ರಮೇಶ್‌ ಜಾರಕಿಹೊಳಿಯಿಂದ 819 ಕೋಟಿ ವಂಚನೆ: ಕಾಂಗ್ರೆಸ್‌ ಆರೋಪ

Published : Jun 27, 2022, 05:00 AM IST
ರಮೇಶ್‌ ಜಾರಕಿಹೊಳಿಯಿಂದ 819 ಕೋಟಿ ವಂಚನೆ: ಕಾಂಗ್ರೆಸ್‌ ಆರೋಪ

ಸಾರಾಂಶ

ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸೌಭಾಗ್ಯ ಲಕ್ಷ್ಮೇ ಶುಗರ್‌ ಕಂಪನಿ ಮೂಲಕ ರಾಜ್ಯದ ವಿವಿಧ ಡಿಸಿಸಿ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ 819 ಕೋಟಿ ರು. ಸಾಲ ಪಡೆದು ತೀರಿಸದೆ ವಂಚಿಸುತ್ತಿದ್ದಾರೆ ಎಂದು ಎಂದು ಕಾಂಗ್ರೆಸ್‌ ಗಂಭೀರ ಆರೋಪಿಸಿದೆ. 

ಬೆಂಗಳೂರು (ಜೂ.27): ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸೌಭಾಗ್ಯ ಲಕ್ಷ್ಮೇ ಶುಗರ್‌ ಕಂಪನಿ ಮೂಲಕ ರಾಜ್ಯದ ವಿವಿಧ ಡಿಸಿಸಿ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ 819 ಕೋಟಿ ರು. ಸಾಲ ಪಡೆದು ತೀರಿಸದೆ ವಂಚಿಸುತ್ತಿದ್ದಾರೆ ಎಂದು ಎಂದು ಕಾಂಗ್ರೆಸ್‌ ಗಂಭೀರ ಆರೋಪಿಸಿದೆ. ಸರ್ಕಾರ ಕೂಡಲೇ ಜಾರಕಿಹೊಳಿ ಅವರ ಎಲ್ಲ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ಸಾಲ ಮರುಪಾವತಿಸಿಕೊಳ್ಳಬೇಕು ಎಂದು ಆಗ್ರಹಿಸಿದೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ವಕ್ತಾರ ಲಕ್ಷ್ಮಣ್‌, ಸೌಭಾಗ್ಯ ಲಿಮಿಟೆಡ್‌ನ 6 ಮಂಡಳಿ ನಿರ್ದೇಶಕರಲ್ಲಿ ರಮೇಶ್‌ ಅವರ ಮಗ, ಮಗಳು, ಸೊಸೆ ಸೇರಿ ಅವರ ಕುಟುಂಬದವರೇ ನಾಲ್ವರು ಇದ್ದಾರೆ. ಉಳಿದವರು ಇವರ ಬೇನಾಮಿಗಳು. ಈ ಕಂಪನಿ ವಿವಿಧ ಬ್ಯಾಂಕ್‌ಗಳಿಂದ 578.39 ಕೋಟಿ ರು.ಸಾಲ ಪಡೆದಿದೆ. ಈ ಕಂಪನಿ ನಡೆಸುತ್ತಿರುವ ಅಭಿನಂದನ್‌ ಪಾಟೀಲ್‌, ಜಾರಕಿಹೊಳಿ ಅವರ ಬೇನಾಮಿದಾರ. ಸಾಲ ಕಟ್ಟುವಿಕೆ ತಪ್ಪಿಸಲು ಕಂಪನಿ ದಿವಾಳಿಯಾಗಿದೆ ಎಂದು ಘೋಷಿಸಿದ್ದಾರೆ. ಆದರೆ ಇನ್ನೂ ಸಕ್ಕರೆ ಉತ್ಪಾದಿಸುತ್ತಿದೆ ಎಂದು ದೂರಿದರು.

ಮಹಾರಾಷ್ಟ್ರ ರಾಜಕೀಯ ಬೆಳವಣಿಗೆ ಹಿಂದೆ ಜಾರಕಿಹೊಳಿ ಕೈವಾಡ?

ಸಹಕಾರಿ ಬ್ಯಾಂಕ್‌ಗಳಲ್ಲಿ ರಮೇಶ್‌ ಜಾರಕಿಹೊಳಿ ಕೋಟ್ಯಂತರ ಸಾಲ ಬಾಕಿ: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ರಾಜ್ಯದ ವಿವಿಧ ಸಹಕಾರಿ ಬ್ಯಾಂಕ್‌ಗಳಲ್ಲಿ ಕೋಟ್ಯಂತರ ರು. ಸಾಲ ಬಾರಿ ಉಳಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಮಂಗಳವಾರ ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ವೇಳೆ ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ.  ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ, ಶಿವಸಾಗರ ಸಹಕಾರಿ ಸಕ್ಕರೆ ಕಾರ್ಖಾನೆ, ಸವರಿನ್‌ ಇಂಡಸ್ಟ್ರೀಸ್‌ ಸೇರಿ​ದಂತೆ ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ ನಾಲ್ಕು ಸಕ್ಕರೆ ಕಾರ್ಖಾನೆಗಳು ಡಿಫಾಲ್ಟ್‌ಗಳಿವೆ. 

ರಮೇಶ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ ಸಾಲ ಪಡೆದಿಲ್ಲ. ವಿಜಯಪುರ, ಶಿರಸಿ, ತುಮಕೂರು, ಮಂಗಳೂರಿನಲ್ಲಿ ರಮೇಶ ಜಾರಕಿಹೊಳಿ ಸಾಲ ಪಡೆದಿದ್ದು ಎರಡು ವರ್ಷದಿಂದ ಬಡ್ಡಿಯನ್ನೂ ಮರುಪಾವತಿ ಮಾಡಿಲ್ಲ. ಈಗಾಗಲೇ ಹಲವು ಬಾರಿ ಅವರಿಗೆ ನೋಟಿಸ್‌ ನೀಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ವಿಜಯಪುರ ಡಿಸಿಸಿ ಬ್ಯಾಂಕ್‌ನಲ್ಲಿ ಸಾಲ ಪಡೆದಿರುವ ಲಕ್ಷ್ಮೀ ಹೆಬ್ಬಾಳಕರ ಸಾಲ ಮತ್ತು ಬಡ್ಡಿಯನ್ನು ಮರುಪಾವತಿ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದ್ದಾರೆ. 

BJP Politics: ರಮೇಶ ಜಾರಕಿಹೊಳಿ ಸಚಿವರಾಗ್ತಾರೆ ಯಾರದ್ದೂ ವಿರೋಧವಿಲ್ಲ: ಕಟೀಲ್‌

ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರ​ಕಿ​ಹೊಳಿ ಅವರ ಒಡೆ​ತ​ನದ ಸೌಭಾಗ್ಯ ಲಕ್ಷ್ಮಿ ಸಕ್ಕರೆ ಕಾರ್ಖಾನೆಯು ನೂರಾರು ಕೋಟಿ ರು. ಬಾಕಿ ಉಳಿ​ಸಿ​ಕೊಂಡರೂ ಸರ್ಕಾರ ಏನೂ ಕ್ರಮ ಕೈಗೊ​ಳ್ಳು​ತ್ತಿಲ್ಲ ಎಂದು ಕೆಪಿ​ಸಿಸಿ ಅಧ್ಯಕ್ಷ ಡಿ.ಕೆ.​ಶಿ​ವ​ಕು​ಮಾರ ಅವರು ಆರೋ​ಪಿ​ಸಿ​ದ ನಡು​ವೆಯೇ ಎಸ್‌.​ಟಿ.​ ಸೋ​ಮ​ಶೇ​ಖರ ಅವರು ಬೆಳಗಾವಿಯಲ್ಲಿ ಸಭೆ ನಡೆಸಿ ಸಾಲ ಮರು​ಪಾ​ವತಿ, ಸಾಲ ನೀಡಿ​ರು​ವ ವಿವರ, ಬಡ್ಡಿ ಸೇರಿ​ದಂತೆ ಯಾರಾರ‍ಯರು ಸುಸ್ತಿ​ದಾ​ರ​ರಿ​ದ್ದಾರೆ ಎಂಬ ಮಾಹಿ​ತಿ​ಯನ್ನು ಪಡೆ​ದು​ಕೊಂಡಿ​ದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ