಅತೃಪ್ತರ ಬಗ್ಗೆ  ಪ್ರಸ್ತಾಪ : ರಾಜ್ಯ ಬಜೆಟ್ ಅಧಿವೇಶನಕ್ಕೆ ಗೈರಾಗಿದ್ದ ನಾಲ್ವರು ಅತೃಪ್ತ ಶಾಸಕರ ಬಗ್ಗೆ ಪ್ರಸ್ತಾಪಿಸಿದ ಸಿದ್ದರಾಮಯ್ಯ ಅಧಿವೇಶನಕ್ಕೆ ಬರದ ನಾಲ್ವರನ್ನು ಡಿಸ್ ಕ್ವಾಲಿಫೈ ಮಾಡಲು ಸ್ಪೀಕರ್ ಗೆ ಮನವಿ ಮಾಡುತ್ತೇವೆ ಎಂದರು. 

ಬಿಎಸ್ ವೈ ವಿರುದ್ಧ ವಾಗ್ದಾಳಿ : ಇತ್ತ ಆಪರೇಷನ್ ಕಮಲ ಮಾಡಲು ಬಿಎಸ್ ವೈ ಯತ್ನಿಸಿದ್ದಾರೆ ಎನ್ನಲಾದ ಆಡಿಯೋ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು. ಅವರಿಗೆ ಸಾರ್ವಜನಿಕ ಜೀವನದಲ್ಲಿ ಇರಲು ನೈತಿಕತೆ ಇಲ್ಲ ಎಂದರು. 

ತಮ್ಮ ಧ್ವನಿಯನ್ನು ಮಿಮಿಕ್ರಿ ಮಾಡಲಾಗಿದೆ, ನನ್ನ ಧ್ವನಿ ಸಾಬೀತುಪಡಿಸಿದರೆ ರಾಜಿನಾಮೆ ನೀಡುತ್ತೇನೆ ಎಂದಿದ್ದರು. ಆದರೆ ಬಳಿಕ ಈ ಧ್ವನಿ ತಮ್ಮದೇ ಎಂದು ಒಪ್ಪಿಕೊಂಡಿದ್ದಾರೆ. ಶರಣಗೌಡಗೆ 10 ಕೋಟಿ ಕೊಡುತ್ತೇನೆ ಮಂತ್ರಿ ಮಾಡುತ್ತೇವೆ ಎಂದು ಆಮಿಷ ಒಡ್ಡಿದ್ದಾರೆ, ಇದು ಕದುರೆ ವ್ಯಾಪಾರವಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. 

ಅಲ್ಲದೇ ಓರ್ವ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು  ಶಾಸಕರುಗಳನ್ನು ಕೊಂಡುಕೊಳ್ಳಲು ಹೊರಟಿದ್ದಾರೆ. ಇಂತವರು ಸಾರ್ವಜನಿಕ ಜೀವನದಲ್ಲಿ ಇರಲು ನಾಲಾಯಕ್ ಎಂದು ಸಿದ್ದರಾಮಯ್ಯ ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Davanagere South by election results 2026: ಇಂದು ಮತ ಎಣಿಕೆ ಹಿನ್ನೆಲೆ 'ಶುಷ್ಕ ದಿವಸ' ಘೋಷಣೆ, ಯಾವಕ್ಕೆಲ್ಲ ನಿರ್ಬಂಧ?
ದಕ್ಷಿಣಕ್ಕೆ ಸಮರ್ಥ ಆಯ್ಕೆಯೋ?, ಶ್ರೀನಿವಾಸ ಕಲ್ಯಾಣವೋ?! SDPI ಅಭ್ಯರ್ಥಿ ಅಫ್ಸರ್‌ ಸ್ಪರ್ಧೆಯಿಂದ 'ಕೊಡ್ಲಿ ಪೆಟ್ಟು' ಯಾರಿಗೆ?