ಈಶ್ವರಪ್ಪ ಅಶ್ಲೀಲ ಹೇಳಿಕೆ : ಕಾಂಗ್ರೆಸ್‌ ನಾಯಕರಿಂದ ಆಕ್ರೋಶ

Kannadaprabha News   | Asianet News
Published : Aug 11, 2021, 07:27 AM ISTUpdated : Aug 11, 2021, 07:28 AM IST
ಈಶ್ವರಪ್ಪ ಅಶ್ಲೀಲ ಹೇಳಿಕೆ : ಕಾಂಗ್ರೆಸ್‌ ನಾಯಕರಿಂದ ಆಕ್ರೋಶ

ಸಾರಾಂಶ

ಪ್ರತಿಪಕ್ಷ ಕಾಂಗ್ರೆಸ್‌ನವರನ್ನು ಟೀಕಿಸುವ ಭರದಲ್ಲಿ ಗ್ರಾಮೀಣಾಭಿವೃದ್ಧಿ ಕೆ.ಎಸ್‌.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ಹೇಳಿಕೆ ನೀಡಿದ ಬಳಿಕ ತಪ್ಪಿನ ಅರಿವಾಗಿ ಬಳಕೆ ಮಾಡಿದ ಪದವನ್ನು ಹಿಂಪಡೆದ ಸಚಿವರು

 ಬೆಂಗಳೂರು (ಆ.11):  ಪ್ರತಿಪಕ್ಷ ಕಾಂಗ್ರೆಸ್‌ನವರನ್ನು ಟೀಕಿಸುವ ಭರದಲ್ಲಿ ಗ್ರಾಮೀಣಾಭಿವೃದ್ಧಿ ಕೆ.ಎಸ್‌.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ತಪ್ಪಿನ ಅರಿವಾಗಿ ಬಳಕೆ ಮಾಡಿದ ಪದವನ್ನು ಹಿಂಪಡೆದ ಘಟನೆ ನಡೆದಿದೆ.

ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡುತ್ತಿದ್ದ ವೇಳೆ ಸಚಿವ ಈಶ್ವರಪ್ಪ ಅವರು ಜೋಕರ್‌ ಎಂದು ತಮ್ಮ ಹೆಸರು ಬದಲಿಸಿಕೊಳ್ಳಬೇಕು ಎಂಬ ಕಾಂಗ್ರೆಸ್‌ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯೆ ನೀಡುವ ಭರದಲ್ಲಿ ಅವರು, ‘ಯಾರೋ ಕುಡುಕ .... ಮಕ್ಕಳು ಹೇಳುತ್ತಾರೆ’ ಎಂದು ಅವಾಚ್ಯ ಶಬ್ದ ಬಳಕೆ ಮಾಡಿದರು. ನಂತರ ತಮ್ಮ ತಪ್ಪಿನ ಅರಿವಾಗಿ ಆ ಪದವನ್ನು ಹಿಂಪಡೆದರು. ಮಾತ್ರವಲ್ಲ, ಆ ಪದ ಹಠಾತ್‌ ಆಗಿ ಬಂದಿದೆ. ಅದನ್ನು ವಿವಾದ ಮಾಡಬೇಡಿ ಎಂದು ಕೋರಿದರು.

ಹೊಡೆದು ಒಂದಕ್ಕೆ ಎರಡು ತೆಗೆದುಬಿಡಿ, ಪ್ರತೀಕಾರದ ಕಿಚ್ಚು ಹೊತ್ತಿಸಿದ ಈಶ್ವರಪ್ಪ

ಒಂದು ಕಾಲದಲ್ಲಿ ಜನಸಂಘದಲ್ಲಿ ಶಕ್ತಿ ಇರಲಿಲ್ಲ. ರೈಲ್ವೆ ಫ್ಲಾಟ್‌ಫಾರಂ ಮೇಲೆ ಕೊಲೆ ಮಾಡಿ ಹಾಕಿದ್ದ ಕಾಲ ಇತ್ತು. ಆಗ ನಮಗೆ ಶಕ್ತಿ ಇರಲಿಲ್ಲ. ಏನೇ ಆದರೂ ಸುಮ್ಮನಿರಿ ಎಂದು ಹಿರಿಯರು ಹೇಳುತ್ತಿದ್ದರು. ಅದನ್ನು ನಾನು ಉಲ್ಲೇಖ ಮಾಡಿದ್ದೇನೆ ಅಷ್ಟೇ. ಈಗ ನಮಗೆ ಶಕ್ತಿ ಬಂದಿದೆ. ನಾವು ಯಾರ ತಂಟೆಗೆ ಹೋಗುವುದು ಬೇಡ. ನಮ್ಮ ತಂಟೆಗೆ ಬಂದರೆ ಸುಮ್ಮಿನಿರುವುದು ಬೇಡ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಇದನ್ನು ವಿವಾದ ಮಾಡುವುದು ಸರಿಯಲ್ಲ, ಇಲ್ಲಿಗೆ ನಿಲ್ಲಿಸೋಣ. ಆದರೂ ವಿವಾದ ಮಾಡುತ್ತೇವೆ ಎಂದರೆ ನನಗೇನು ಅಭ್ಯಂತರ ಇಲ್ಲ ಎಂದು ಹೇಳಿದರು.

'ಸಿದ್ದರಾಮಯ್ಯ ದೇಶದಲ್ಲೇ ಅತ್ಯಂತ ಕೆಟ್ಟ ಕನಸುಗಾರ'

ಕೇಸ್‌ ವಾಪಸ್‌ಗೆ ಬೆಂಬಲ:

ಹಿಂದೂ ಕಾರ್ಯಕರ್ತರ ಮೇಲಿನ ಪ್ರಕರಣ ವಾಪಸ್‌ಗೆ ನನ್ನ ಬೆಂಬಲ ಇದೆ ಎಂದು ಹೇಳಿದ ಅವರು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಗೋವಿನ ವಿಚಾರದಲ್ಲಿ ಹಲವು ಪ್ರಕರಣಗಳನ್ನು ಹಾಕಿದ್ದರು. ದಕ್ಷಿಣ ಕನ್ನಡದಲ್ಲಿ ಬೆಳಗಿನ ಜಾವ ಕರುಗಳನ್ನು ಕಳ್ಳತನ ಮಾಡುತ್ತಿದ್ದರು. ಅದನ್ನು ಮಹಿಳೆಯರು ಪ್ರಶ್ನೆ ಮಾಡಿದರೆ, ಚಾಕು ತೋರಿಸಿ ಬೆದರಿಕೆ ಹಾಕುತ್ತಿದ್ದರು. ಕಾಂಗ್ರೆಸ್‌ ಆಡಳಿತದಲ್ಲಿ ಕೋಮುವಾದಿಗಳನ್ನು ಮಟ್ಟಹಾಕುತ್ತೇನೆ ಎಂದು ಹೇಳಿದ್ದರು. ಹೀಗಾಗಿ ಅವರ ಕಾಲದಲ್ಲಿ ಹಲವು ಸುಳ್ಳು ಪ್ರಕರಣಗಳನ್ನು ಹಾಕಲಾಗಿತ್ತು. ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದ ವೇಳೆ ಕೆಲವು ಪ್ರಕರಣಗಳನ್ನು ವಾಪಸ್‌ ಪಡೆದುಕೊಳ್ಳಲಾಗಿದೆ. ಇನ್ನೂ ಕೆಲವು ಪ್ರಕರಣಗಳಿವೆ. ಅವುಗಳನ್ನು ದಾಖಲೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ. ಅದಕ್ಕೆ ನನ್ನ ಬೆಂಬಲ ಇದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗಡೀಪಾರು ಸಂಕಷ್ಟದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ್ ದೇಗುಲದ್ಲಿ ಪ್ರಾರ್ಥನೆ
ಸಿನಿಮಾ ರಿಲೀಸ್‌ಗೂ ಮುನ್ನವೇ ಜೈಲಲ್ಲಿ ಡೆವಿಲ್ ರೂಪ ತಾಳಿದ ದರ್ಶನ್; ಸಹ ಕೈದಿಗಳಿಗೆ ಕಾಲಿನಿಂದ ಒದ್ದು ದುರಹಂಕಾರ!