ಮೋದಿ ನರಕ ತೋರಿಸ್ತಿದ್ದಾರೆ : ಅವರು ಕಳಪೆ ಪ್ರಧಾನಿ

Kannadaprabha News   | Asianet News
Published : Jun 12, 2021, 07:35 AM ISTUpdated : Jun 12, 2021, 07:49 AM IST
ಮೋದಿ ನರಕ ತೋರಿಸ್ತಿದ್ದಾರೆ : ಅವರು ಕಳಪೆ ಪ್ರಧಾನಿ

ಸಾರಾಂಶ

ನರೇಂದ್ರ ಮೋದಿ ಅವರು ಜನರ ರಕ್ತ ಕುಡಿಯುವ ತಿಗಣೆಯಾಗಿ ನರಕ ತೋರುತ್ತಿದ್ದಾರೆ.  ಕೊರೋನಾ ಸಂಕಷ್ಟದಲ್ಲಿರುವ ಜನರನ್ನು ಪೆಟ್ರೋಲ್‌-ಡೀಸೆಲ್‌ ಬೆಲೆ ಹೆಚ್ಚಳದ ಮೂಲಕ ಸುಲಿಗೆ  ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ  ಕಿಡಿ

ಬೆಂಗಳೂರು (ಜೂ.12):   ಅಚ್ಛೇ ದಿನ್‌ ಭರವಸೆ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನರ ರಕ್ತ ಕುಡಿಯುವ ತಿಗಣೆಯಾಗಿ ನರಕ ತೋರುತ್ತಿದ್ದಾರೆ. ಕೊರೋನಾ ಸಂಕಷ್ಟದಲ್ಲಿರುವ ಜನರನ್ನು ಪೆಟ್ರೋಲ್‌-ಡೀಸೆಲ್‌ ಬೆಲೆ ಹೆಚ್ಚಳದ ಮೂಲಕ ಸುಲಿಗೆ ಮಾಡುತ್ತಿರುವ ನರೇಂದ್ರ ಮೋದಿಗೆ ನಾಚಿಕೆ ಆಗಬೇಕು ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

ಪೆಟ್ರೋಲ್‌ ಬೆಲೆ 100 ರು. ಗಡಿ ದಾಟಿದ ಹಿನ್ನೆಲೆಯಲ್ಲಿ ದರ ಏರಿಕೆ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್‌ ಹಮ್ಮಿಕೊಂಡಿರುವ ‘100 ನಾಟೌಟ್‌’ ಪ್ರತಿಭಟನಾ ಅಭಿಯಾನದಲ್ಲಿ ಭಾಗವಹಿಸಿ ಶುಕ್ರವಾರ ಮಾತನಾಡಿದ ಅವರು, ಮೋದಿ ಅವರೊಬ್ಬ ಕಳಪೆ ಪ್ರಧಾನಮಂತ್ರಿ ಎಂದು ಟೀಕಿಸಿದರು.

'ಗಾರು' ಎಂದ ಪ್ರತಾಪ್‌ಗೆ ಸಿದ್ದರಾಮಯ್ಯ ಕೊಟ್ಟ ರಿಯಾಕ್ಷನ್!

ಅಗತ್ಯ ವಸ್ತುಗಳು, ಅಡುಗೆ ಅನಿಲ, ಪೆಟ್ರೋಲ್‌-ಡೀಸೆಲ್‌ ಎಲ್ಲ ಬೆಲೆ ಹೆಚ್ಚಾಗುತ್ತಿದೆ. ಪೆಟ್ರೋಲ್‌, ಡೀಸೆಲ್‌ ಮೇಲೆ ಅತಿ ಹೆಚ್ಚು ತೆರಿಗೆ ವಿಧಿಸುವ ಮೂಲಕ ಮೋದಿ ಜನರ ಸುಲಿಗೆ ಮಾಡುತ್ತಿದ್ದಾರೆ. ಬೈಕ್‌ನಲ್ಲಿ ಓಡಾಡುವ ಯುವಕರು ಅಚ್ಛೇ ದಿನ್‌ ಬರುತ್ತದೆ ಎನ್ನುತ್ತಿದ್ದರು. ಈಗ ಅವರೇ ಶಾಪ ಹಾಕುತ್ತಿದ್ದಾರೆ ಎಂದರು.

ರಾವಣನ ಶ್ರೀಲಂಕಾದಲ್ಲಿ ಪೆಟ್ರೋಲ್‌ ದರ 59 ರು., ರಾಮನ ಭಾರತದಲ್ಲಿ ಬೆಲೆ 100 ರು. ಇದೆ. ರಾವಣ ರಾಜ್ಯ ಬಡವರ ಪರವಾಗಿದೆ. ರಾಮ ರಾಜ್ಯದಲ್ಲಿ ಬಡವರ ರಕ್ತ ಹೀರಲಾಗುತ್ತಿದೆ. ರಾಮನ ಹೆಸರು ಹೇಳುವ ಬಿಜೆಪಿಯವರಿಗೆ ಸಾಮಾನ್ಯ ಜನರ ಕಷ್ಟಅರ್ಥ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಮೋದಿಯೇ ಈ ಹಿಂದೆ ಬೆಲೆ ಏರಿಕೆಯನ್ನು ವಿರೋಧಿಸಿದ್ದರು. ಸಾಮಾನ್ಯ ಜನರು ಸಣ್ಣ ವಾಹನ ಇಟ್ಟುಕೊಂಡಿರುತ್ತಾರೆ. ಅವರ ಪರಿಸ್ಥಿತಿ ಏನು? ಲಾಕ್‌ ಡೌನ್‌ನಿಂದ ಅನೇಕ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಉತ್ಪಾದನೆ ನಿಂತು ಹೋಗಿದೆ. ಇಂಧನ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆಯೂ ಏರಿಕೆ ಆಗುತ್ತದೆ. ಕೇಂದ್ರ ಸರ್ಕಾರ ಇಂತಹ ಸಂಧರ್ಭದಲ್ಲೂ ಕಟುಕತನದಿಂದ ವರ್ತಿಸಿದರೆ ಬಡವರು ಬದುಕುವುದು ಹೇಗೆ ಎಂದು ತರಾಟೆಗೆ ತೆಗೆದುಕೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!